<p><strong>ಬೆಂಗಳೂರು: </strong>ಧಾರವಾಡ ಜಿಲ್ಲೆಯ ಡಾ. ಎಸ್.ಆರ್. ಗುಂಜಾಳ ಅವರು 2024–25ನೇ ಸಾಲಿನ ಬವಸ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. </p><p>ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಇಂದು (ಗುರುವಾರ) ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ. </p>.<p><strong>ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಕೆ. ರಾಜಕುಮಾರ್</strong></p><p>ಕೆ. ರಾಜಕುಮಾರ್ ಅವರು ಕಳೆದ 45 ವರ್ಷಗಳಿಂದ ನಾಡು-ನುಡಿ, ನೆಲ-ಜಲ-ಸಂಸ್ಕೃತಿಯ ಕುರಿತು ನಿರಂತರವಾಗಿ ಸೇವೆ ಸಲ್ಲಿಸುತ್ತಾ, ಅವುಗಳ ಸಂರಕ್ಷಣೆಗಾಗಿ ಹಲವಾರು ಹೋರಾಟಗಳಲ್ಲಿ ಹಾಗೂ ವಿವಿಧ ಚಳವಳಿಗಳಲ್ಲಿ ಭಾಗಿಯಾಗಿರುತ್ತಾರೆ. </p><p>ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕುವೆಂಪು ಭಾಷಾಭಾರತಿ ಪ್ರಾಧಿಕಾರಗಳಲ್ಲಿ ಪ್ರಶಸ್ತಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. </p><p>ಕನ್ನಡ ಅನುಷ್ಠಾನದ ಕುರಿತಾದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಆಡಳಿತ ಕನ್ನಡ ಕಾರ್ಯಶಿಬಿರಗಳ ನಿರ್ದೇಶಕರಾಗಿ, ಕನ್ನಡ ಬಾರದವರಿಗೆ ಕನ್ನಡ ಬೋಧನೆ ತರಗತಿಗಳನ್ನು ನಡೆಸಿದ್ದಾರೆ. </p><p>ಇಂದಿಗೂ ಕನ್ನಡ ಭಾಷೆಯ ಕುರಿತಂತೆ ಕರೆಮಾಡಿ ಮಾಹಿತಿ ಕೋರುವವರಿಗೆ ಉಚಿತ ಮಾರ್ಗದರ್ಶನ ನೀಡುತ್ತಿದಾರೆ. </p><p>ಇವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ, ನಾಡಪ್ರಭು ಕೆಂಪೇಗೌಡ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಪ್ರಕಾಶಕರ ಸಂಘದಿಂದ ಶ್ರೇಷ್ಠ ಸಾಹಿತ್ಯ ಪರಿಚಾರಕ ಪ್ರಶಸ್ತಿ ಇತ್ಯಾದಿ ಗೌರವಗಳು ಲಭಿಸಿವೆ.</p>.<p><strong>ಅಕ್ಕಮಹಾದೇವಿ ಪ್ರಶಸ್ತಿ: ಡಾ. ಹೇಮಾ ಪಟ್ಟಣಶೆಟ್ಟಿ, ಧಾರವಾಡ</strong></p><p>ಡಾ. ಹೇಮಾ ಪಟ್ಟಣಶೆಟ್ಟಿಯವರು ಕನ್ನಡ ಸಾಹಿತ್ಯಲೋಕದಲ್ಲಿ ಹೆಸರಾಂತ ಲೇಖಕಿಯಾಗಿ, ಅನುವಾದಕಿಯಾಗಿ, ರಂಗನಟಿಯಾಗಿ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿ ಪ್ರಸಿದ್ಧರಾಗಿದ್ದಾರೆ. 