<p><strong>ಬೆಂಗಳೂರು:</strong> ಕೇಂದ್ರ ಸರ್ಕಾರದ ಅನುಮೋದನೆ ಪಡೆಯದೇ ಸ್ಮಾರ್ಟ್ ಮೀಟರ್ ಅಳವಡಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದರಿಂದಾಗಿ, ಕೇಂದ್ರದ ಸಹಾಯಧನ ಖೋತಾ ಆಗಿದೆ. ಮೀಟರ್ ಬೆಲೆಯ ಸಂಪೂರ್ಣ ಹೊರೆ ಗ್ರಾಹಕರ ಮೇಲೆ ಬಿದ್ದಿದೆ.</p>.<p>ವಿದ್ಯುತ್ ಸೋರಿಕೆ ಶೂನ್ಯವಾಗಿಸುವ ಮತ್ತು ನಷ್ಟವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಇಂಧನ ಸಚಿವಾಲಯವು 2021–22ರಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಯೋಜನೆ ಜಾರಿಗೆ ತಂದಿತ್ತು. ಇದನ್ನು ‘ರೀ–ಮ್ಯಾಪ್ಡ್ ಡಿಸ್ಟ್ರಿಬ್ಯೂಷನ್ ಸೆಕ್ಟರ್ ಸ್ಕೀಂ–ಆರ್ಡಿಎಸ್ಎಸ್’ ಎಂದು ಕರೆಯಲಾಗಿತ್ತು.</p>.<p>ಆರ್ಡಿಎಸ್ಎಸ್ ಯೋಜನೆಯಂತೆ ದೇಶದ ಎಲ್ಲ ರಾಜ್ಯಗಳಲ್ಲಿ, ಎಲ್ಲ ಸ್ವರೂಪದ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಿತ್ತು. ಯೋಜನೆ ಜಾರಿ ಸಂಬಂಧ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕಿತ್ತು. ಕರ್ನಾಟಕ ಸರ್ಕಾರವೂ 2022ರಲ್ಲಿ ಈ ಸಂಬಂಧ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ, ತಾಂತ್ರಿಕ ಕಾರಣವೊಡ್ಡಿದ್ದ ಕೇಂದ್ರವು, ಪ್ರಸ್ತಾವಕ್ಕೆ ಒಪ್ಪಿಗೆ ನೀಡಿರಲಿಲ್ಲ.</p>.<p>2025ರಲ್ಲೂ ರಾಜ್ಯಕ್ಕೆ ಅಂತಹ ಅನುಮೋದನೆ ಸಿಕ್ಕಿಲ್ಲ ಎಂಬುದನ್ನು ಕೇಂದ್ರ ಸರ್ಕಾರವೇ ದೃಢಪಡಿಸಿದೆ. ಈ ಯೋಜನೆ ಸಂಬಂಧ ಲೋಕಸಭೆಯಲ್ಲಿ ಈಚೆಗೆ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್, ‘ಯೋಜನೆ ಅಡಿ ಸೂಚಿಸಲಾಗಿದ್ದ ಷರತ್ತುಗಳನ್ನು ಪೂರೈಸದ ಕಾರಣಕ್ಕೆ, ಕರ್ನಾಟಕಕ್ಕೆ ಅನುಮೋದನೆ ಸಿಕ್ಕಿಲ್ಲ’ ಎಂದು ಮಾಹಿತಿ ನೀಡಿದ್ದಾರೆ. </p>.<p>ಈ ಯೋಜನೆ ಅಡಿಯಲ್ಲಿ ಅಳವಡಿಸಲಾಗುವ ಪ್ರತಿ ಸ್ಮಾರ್ಟ್ ಮೀಟರ್ಗೆ ಕೇಂದ್ರವು ₹900 ಸಹಾಯಧನ ನೀಡುತ್ತದೆ. ಕೇಂದ್ರದ ಒಪ್ಪಿಗೆ ಪಡೆದು ಯೋಜನೆ ಅನುಷ್ಠಾನಕ್ಕೆ ತಂದಿರುವ ರಾಜ್ಯಗಳಲ್ಲಿ ಈ ಸಹಾಯಧನ ಸಿಗುತ್ತಿದೆ. ಆದರೆ ನಮ್ಮ ರಾಜ್ಯದ ಗ್ರಾಹಕರಿಗೆ ಈ ಸಹಾಯಧನ ಸಿಗುತ್ತಿಲ್ಲ.</p>.<p>ಕೇಂದ್ರದ ಅನುಮೋದನೆ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ ರಾಜ್ಯದ ಎಸ್ಕಾಂಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಪ್ರಸ್ತಾವ ಬರೆದಿದ್ದವು. ಈ ಪ್ರಸ್ತಾವಕ್ಕೆ ಕೆಇಆರ್ಸಿ ಆಕ್ಷೇಪ ವ್ಯಕ್ತಪಡಿಸಿತ್ತು. 