ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಲ್ಲ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವುದನ್ನು ಸರ್ಕಾರ ಸೋಮವಾರ ತಡೆ ಹಿಡಿದಿದೆ. ಜತೆಗೆ ಆರಂಭವಾಗದೇ ಇರುವ ಕಾಮಗಾರಿಗಳನ್ನೂ ತಡೆಯುವಂತೆ ಎಲ್ಲ ಇಲಾಖೆಗಳಿಗೆ ಸೂಚಿಸಲಾಗಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ, ನಿಗಮ, ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಹಣ ಬಿಡುಗಡೆ ಮತ್ತು ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.