1979 ರಲ್ಲಿ ಅನನ್ಯ ಪ್ರಕಾಶನವನ್ನು ಸ್ಥಾಪಿಸಿ ಕನ್ನಡದ ಖ್ಯಾತ ಲೇಖಕರ 85 ಕೃತಿಗಳನ್ನು ಪ್ರಕಟಿಸಿದ್ದಾರೆ. </p><p>ನೊಂದ ಮಹಿಳೆಯರಿಗಾಗಿ ʼಸಾಂತ್ವನʼ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಅನೇಕ ಮಹಿಳಾಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ. </p><p>ಇವರು ʼವೇಶ್ಯೆಯರು, ಬಾಲವೇಶ್ಯೆಯರು ಮತ್ತು ವೇಶ್ಯಾಮಕ್ಕಳ ಅಧ್ಯಯನʼ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಕರ್ನಾಟಕದ ಸರ್ಕಾರದ ʼಜಲಸಂವರ್ಧನೆ ಯೋಜನಾ ಕೇಂದ್ರʼದ ಆಡಳಿತ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. </p><p>ಇವರ ಹಲವಾರು ಕೃತಿಗಳು ಹಿಂದಿ, ತೆಲುಗು, ಉರ್ದು, ಇಂಗ್ಲಿಷ್ ಮತ್ತು ಗುಜರಾತಿ ಭಾಷೆಗಳಿಗೆ ಅನುವಾದವಾಗಿವೆ.</p>.<p><strong>ಪಂಪ ಪ್ರಶಸ್ತಿ: ಡಾ. ಬಿ.ಎ. ವಿವೇಕ ರೈ, ದಕ್ಷಿಣ ಕನ್ನಡ</strong></p><p>ಕನ್ನಡದ ಖ್ಯಾತ ಸಂಶೋಧಕರಾದ ಡಾ. ಬಿ.ಎ. ವಿವೇಕ ರೈ ಅವರು ಸಂಸ್ಕೃತಿ ಚಿಂತಕರು, ವಿಮರ್ಶಕರು, ಅನುವಾದಕರು ಹಾಗೂ ಜಾನಪದ ವಿದ್ವಾಂಸರಾಗಿದ್ದಾರೆ. </p><p>ಕಳೆದ 54 ವರ್ಷಗಳಿಂದ ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ-ತುಳು ಭಾಷೆಯ ಭಾಷಾ ಅಧ್ಯಯನದ ಮಾದರಿಗಳನ್ನು ರೂಪಿಸುವ ಮೂಲಕ ಆ ಭಾಷೆಗಳ ಆಂತರಿಕ ಶಕ್ತಿ-ಸಂಪತ್ತನ್ನು ಸಂವರ್ಧಿಸಿದ ವಿದ್ವಾಂಸರು. </p><p>12ಕ್ಕೂ ಹೆಚ್ಚು ಮಹತ್ವದ ಕೃತಿಗಳು, ಕಾದಂಬರಿಗಳು, ಹಲವಾರು ಕೃತಿಗಳ ಸಂಪಾದನೆ, ತುಳು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಾಹಿತ್ಯ ರಚನೆ, ಕನ್ನಡ ಸಾಹಿತ್ಯದ ಜರ್ಮನ್ ಅನುವಾದ ಹೀಗೆ ವಿಪುಲವಾಗಿ ಸಾಹಿತ್ಯ ಸೇವೆ ಮಾಡಿದ್ದಾರೆ. ಜರ್ಮನಿಯ ವ್ಯೂತ್ಬರ್ಗ್ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರಾಗಿದ್ದಾರೆ. </p><p>ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ, ಸಮ್ಮಾನಗಳು ಲಭಿಸಿವೆ.</p>.<p><strong>ಪ್ರೊ.ಕೆ.