<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರವನ್ನು ಉರುಳಿಸಲು ₹ 1 ಸಾವಿರ ಕೋಟಿ ಮೀಸಲಿಡಲಾಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆ ಬಗ್ಗೆ ಆದಾಯ ತೆರಿಗೆ (ಐಟಿ) ಇಲಾಖೆ ತನಿಖೆ ನಡೆಸಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಮತ್ತು ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ಈ ವಿಚಾರವಾಗಿ ನಮ್ಮ ಕಾನೂನು ಸಲಹೆಗಾರರ ಬಳಿಯೂ ಚರ್ಚೆ ನಡೆಸಲಾಗುವುದು’ ಎಂದರು.</p><p>ಗೃಹ ಸಚಿವ ಜಿ. ಪರಮೇಶ್ವರ ಜೊತೆಗಿನ ಭೇಟಿ ವಿಚಾರವಾಗಿ ಪ್ರಕ್ರಿಯಿಸಿದ ಶಿವಕುಮಾರ್, ‘ಪರಮೇಶ್ವರ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ನಾವು ರಾಜಕೀಯವಾಗಿ ಚರ್ಚೆ ಮಾಡಿಲ್ಲ’ ಎಂದರು.</p><p>‘ದಿನಾ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ಧಿ ಮಾಡಲು ನಾವು ಅಧಿಕಾರಕ್ಕೆ ಬಂದಿದ್ದೇವೆ. ನಾವು ಅಭಿವೃದ್ಧಿ ಮಾಡಬೇಕಲ್ಲವೇ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಲ್ಲವೇ. ನಾನು ಪರಮೇಶ್ವರ, ಸಿದ್ದರಾಮಯ್ಯ ಒಟ್ಟಿಗೆ ಇರುವುದಲ್ಲ. ನಾವು 136 ಶಾಸಕರೂ ಒಗ್ಗಟ್ಟಾಗಿದ್ದೇವೆ’ ಎಂದರು.</p><p><strong>ನನಗೂ ಅದಕ್ಕೂ ಸಂಬಂಧವಿಲ್ಲ:</strong> ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ‘ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.ಮುಡಾ ನಿವೇಶನ ಹಂಚಿಕೆ ಹಗರಣ: ಸಿಬಿಐ ತನಿಖೆ ಕೋರಿ ಸಿಜೆಗೆ ಯತ್ನಾಳ್ ಪತ್ರ.ಯತ್ನಾಳ್, ಜಾರಕಿಹೊಳಿ ಪಾದಯಾತ್ರೆ ಮಾಡಲಿ, ಆದರೆ, ಹೈಕಮಾಂಡ್ ಅನುಮತಿ ಪಡೆಯಲಿ: BYV.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರವನ್ನು ಉರುಳಿಸಲು ₹ 1 ಸಾವಿರ ಕೋಟಿ ಮೀಸಲಿಡಲಾಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆ ಬಗ್ಗೆ ಆದಾಯ ತೆರಿಗೆ (ಐಟಿ) ಇಲಾಖೆ ತನಿಖೆ ನಡೆಸಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.</p><p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಮತ್ತು ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ಈ ವಿಚಾರವಾಗಿ ನಮ್ಮ ಕಾನೂನು ಸಲಹೆಗಾರರ ಬಳಿಯೂ ಚರ್ಚೆ ನಡೆಸಲಾಗುವುದು’ ಎಂದರು.</p><p>ಗೃಹ ಸಚಿವ ಜಿ. ಪರಮೇಶ್ವರ ಜೊತೆಗಿನ ಭೇಟಿ ವಿಚಾರವಾಗಿ ಪ್ರಕ್ರಿಯಿಸಿದ ಶಿವಕುಮಾರ್, ‘ಪರಮೇಶ್ವರ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ನಾವು ರಾಜಕೀಯವಾಗಿ ಚರ್ಚೆ ಮಾಡಿಲ್ಲ’ ಎಂದರು.</p><p>‘ದಿನಾ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ಧಿ ಮಾಡಲು ನಾವು ಅಧಿಕಾರಕ್ಕೆ ಬಂದಿದ್ದೇವೆ. ನಾವು ಅಭಿವೃದ್ಧಿ ಮಾಡಬೇಕಲ್ಲವೇ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಬೇಕಲ್ಲವೇ. ನಾನು ಪರಮೇಶ್ವರ, ಸಿದ್ದರಾಮಯ್ಯ ಒಟ್ಟಿಗೆ ಇರುವುದಲ್ಲ. ನಾವು 136 ಶಾಸಕರೂ ಒಗ್ಗಟ್ಟಾಗಿದ್ದೇವೆ’ ಎಂದರು.</p><p><strong>ನನಗೂ ಅದಕ್ಕೂ ಸಂಬಂಧವಿಲ್ಲ:</strong> ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, ‘ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.ಮುಡಾ ನಿವೇಶನ ಹಂಚಿಕೆ ಹಗರಣ: ಸಿಬಿಐ ತನಿಖೆ ಕೋರಿ ಸಿಜೆಗೆ ಯತ್ನಾಳ್ ಪತ್ರ.ಯತ್ನಾಳ್, ಜಾರಕಿಹೊಳಿ ಪಾದಯಾತ್ರೆ ಮಾಡಲಿ, ಆದರೆ, ಹೈಕಮಾಂಡ್ ಅನುಮತಿ ಪಡೆಯಲಿ: BYV.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>