2024ನೇ ಸಾಲಿನ ದರ ಪರಿಷ್ಕರಣೆ ಆದೇಶದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದ ಕೆಇಆರ್ಸಿ, ‘ಆರ್ಡಿಎಸ್ಎಸ್ ಅಡಿಯಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿಲ್ಲ. ಇದನ್ನು ಈಗಾಗಲೆ ತಿಳಿಸಿದ್ದರೂ, ಎಸ್ಕಾಂಗಳು ಮತ್ತೆ–ಮತ್ತೆ ಪ್ರಸ್ತಾವ ಸಲ್ಲಿಸಿವೆ’ ಎಂದು ಉಲ್ಲೇಖಿಸಿತ್ತು. </p>.<p>ಹೀಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಇಆರ್ಸಿಯೇ, ನಂತರದ ಕೆಲವೇ ದಿನಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಒಪ್ಪಿಗೆ ನೀಡಿತ್ತು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಅಧಿಸೂಚನೆ ಹೊರಡಿಸಿ, ಸ್ಮಾರ್ಟ್ ಮೀಟರ್ ಅಳವಡಿಕೆಗೆ ಕ್ರಮ ತೆಗೆದುಕೊಂಡಿತ್ತು.</p>.ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ₹15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಸರ್ಕಾರದ ಅನುಮೋದನೆ ಪಡೆಯದೇ ಸ್ಮಾರ್ಟ್ ಮೀಟರ್ ಅಳವಡಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದರಿಂದಾಗಿ, ಕೇಂದ್ರದ ಸಹಾಯಧನ ಖೋತಾ ಆಗಿದೆ. ಮೀಟರ್ ಬೆಲೆಯ ಸಂಪೂರ್ಣ ಹೊರೆ ಗ್ರಾಹಕರ ಮೇಲೆ ಬಿದ್ದಿದೆ.</p>.<p>ವಿದ್ಯುತ್ ಸೋರಿಕೆ ಶೂನ್ಯವಾಗಿಸುವ ಮತ್ತು ನಷ್ಟವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಇಂಧನ ಸಚಿವಾಲಯವು 2021–22ರಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಯೋಜನೆ ಜಾರಿಗೆ ತಂದಿತ್ತು. ಇದನ್ನು ‘ರೀ–ಮ್ಯಾಪ್ಡ್ ಡಿಸ್ಟ್ರಿಬ್ಯೂಷನ್ ಸೆಕ್ಟರ್ ಸ್ಕೀಂ–ಆರ್ಡಿಎಸ್ಎಸ್’ ಎಂದು ಕರೆಯಲಾಗಿತ್ತು.</p>.<p>ಆರ್ಡಿಎಸ್ಎಸ್ ಯೋಜನೆಯಂತೆ ದೇಶದ ಎಲ್ಲ ರಾಜ್ಯಗಳಲ್ಲಿ, ಎಲ್ಲ ಸ್ವರೂಪದ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಿತ್ತು. ಯೋಜನೆ ಜಾರಿ ಸಂಬಂಧ ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕಿತ್ತು. ಕರ್ನಾಟಕ ಸರ್ಕಾರವೂ 2022ರಲ್ಲಿ ಈ ಸಂಬಂಧ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ, ತಾಂತ್ರಿಕ ಕಾರಣವೊಡ್ಡಿದ್ದ ಕೇಂದ್ರವು, ಪ್ರಸ್ತಾವಕ್ಕೆ ಒಪ್ಪಿಗೆ ನೀಡಿರಲಿಲ್ಲ.