ಜಿ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಸ. ರಘುನಾಥ, ಕೋಲಾರ</strong></p><p>ವಿಶ್ರಾಂತ ಶಾಲಾಶಿಕ್ಷಕರಾದ ಶ್ರೀ ಸ. ರಘುನಾಥರವರು ಬಹುಮುಖ ಪ್ರತಿಭೆ, ಬಹುಸ್ತರಗಳ ಸಾಧಕ. ಅಧ್ಯಯನ, ಅಧ್ಯಾಪನಗಳ ಜೊತೆಗೆ ಸಾಹಿತ್ಯಕೃಷಿಯನ್ನೂ ಮೈಗೂಡಿಸಿಕೊಂಡವರು. </p><p>ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜನಪದ ಸಾಹಿತ್ಯ ಸಂಗ್ರಹ, ಗ್ರಂಥ ಸಂಪಾದನೆ, ಶಿಶುಸಾಹಿತ್ಯ ಮತ್ತು ನಿಘಂಟು ರಚನೆಗಳಲ್ಲಿ ತೊಡಗಿಕೊಂಡಿದ್ದಾರೆ. ಸಮಾಜಸೇವಕರು, ಪರಿಸರ ಪ್ರೇಮಿಗಳು, ಕಲಾಸಂಘಟಕರೂ ಹೌದು. </p><p>ಮುದ್ದಣ ಕಾವ್ಯ ಪ್ರಶಸ್ತಿ, ಅನುವಾದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತಿತರ ಪ್ರಶಸ್ತಿಗಳಿಗೆ ಭಾಜನರು.</p>.<p><strong>ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಡಾ. ವೈ.ಸಿ. ಭಾನುಮತಿ, ಹಾಸನ</strong></p><p>ಡಾ. ವೈ.ಸಿ. ಭಾನುಮತಿಯವರು ಪ್ರಾಚೀನ ಸಾಹಿತ್ಯ ಮತ್ತು ಜಾನಪದ ಗ್ರಂಥ ಸಂಪಾದನೆ ಜೊತೆಗೆ ಸಂಶೋಧನಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. </p><p>ಜಾನಪದ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಹಲವಾರು ಗೌರವ-ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. </p><p>ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಇತ್ಯಾದಿ ಪ್ರಶಸ್ತಿಗಳು ಇವರಿಗೆ ಸಂದಿವೆ.</p>.<p><strong>ಬಿ.ವಿ. ಕಾರಂತ ಪ್ರಶಸ್ತಿ: ಶ್ರೀ ಜೆ. ಲೋಕೇಶ್, ಬೆಂಗಳೂರು</strong></p><p>ಶ್ರೀ ಜೆ. ಲೋಕೇಶ್ರವರು ರಂಗ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿ 1972 ರಲ್ಲಿ ʼರಂಗಸಂಪದʼ ನಾಟಕ ಸಂಸ್ಥೆಯನ್ನು ಕಟ್ಟಿಬೆಳೆಸಿದವರಲ್ಲಿ ಒಬ್ಬರು. </p><p>ಶಕಶೈಲೂಷರು ಶಿಬಿರಾರ್ಥಿಗಳ ತಂಡ ಕಟ್ಟಿ ಹಲವಾರು ರಂಗನಾಟಕಗಳ ಯಶಸ್ವೀ ರಂಗಪ್ರಯೋಗ ಮಾಡಿದ್ದಾರೆ. ರಾಜ್ಯಾದ್ಯಂತ ನಾಟಕೋತ್ಸವಗಳನ್ನು ಏರ್ಪಡಿಸಿ ಪ್ರದರ್ಶಿಸಿದ ಕೀರ್ತಿ ಇವರದು. </p><p>ನಾಟಕದ ಸಾಹಿತ್ಯ ರಚನೆ, ಪ್ರಕಟಣೆ, ಪ್ರಯೋಗ, ಸಂಕಿರಣ, ಪ್ರದರ್ಶನ ಸಮ್ಮೇಳನ ಚಳವಳಿಗಳ ರೂವಾರಿಗಳು. ಕೆನಡಾದಲ್ಲಿ ನಡೆದ 21ನೇ ಅಂತಾರಾಷ್ಟ್ರೀಯ ರಂಗಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಹಾಗೂ ಮತ್ತಿತರ ಪ್ರಶಸ್ತಿಗಳಿಗೆ ಭಾಜನರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಧಾರವಾಡ ಜಿಲ್ಲೆಯ ಡಾ. ಎಸ್.