<p><strong>ಬೆಂಗಳೂರು:</strong> ರಾಜ್ಯ ಸರ್ಕಾರ ಕೇಂದ್ರದ ಜತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಆದರೆ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಉದ್ಧಟತನದ ಹೇಳಿಕೆಗಳು ರಾಜ್ಯಕ್ಕೆ ಮಾರಕ ಆಗುತ್ತಿವೆ ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.</p><p>ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವೃಥಾ ರಾಜಕೀಯ ಮಾಡುವುದನ್ನು ಬಿಟ್ಟು, ರಾಜ್ಯದ ಜನರ ಒಳಿತು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು ಎಂದು ಅವರು ಸಲಹೆ ನೀಡಿದರು.</p><p>ಬರದ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಕೇಂದ್ರ ಸರ್ಕಾರಕ್ಕೆ ಸ್ಪಂದಿಸಿ, ಅಗತ್ಯ ಮಾಹಿತಿ ನೀಡಬೇಕು. ಪ್ರಧಾನಿಯವರ ಜತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಿ. ಕೇಂದ್ರ ಸರ್ಕಾರ ಶೀಘ್ರವೇ ಪರಿಹಾರದ ಹಣ ಬಿಡುಗಡೆ ಮಾಡಲಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಳ ಆಕಾಂಕ್ಷಿಗಳು ದಿನೇ ದಿನೇ <br>ಹೆಚ್ಚುತ್ತಿದ್ದಾರೆ. ಸಿದ್ದರಾಮಯ್ಯ ತಾವೇ 5 ವರ್ಷ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಆದರೆ, ಇನ್ನೂ 8ರಿಂದ 10 ಮಂದಿ ಮುಖ್ಯಮಂತ್ರಿ ಆಗಲು ಸರದಿಯಲ್ಲಿ ನಿಂತಿದ್ದಾರೆ. ಡಿಸಿಎಂ ಆಗಲು 15ರಿಂದ 20 ಶಾಸಕರು ಕಾದು ಕುಳಿತ್ತಿದ್ದಾರೆ. ಈ ಪರಿಸ್ಥಿತಿ ದೇಶದ ಯಾವುದೇ ರಾಜ್ಯದಲ್ಲೂ ನೋಡಲು ಸಿಗುವುದಿಲ್ಲ ಎಂದು ಅವರು ಹೇಳಿದರು. ಜಾತಿ ಗಣತಿ ವಿಚಾರದಲ್ಲಿ ಮುಖ್ಯಮಂತ್ರಿಯವರು ಎಲ್ಲ ವರ್ಗಗಳ ಹಿತದೃಷ್ಟಿಯಿಂದ ಚಿಂತಿಸಬೇಕು. ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಜನತೆ ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.</p><p>ವಿಜಯೇಂದ್ರ ಅವರ ಜನ್ಮದಿನದ ಕಾರಣ ನೂರಾರು ಅಭಿಮಾನಿಗಳು ಅವರ ಮನೆ ಮುಂದೆ ಸೇರಿ ಬಿಜೆಪಿಯ ಮುಂದಿನ ಅಧ್ಯಕ್ಷರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರ ಕೇಂದ್ರದ ಜತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಆದರೆ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಉದ್ಧಟತನದ ಹೇಳಿಕೆಗಳು ರಾಜ್ಯಕ್ಕೆ ಮಾರಕ ಆಗುತ್ತಿವೆ ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.</p><p>ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವೃಥಾ ರಾಜಕೀಯ ಮಾಡುವುದನ್ನು ಬಿಟ್ಟು, ರಾಜ್ಯದ ಜನರ ಒಳಿತು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು ಎಂದು ಅವರು ಸಲಹೆ ನೀಡಿದರು.</p><p>ಬರದ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು, ಕೇಂದ್ರ ಸರ್ಕಾರಕ್ಕೆ ಸ್ಪಂದಿಸಿ, ಅಗತ್ಯ ಮಾಹಿತಿ ನೀಡಬೇಕು. ಪ್ರಧಾನಿಯವರ ಜತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಿ. ಕೇಂದ್ರ ಸರ್ಕಾರ ಶೀಘ್ರವೇ ಪರಿಹಾರದ ಹಣ ಬಿಡುಗಡೆ ಮಾಡಲಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಳ ಆಕಾಂಕ್ಷಿಗಳು ದಿನೇ ದಿನೇ <br>ಹೆಚ್ಚುತ್ತಿದ್ದಾರೆ. ಸಿದ್ದರಾಮಯ್ಯ ತಾವೇ 5 ವರ್ಷ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಆದರೆ, ಇನ್ನೂ 8ರಿಂದ 10 ಮಂದಿ ಮುಖ್ಯಮಂತ್ರಿ ಆಗಲು ಸರದಿಯಲ್ಲಿ ನಿಂತಿದ್ದಾರೆ. ಡಿಸಿಎಂ ಆಗಲು 15ರಿಂದ 20 ಶಾಸಕರು ಕಾದು ಕುಳಿತ್ತಿದ್ದಾರೆ. ಈ ಪರಿಸ್ಥಿತಿ ದೇಶದ ಯಾವುದೇ ರಾಜ್ಯದಲ್ಲೂ ನೋಡಲು ಸಿಗುವುದಿಲ್ಲ ಎಂದು ಅವರು ಹೇಳಿದರು. ಜಾತಿ ಗಣತಿ ವಿಚಾರದಲ್ಲಿ ಮುಖ್ಯಮಂತ್ರಿಯವರು ಎಲ್ಲ ವರ್ಗಗಳ ಹಿತದೃಷ್ಟಿಯಿಂದ ಚಿಂತಿಸಬೇಕು. ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಜನತೆ ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.</p><p>ವಿಜಯೇಂದ್ರ ಅವರ ಜನ್ಮದಿನದ ಕಾರಣ ನೂರಾರು ಅಭಿಮಾನಿಗಳು ಅವರ ಮನೆ ಮುಂದೆ ಸೇರಿ ಬಿಜೆಪಿಯ ಮುಂದಿನ ಅಧ್ಯಕ್ಷರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>