<p><strong>ಬೆಂಗಳೂರು:</strong> ಕೋವಿಡ್ನಿಂದಾಗಿ ಸಂಕಷ್ಟದಲ್ಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಚೈತನ್ಯ ತುಂಬಲು ರಾಜ್ಯ ಸರ್ಕಾರ ಕೆಲವು ರಿಯಾಯಿತಿಗಳನ್ನು ಪ್ರಕಟಿಸಿದೆ.</p>.<p>ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ಗಳಿಗೆ ಈ ಸಾಲಿಗೆ (2021–21) ಆಸ್ತಿ ತೆರಿಗೆ ಪಾವತಿಯಲ್ಲಿ ಶೇ 50 ರಷ್ಟು ವಿನಾಯಿತಿ ನೀಡಲಾಗಿದೆ. ಅಲ್ಲದೆ, ಏಪ್ರಿಲ್ ಮತ್ತು ಜೂನ್ ತಿಂಗಳ ವಿದ್ಯುಚ್ಚಕ್ತಿ ಶುಲ್ಕವನ್ನೂ ಮನ್ನಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.</p>.<p>ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕಗಳಲ್ಲಿ ಶೇ 50 ರಷ್ಟು ಮೊತ್ತವನ್ನು ಪಾವತಿಸುವುದು ಮತ್ತು ಉಳಿದ ಶೇ 50 ರಷ್ಟು ಮೊತ್ತವನ್ನು ಈ ವರ್ಷದ ಡಿಸೆಂಬರ್ 31 ರೊಳಗೆ ಪಾವತಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.</p>.<p>ಈಗಾಗಲೇ ಪ್ರಕಟಿಸಿರುವಂತೆ ನೋಂದಣಿ ಮಾಡಿಕೊಂಡಿರುವ ಪ್ರತಿ ಪ್ರವಾಸಿ ಮಾರ್ಗದರ್ಶಿಗೆ ₹5,000 ಪರಿಹಾರದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>‘ಈ ಎಲ್ಲ ನೆರವಿನಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಮತ್ತೆ ಚೇತರಿಕೆ ಕಾಣಲು ಸಾಧ್ಯವಿದೆ. ಇದರಿಂದ ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಆರ್ಥಿಕ ವಹಿವಾಟು ಹೆಚ್ಚಲು ಸಹಾಯವಾಗುತ್ತದೆ’ ಎಂದು ರಾಜ್ಯ ಪ್ರವಾಸೋದ್ಯಮ ಸೊಸೈಟಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ನಿಂದಾಗಿ ಸಂಕಷ್ಟದಲ್ಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಚೈತನ್ಯ ತುಂಬಲು ರಾಜ್ಯ ಸರ್ಕಾರ ಕೆಲವು ರಿಯಾಯಿತಿಗಳನ್ನು ಪ್ರಕಟಿಸಿದೆ.</p>.<p>ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ಗಳಿಗೆ ಈ ಸಾಲಿಗೆ (2021–21) ಆಸ್ತಿ ತೆರಿಗೆ ಪಾವತಿಯಲ್ಲಿ ಶೇ 50 ರಷ್ಟು ವಿನಾಯಿತಿ ನೀಡಲಾಗಿದೆ. ಅಲ್ಲದೆ, ಏಪ್ರಿಲ್ ಮತ್ತು ಜೂನ್ ತಿಂಗಳ ವಿದ್ಯುಚ್ಚಕ್ತಿ ಶುಲ್ಕವನ್ನೂ ಮನ್ನಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.</p>.<p>ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕಗಳಲ್ಲಿ ಶೇ 50 ರಷ್ಟು ಮೊತ್ತವನ್ನು ಪಾವತಿಸುವುದು ಮತ್ತು ಉಳಿದ ಶೇ 50 ರಷ್ಟು ಮೊತ್ತವನ್ನು ಈ ವರ್ಷದ ಡಿಸೆಂಬರ್ 31 ರೊಳಗೆ ಪಾವತಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.</p>.<p>ಈಗಾಗಲೇ ಪ್ರಕಟಿಸಿರುವಂತೆ ನೋಂದಣಿ ಮಾಡಿಕೊಂಡಿರುವ ಪ್ರತಿ ಪ್ರವಾಸಿ ಮಾರ್ಗದರ್ಶಿಗೆ ₹5,000 ಪರಿಹಾರದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<p>‘ಈ ಎಲ್ಲ ನೆರವಿನಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಮತ್ತೆ ಚೇತರಿಕೆ ಕಾಣಲು ಸಾಧ್ಯವಿದೆ. ಇದರಿಂದ ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಆರ್ಥಿಕ ವಹಿವಾಟು ಹೆಚ್ಚಲು ಸಹಾಯವಾಗುತ್ತದೆ’ ಎಂದು ರಾಜ್ಯ ಪ್ರವಾಸೋದ್ಯಮ ಸೊಸೈಟಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>