ಆರ್. ಗುಂಜಾಳ ಅವರು 2024–25ನೇ ಸಾಲಿನ ಬವಸ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. </p><p>ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಇಂದು (ಗುರುವಾರ) ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ. </p>.<p><strong>ಸಂಗೊಳ್ಳಿ ರಾಯಣ್ಣ ಪ್ರಶಸ್ತಿ: ಕೆ. ರಾಜಕುಮಾರ್</strong></p><p>ಕೆ. ರಾಜಕುಮಾರ್ ಅವರು ಕಳೆದ 45 ವರ್ಷಗಳಿಂದ ನಾಡು-ನುಡಿ, ನೆಲ-ಜಲ-ಸಂಸ್ಕೃತಿಯ ಕುರಿತು ನಿರಂತರವಾಗಿ ಸೇವೆ ಸಲ್ಲಿಸುತ್ತಾ, ಅವುಗಳ ಸಂರಕ್ಷಣೆಗಾಗಿ ಹಲವಾರು ಹೋರಾಟಗಳಲ್ಲಿ ಹಾಗೂ ವಿವಿಧ ಚಳವಳಿಗಳಲ್ಲಿ ಭಾಗಿಯಾಗಿರುತ್ತಾರೆ. </p><p>ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕುವೆಂಪು ಭಾಷಾಭಾರತಿ ಪ್ರಾಧಿಕಾರಗಳಲ್ಲಿ ಪ್ರಶಸ್ತಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. </p><p>ಕನ್ನಡ ಅನುಷ್ಠಾನದ ಕುರಿತಾದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಆಡಳಿತ ಕನ್ನಡ ಕಾರ್ಯಶಿಬಿರಗಳ ನಿರ್ದೇಶಕರಾಗಿ, ಕನ್ನಡ ಬಾರದವರಿಗೆ ಕನ್ನಡ ಬೋಧನೆ ತರಗತಿಗಳನ್ನು ನಡೆಸಿದ್ದಾರೆ. </p><p>ಇಂದಿಗೂ ಕನ್ನಡ ಭಾಷೆಯ ಕುರಿತಂತೆ ಕರೆಮಾಡಿ ಮಾಹಿತಿ ಕೋರುವವರಿಗೆ ಉಚಿತ ಮಾರ್ಗದರ್ಶನ ನೀಡುತ್ತಿದಾರೆ. </p><p>ಇವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ, ನಾಡಪ್ರಭು ಕೆಂಪೇಗೌಡ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಪ್ರಕಾಶಕರ ಸಂಘದಿಂದ ಶ್ರೇಷ್ಠ ಸಾಹಿತ್ಯ ಪರಿಚಾರಕ ಪ್ರಶಸ್ತಿ ಇತ್ಯಾದಿ ಗೌರವಗಳು ಲಭಿಸಿವೆ.</p>.<p><strong>ಅಕ್ಕಮಹಾದೇವಿ ಪ್ರಶಸ್ತಿ: ಡಾ. ಹೇಮಾ ಪಟ್ಟಣಶೆಟ್ಟಿ, ಧಾರವಾಡ</strong></p><p>ಡಾ. ಹೇಮಾ ಪಟ್ಟಣಶೆಟ್ಟಿಯವರು ಕನ್ನಡ ಸಾಹಿತ್ಯಲೋಕದಲ್ಲಿ ಹೆಸರಾಂತ ಲೇಖಕಿಯಾಗಿ, ಅನುವಾದಕಿಯಾಗಿ, ರಂಗನಟಿಯಾಗಿ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿ ಪ್ರಸಿದ್ಧರಾಗಿದ್ದಾರೆ. 