<p><strong>ಬೆಂಗಳೂರು:</strong> ತಮ್ಮ ಪತ್ನಿಯ ಆರೋಗ್ಯದಲ್ಲಿ ಏರಪೇರು ಉಂಟಾಗಿರುವ ಕಾರಣ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ತಡ ರಾತ್ರಿ ದಿಢೀರ್ ಆಗಿ ಇಂದೋರ್ ತೆರಳಿದ್ದಾರೆ. ಅವರ ಮರಳಿ ಬರುವ ಸಮಯ ನಿಗದಿ ಆಗಿಲ್ಲ ಎಂದು ಲೋಕಭವನದ ಮೂಲಗಳು ತಿಳಿಸಿವೆ.</p><p>ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಪದತ್ಯಾಗಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜಪಾಲರಿಗೆ ರಾಜೀನಾಮೆ ಪತ್ರ ನೀಡಲು ನಿರ್ಧರಿಸಿದ್ದಾರೆ. ಖುದ್ದು ಭೇಟಿಗೆ ರಾಜ್ಯಪಾಲರು ಲಭ್ಯ ಇಲ್ಲದೇ ಇರುವುದರಿಂದ ಅವರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ.</p><p>‘ರಾಜ್ಯಪಾಲರ ಪತ್ನಿ ಅನಾರೋಗ್ಯಗೊಂಡಿರುವ ಮಾಹಿತಿ ಬುಧವಾರ ರಾತ್ರಿ ಬಂತು. ತಕ್ಷಣವೆ ರಾಜ್ಯಪಾಲರು ಇಂದೋರ್ಗೆ ತೆರಳಿದ್ದಾರೆ. ಪತ್ನಿಯ ಆರೋಗ್ಯ ಸುಧಾರಿಸಿದ ನಂತರವೇ ಅವರ ವಾಪಸ್ ಆಗಬಹುದು. ಈ ಬಗ್ಗೆ ಖಚಿತ ಮಾಹಿತಿ ಇಲ್ಲ’ ಎಂದು ಲೋಕಭವನದ ಮೂಲಗಳು ಹೇಳಿವೆ.</p><p>‘ಸಿದ್ದರಾಮಯ್ಯ ಅವರು ಲೋಕಭವನಕ್ಕೆ ಬಂದು ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಬಹುದು. ಅದನ್ನು ಲೋಕಭವನದಿಂದ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರ ಅಲ್ಲಿಂದಲೇ (ಇಂದೋರ್) ಈ ಬಗ್ಗೆ ಮುಂದಿನ ಕ್ರಮವನ್ನು ಸೂಚಿಸಬಹುದು. ಇಂದೋರ್ನಿಂದ ವಾಪಸ್ ಬಂದ ಬಳಿಕ ಸಿದ್ದರಾಮಯ್ಯ ಅವರನ್ನು ಲೋಕಭವನಕ್ಕೆ ಕರೆಸಿಕೊಂಡು ರಾಜ್ಯಪಾಲರು ಮಾತುಕತೆ ನಡೆಸಬಹುದು’ ಎಂದೂ ಮೂಲಗಳು ಹೇಳಿವೆ.</p>.ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ ಇಂದು.ಕಲಬುರಗಿ–ಬೆಂಗಳೂರು ಸ್ಟಾರ್ ಏರ್ ವಿಮಾನ ಸಂಚಾರ: ಸಮಯ ಬದಲಾವಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಮ್ಮ ಪತ್ನಿಯ ಆರೋಗ್ಯದಲ್ಲಿ ಏರಪೇರು ಉಂಟಾಗಿರುವ ಕಾರಣ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ತಡ ರಾತ್ರಿ ದಿಢೀರ್ ಆಗಿ ಇಂದೋರ್ ತೆರಳಿದ್ದಾರೆ. ಅವರ ಮರಳಿ ಬರುವ ಸಮಯ ನಿಗದಿ ಆಗಿಲ್ಲ ಎಂದು ಲೋಕಭವನದ ಮೂಲಗಳು ತಿಳಿಸಿವೆ.</p><p>ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಪದತ್ಯಾಗಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜಪಾಲರಿಗೆ ರಾಜೀನಾಮೆ ಪತ್ರ ನೀಡಲು ನಿರ್ಧರಿಸಿದ್ದಾರೆ. ಖುದ್ದು ಭೇಟಿಗೆ ರಾಜ್ಯಪಾಲರು ಲಭ್ಯ ಇಲ್ಲದೇ ಇರುವುದರಿಂದ ಅವರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ.</p><p>‘ರಾಜ್ಯಪಾಲರ ಪತ್ನಿ ಅನಾರೋಗ್ಯಗೊಂಡಿರುವ ಮಾಹಿತಿ ಬುಧವಾರ ರಾತ್ರಿ ಬಂತು. ತಕ್ಷಣವೆ ರಾಜ್ಯಪಾಲರು ಇಂದೋರ್ಗೆ ತೆರಳಿದ್ದಾರೆ. ಪತ್ನಿಯ ಆರೋಗ್ಯ ಸುಧಾರಿಸಿದ ನಂತರವೇ ಅವರ ವಾಪಸ್ ಆಗಬಹುದು. ಈ ಬಗ್ಗೆ ಖಚಿತ ಮಾಹಿತಿ ಇಲ್ಲ’ ಎಂದು ಲೋಕಭವನದ ಮೂಲಗಳು ಹೇಳಿವೆ.</p><p>‘ಸಿದ್ದರಾಮಯ್ಯ ಅವರು ಲೋಕಭವನಕ್ಕೆ ಬಂದು ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಬಹುದು. ಅದನ್ನು ಲೋಕಭವನದಿಂದ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರ ಅಲ್ಲಿಂದಲೇ (ಇಂದೋರ್) ಈ ಬಗ್ಗೆ ಮುಂದಿನ ಕ್ರಮವನ್ನು ಸೂಚಿಸಬಹುದು. ಇಂದೋರ್ನಿಂದ ವಾಪಸ್ ಬಂದ ಬಳಿಕ ಸಿದ್ದರಾಮಯ್ಯ ಅವರನ್ನು ಲೋಕಭವನಕ್ಕೆ ಕರೆಸಿಕೊಂಡು ರಾಜ್ಯಪಾಲರು ಮಾತುಕತೆ ನಡೆಸಬಹುದು’ ಎಂದೂ ಮೂಲಗಳು ಹೇಳಿವೆ.</p>.ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ ಇಂದು.ಕಲಬುರಗಿ–ಬೆಂಗಳೂರು ಸ್ಟಾರ್ ಏರ್ ವಿಮಾನ ಸಂಚಾರ: ಸಮಯ ಬದಲಾವಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>