<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಏಳಿ ಎದ್ದೇಳಿ ನಿದ್ದೆಯಿಂದ ಹೊರ ಬನ್ನಿ ಎಂದು ಬಿಜೆಪಿ ಲೇವಡಿ ಮಾಡಿದೆ. </p><p>ಬರಗಾಲ ವಿಚಾರ ಪ್ರಸ್ತಾಪಿಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ‘ನಿಲ್ಲುತ್ತಿಲ್ಲ ಅನ್ನದಾತನ ಆತ್ಮಹತ್ಯೆ ಸರಣಿ, ಕಾಂಗ್ರೆಸ್ ಸರ್ಕಾರ ಬಂದ ದಿನದಿಂದ 70ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಬೆಳೆ ಬೆಳೆದ ನಮ್ಮ ರೈತರಿಗಿಲ್ಲ ಕಾವೇರಿ ನೀರು. ಆದರೆ, ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯುಸೆಕ್ಸ್ ಹರಿಸಲಾಗುತ್ತಿದೆ’ ಎಂದು ಕಿಡಿಕಾರಿದೆ. </p><p>‘ಕುಡಿಯುವ ನೀರಿಗೂ ರಾಜ್ಯದಲ್ಲಿ ಹಾಹಾಕಾರ ಎದುರಾಗಿದೆ. ಆದರೆ, ಕಲುಷಿತ ನೀರು ಪೂರೈಕೆ, ಅಪಾರ ಸಾವು– ನೋವು ಮುಂದುವರಿದಿದೆ. ಜತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ದುರಾಡಳಿತಕ್ಕೆ ಕಡಿವಾಣವೇ ಇಲ್ಲ’ ಎಂದು ಬಿಜೆಪಿ ಕುಟುಕಿದೆ. </p><p>‘ಮೊದಲೇ ಬೆಲೆ ಏರಿಕೆಗೆ ರೋಸಿ ಹೋಗಿದ್ದ ಜನರ ಮೇಲೆ ಇದೀಗ ಪ್ರತಿ ಕೆಜಿ ಅಕ್ಕಿ ಬೆಲೆ ₹10ರಿಂದ ₹20ರಷ್ಟು ಏರಿಕೆಯ ಹೊರೆ ಹಾಕಲಾಗಿದೆ. 135 ತಾಲ್ಲೂಕುಗಳಲ್ಲಿ ಬರ ಬಂದಿದ್ದರೂ, ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೆ ಮೊಂಡಾಟವಾಡುತ್ತಿದೆ. ಅಡಳಿತದ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರು ಈ ಪರಿ ಮೌನಕ್ಕೆ ಶರಣಾಗಿರುವುದು ಕನ್ನಡಿಗರ ದುರಂತವೇ ಸರಿ’ ಎಂದು ಬಿಜೆಪಿ ಟೀಕಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಏಳಿ ಎದ್ದೇಳಿ ನಿದ್ದೆಯಿಂದ ಹೊರ ಬನ್ನಿ ಎಂದು ಬಿಜೆಪಿ ಲೇವಡಿ ಮಾಡಿದೆ. </p><p>ಬರಗಾಲ ವಿಚಾರ ಪ್ರಸ್ತಾಪಿಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ‘ನಿಲ್ಲುತ್ತಿಲ್ಲ ಅನ್ನದಾತನ ಆತ್ಮಹತ್ಯೆ ಸರಣಿ, ಕಾಂಗ್ರೆಸ್ ಸರ್ಕಾರ ಬಂದ ದಿನದಿಂದ 70ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಬೆಳೆ ಬೆಳೆದ ನಮ್ಮ ರೈತರಿಗಿಲ್ಲ ಕಾವೇರಿ ನೀರು. ಆದರೆ, ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯುಸೆಕ್ಸ್ ಹರಿಸಲಾಗುತ್ತಿದೆ’ ಎಂದು ಕಿಡಿಕಾರಿದೆ. </p><p>‘ಕುಡಿಯುವ ನೀರಿಗೂ ರಾಜ್ಯದಲ್ಲಿ ಹಾಹಾಕಾರ ಎದುರಾಗಿದೆ. ಆದರೆ, ಕಲುಷಿತ ನೀರು ಪೂರೈಕೆ, ಅಪಾರ ಸಾವು– ನೋವು ಮುಂದುವರಿದಿದೆ. ಜತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ದುರಾಡಳಿತಕ್ಕೆ ಕಡಿವಾಣವೇ ಇಲ್ಲ’ ಎಂದು ಬಿಜೆಪಿ ಕುಟುಕಿದೆ. </p><p>‘ಮೊದಲೇ ಬೆಲೆ ಏರಿಕೆಗೆ ರೋಸಿ ಹೋಗಿದ್ದ ಜನರ ಮೇಲೆ ಇದೀಗ ಪ್ರತಿ ಕೆಜಿ ಅಕ್ಕಿ ಬೆಲೆ ₹10ರಿಂದ ₹20ರಷ್ಟು ಏರಿಕೆಯ ಹೊರೆ ಹಾಕಲಾಗಿದೆ. 135 ತಾಲ್ಲೂಕುಗಳಲ್ಲಿ ಬರ ಬಂದಿದ್ದರೂ, ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೆ ಮೊಂಡಾಟವಾಡುತ್ತಿದೆ. ಅಡಳಿತದ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರು ಈ ಪರಿ ಮೌನಕ್ಕೆ ಶರಣಾಗಿರುವುದು ಕನ್ನಡಿಗರ ದುರಂತವೇ ಸರಿ’ ಎಂದು ಬಿಜೆಪಿ ಟೀಕಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>