1979 ರಲ್ಲಿ ಅನನ್ಯ ಪ್ರಕಾಶನವನ್ನು ಸ್ಥಾಪಿಸಿ ಕನ್ನಡದ ಖ್ಯಾತ ಲೇಖಕರ 85 ಕೃತಿಗಳನ್ನು ಪ್ರಕಟಿಸಿದ್ದಾರೆ. </p><p>ನೊಂದ ಮಹಿಳೆಯರಿಗಾಗಿ ʼಸಾಂತ್ವನʼ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಅನೇಕ ಮಹಿಳಾಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದಾರೆ. </p><p>ಇವರು ʼವೇಶ್ಯೆಯರು, ಬಾಲವೇಶ್ಯೆಯರು ಮತ್ತು ವೇಶ್ಯಾಮಕ್ಕಳ ಅಧ್ಯಯನʼ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಕರ್ನಾಟಕದ ಸರ್ಕಾರದ ʼಜಲಸಂವರ್ಧನೆ ಯೋಜನಾ ಕೇಂದ್ರʼದ ಆಡಳಿತ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. </p><p>ಇವರ ಹಲವಾರು ಕೃತಿಗಳು ಹಿಂದಿ, ತೆಲುಗು, ಉರ್ದು, ಇಂಗ್ಲಿಷ್ ಮತ್ತು ಗುಜರಾತಿ ಭಾಷೆಗಳಿಗೆ ಅನುವಾದವಾಗಿವೆ.</p>.<p><strong>ಪಂಪ ಪ್ರಶಸ್ತಿ: ಡಾ. ಬಿ.ಎ. ವಿವೇಕ ರೈ, ದಕ್ಷಿಣ ಕನ್ನಡ</strong></p><p>ಕನ್ನಡದ ಖ್ಯಾತ ಸಂಶೋಧಕರಾದ ಡಾ. ಬಿ.ಎ. ವಿವೇಕ ರೈ ಅವರು ಸಂಸ್ಕೃತಿ ಚಿಂತಕರು, ವಿಮರ್ಶಕರು, ಅನುವಾದಕರು ಹಾಗೂ ಜಾನಪದ ವಿದ್ವಾಂಸರಾಗಿದ್ದಾರೆ. </p><p>ಕಳೆದ 54 ವರ್ಷಗಳಿಂದ ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ-ತುಳು ಭಾಷೆಯ ಭಾಷಾ ಅಧ್ಯಯನದ ಮಾದರಿಗಳನ್ನು ರೂಪಿಸುವ ಮೂಲಕ ಆ ಭಾಷೆಗಳ ಆಂತರಿಕ ಶಕ್ತಿ-ಸಂಪತ್ತನ್ನು ಸಂವರ್ಧಿಸಿದ ವಿದ್ವಾಂಸರು. </p><p>12ಕ್ಕೂ ಹೆಚ್ಚು ಮಹತ್ವದ ಕೃತಿಗಳು, ಕಾದಂಬರಿಗಳು, ಹಲವಾರು ಕೃತಿಗಳ ಸಂಪಾದನೆ, ತುಳು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಾಹಿತ್ಯ ರಚನೆ, ಕನ್ನಡ ಸಾಹಿತ್ಯದ ಜರ್ಮನ್ ಅನುವಾದ ಹೀಗೆ ವಿಪುಲವಾಗಿ ಸಾಹಿತ್ಯ ಸೇವೆ ಮಾಡಿದ್ದಾರೆ. ಜರ್ಮನಿಯ ವ್ಯೂತ್ಬರ್ಗ್ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರಾಗಿದ್ದಾರೆ. </p><p>ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ, ಸಮ್ಮಾನಗಳು ಲಭಿಸಿವೆ.</p>.<p><strong>ಪ್ರೊ.ಕೆ.