</p>.<p>2025ರಲ್ಲೂ ರಾಜ್ಯಕ್ಕೆ ಅಂತಹ ಅನುಮೋದನೆ ಸಿಕ್ಕಿಲ್ಲ ಎಂಬುದನ್ನು ಕೇಂದ್ರ ಸರ್ಕಾರವೇ ದೃಢಪಡಿಸಿದೆ. ಈ ಯೋಜನೆ ಸಂಬಂಧ ಲೋಕಸಭೆಯಲ್ಲಿ ಈಚೆಗೆ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಶ್ರೀಪಾದ ನಾಯಕ್, ‘ಯೋಜನೆ ಅಡಿ ಸೂಚಿಸಲಾಗಿದ್ದ ಷರತ್ತುಗಳನ್ನು ಪೂರೈಸದ ಕಾರಣಕ್ಕೆ, ಕರ್ನಾಟಕಕ್ಕೆ ಅನುಮೋದನೆ ಸಿಕ್ಕಿಲ್ಲ’ ಎಂದು ಮಾಹಿತಿ ನೀಡಿದ್ದಾರೆ. </p>.<p>ಈ ಯೋಜನೆ ಅಡಿಯಲ್ಲಿ ಅಳವಡಿಸಲಾಗುವ ಪ್ರತಿ ಸ್ಮಾರ್ಟ್ ಮೀಟರ್ಗೆ ಕೇಂದ್ರವು ₹900 ಸಹಾಯಧನ ನೀಡುತ್ತದೆ. ಕೇಂದ್ರದ ಒಪ್ಪಿಗೆ ಪಡೆದು ಯೋಜನೆ ಅನುಷ್ಠಾನಕ್ಕೆ ತಂದಿರುವ ರಾಜ್ಯಗಳಲ್ಲಿ ಈ ಸಹಾಯಧನ ಸಿಗುತ್ತಿದೆ. ಆದರೆ ನಮ್ಮ ರಾಜ್ಯದ ಗ್ರಾಹಕರಿಗೆ ಈ ಸಹಾಯಧನ ಸಿಗುತ್ತಿಲ್ಲ.</p>.<p>ಕೇಂದ್ರದ ಅನುಮೋದನೆ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ ರಾಜ್ಯದ ಎಸ್ಕಾಂಗಳು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಪ್ರಸ್ತಾವ ಬರೆದಿದ್ದವು. ಈ ಪ್ರಸ್ತಾವಕ್ಕೆ ಕೆಇಆರ್ಸಿ ಆಕ್ಷೇಪ ವ್ಯಕ್ತಪಡಿಸಿತ್ತು. 2024ನೇ ಸಾಲಿನ ದರ ಪರಿಷ್ಕರಣೆ ಆದೇಶದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದ ಕೆಇಆರ್ಸಿ, ‘ಆರ್ಡಿಎಸ್ಎಸ್ ಅಡಿಯಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿಲ್ಲ. ಇದನ್ನು ಈಗಾಗಲೆ ತಿಳಿಸಿದ್ದರೂ, ಎಸ್ಕಾಂಗಳು ಮತ್ತೆ–ಮತ್ತೆ ಪ್ರಸ್ತಾವ ಸಲ್ಲಿಸಿವೆ’ ಎಂದು ಉಲ್ಲೇಖಿಸಿತ್ತು. </p>.<p>ಹೀಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆಇಆರ್ಸಿಯೇ, ನಂತರದ ಕೆಲವೇ ದಿನಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಒಪ್ಪಿಗೆ ನೀಡಿತ್ತು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಅಧಿಸೂಚನೆ ಹೊರಡಿಸಿ, ಸ್ಮಾರ್ಟ್ ಮೀಟರ್ ಅಳವಡಿಕೆಗೆ ಕ್ರಮ ತೆಗೆದುಕೊಂಡಿತ್ತು.</p>.ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ₹15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>