<p><strong>ಬೆಂಗಳೂರು:</strong> ‘ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಮುಂದೆ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ದೆಹಲಿಗೆ ತೆರಳುವ ಮೊದಲು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಭಾನುವಾರ ಅವರು ಮಾತನಾಡಿದರು,</p><p>ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿವಾರು ಸಮೀಕ್ಷೆಯನ್ನು ಮುಂದೂಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಬಗ್ಗೆ ಕೇಳಿದಾಗ ಅವರು, ‘ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ’ ಎಂದರು.</p><p>ದೆಹಲಿ ಭೇಟಿಯ ಕುರಿತು ಕೇಳಿದಾಗ, ‘ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ’ ಎಂದು ತಿಳಿಸಿದರು.</p>.ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಡಿಕೆಶಿ–ಎಚ್ಡಿಕೆ! ಜಾತಿ ಗಣತಿಗೆ ಒಕ್ಕಲಿಗರ ಸಭೆ.ಜಾತಿ ಸಮೀಕ್ಷೆ | ಒಕ್ಕಲಿಗ ಎಂದೇ ನಮೂದಿಸಿ: ಅನ್ನದಾನೇಶ್ವರನಾಥ ಸ್ವಾಮೀಜಿ .ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಂದೂಡಿ: ಒಕ್ಕಲಿಗ ಸಮುದಾಯ.Cast census| ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಮಾಜಿ ಶಾಸಕ ವಿ.ಕೃಷ್ಣಪ್ಪ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಮುಂದೆ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ದೆಹಲಿಗೆ ತೆರಳುವ ಮೊದಲು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಭಾನುವಾರ ಅವರು ಮಾತನಾಡಿದರು,</p><p>ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿವಾರು ಸಮೀಕ್ಷೆಯನ್ನು ಮುಂದೂಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಬಗ್ಗೆ ಕೇಳಿದಾಗ ಅವರು, ‘ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ’ ಎಂದರು.</p><p>ದೆಹಲಿ ಭೇಟಿಯ ಕುರಿತು ಕೇಳಿದಾಗ, ‘ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ’ ಎಂದು ತಿಳಿಸಿದರು.</p>.ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಡಿಕೆಶಿ–ಎಚ್ಡಿಕೆ! ಜಾತಿ ಗಣತಿಗೆ ಒಕ್ಕಲಿಗರ ಸಭೆ.ಜಾತಿ ಸಮೀಕ್ಷೆ | ಒಕ್ಕಲಿಗ ಎಂದೇ ನಮೂದಿಸಿ: ಅನ್ನದಾನೇಶ್ವರನಾಥ ಸ್ವಾಮೀಜಿ .ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಂದೂಡಿ: ಒಕ್ಕಲಿಗ ಸಮುದಾಯ.Cast census| ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಮಾಜಿ ಶಾಸಕ ವಿ.ಕೃಷ್ಣಪ್ಪ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>