ಜಿ ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ: ಸ. ರಘುನಾಥ, ಕೋಲಾರ</strong></p><p>ವಿಶ್ರಾಂತ ಶಾಲಾಶಿಕ್ಷಕರಾದ ಶ್ರೀ ಸ. ರಘುನಾಥರವರು ಬಹುಮುಖ ಪ್ರತಿಭೆ, ಬಹುಸ್ತರಗಳ ಸಾಧಕ. ಅಧ್ಯಯನ, ಅಧ್ಯಾಪನಗಳ ಜೊತೆಗೆ ಸಾಹಿತ್ಯಕೃಷಿಯನ್ನೂ ಮೈಗೂಡಿಸಿಕೊಂಡವರು. </p><p>ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜನಪದ ಸಾಹಿತ್ಯ ಸಂಗ್ರಹ, ಗ್ರಂಥ ಸಂಪಾದನೆ, ಶಿಶುಸಾಹಿತ್ಯ ಮತ್ತು ನಿಘಂಟು ರಚನೆಗಳಲ್ಲಿ ತೊಡಗಿಕೊಂಡಿದ್ದಾರೆ. ಸಮಾಜಸೇವಕರು, ಪರಿಸರ ಪ್ರೇಮಿಗಳು, ಕಲಾಸಂಘಟಕರೂ ಹೌದು. </p><p>ಮುದ್ದಣ ಕಾವ್ಯ ಪ್ರಶಸ್ತಿ, ಅನುವಾದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತಿತರ ಪ್ರಶಸ್ತಿಗಳಿಗೆ ಭಾಜನರು.</p>.<p><strong>ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ: ಡಾ. ವೈ.ಸಿ. ಭಾನುಮತಿ, ಹಾಸನ</strong></p><p>ಡಾ. ವೈ.ಸಿ. ಭಾನುಮತಿಯವರು ಪ್ರಾಚೀನ ಸಾಹಿತ್ಯ ಮತ್ತು ಜಾನಪದ ಗ್ರಂಥ ಸಂಪಾದನೆ ಜೊತೆಗೆ ಸಂಶೋಧನಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ. </p><p>ಜಾನಪದ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಹಲವಾರು ಗೌರವ-ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. </p><p>ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಇತ್ಯಾದಿ ಪ್ರಶಸ್ತಿಗಳು ಇವರಿಗೆ ಸಂದಿವೆ.</p>.<p><strong>ಬಿ.ವಿ. ಕಾರಂತ ಪ್ರಶಸ್ತಿ: ಶ್ರೀ ಜೆ. ಲೋಕೇಶ್, ಬೆಂಗಳೂರು</strong></p><p>ಶ್ರೀ ಜೆ. ಲೋಕೇಶ್ರವರು ರಂಗ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿ 1972 ರಲ್ಲಿ ʼರಂಗಸಂಪದʼ ನಾಟಕ ಸಂಸ್ಥೆಯನ್ನು ಕಟ್ಟಿಬೆಳೆಸಿದವರಲ್ಲಿ ಒಬ್ಬರು. </p><p>ಶಕಶೈಲೂಷರು ಶಿಬಿರಾರ್ಥಿಗಳ ತಂಡ ಕಟ್ಟಿ ಹಲವಾರು ರಂಗನಾಟಕಗಳ ಯಶಸ್ವೀ ರಂಗಪ್ರಯೋಗ ಮಾಡಿದ್ದಾರೆ. ರಾಜ್ಯಾದ್ಯಂತ ನಾಟಕೋತ್ಸವಗಳನ್ನು ಏರ್ಪಡಿಸಿ ಪ್ರದರ್ಶಿಸಿದ ಕೀರ್ತಿ ಇವರದು. </p><p>ನಾಟಕದ ಸಾಹಿತ್ಯ ರಚನೆ, ಪ್ರಕಟಣೆ, ಪ್ರಯೋಗ, ಸಂಕಿರಣ, ಪ್ರದರ್ಶನ ಸಮ್ಮೇಳನ ಚಳವಳಿಗಳ ರೂವಾರಿಗಳು. ಕೆನಡಾದಲ್ಲಿ ನಡೆದ 21ನೇ ಅಂತಾರಾಷ್ಟ್ರೀಯ ರಂಗಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಹಾಗೂ ಮತ್ತಿತರ ಪ್ರಶಸ್ತಿಗಳಿಗೆ ಭಾಜನರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>