<p><strong>ಬೆಂಗಳೂರು: ವಿ</strong>ವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p><p>ಈ ಹುದ್ದೆಗಳ ಭರ್ತಿಗೆ ಇದ್ದ ಎಲ್ಲ ತೊಡಕುಗಳು ನಿವಾರಣೆ ಆಗಿವೆ. ಎಲ್ಲ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ವೇಳಾಪಟ್ಟಿ ಪ್ರಕಟಿಸಲು ಸೂಚನೆ ನೀಡಲಾಗಿದೆ ಎಂದರು.</p><p>ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಬಂದ ಅವರು, ಮೂರನೇ ಮಹಡಿಯ ಕೊಠಡಿಯನ್ನು ಧಾರ್ಮಿಕ ವಿಧಿಗಳ ಮೂಲಕ ಪ್ರವೇಶಿಸಿದರು. ಬಳಿಕ, ಸಂಪುಟ ಸಭೆ ನಡೆಯುವ ಸಭಾಂಗಣದಲ್ಲಿ ಸುಮಾರು ಎರಡುಗಂಟೆ ತಮ್ಮ ಚೊಚ್ಚಲ ಸಂಪುಟ ಸಭೆ ನಡೆಸಿದರು.</p><p>ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು, ಕೈಗೊಂಡ ನಿರ್ಣಯಗಳ ಈ ಮಾಹಿತಿ ನೀಡಿದರು.</p><p><strong>ಇತರ ತೀರ್ಮಾನಗಳು:</strong> ರಾಜ್ಯದಲ್ಲಿ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಲಭ್ಯತೆ ಬಗ್ಗೆ ಮಾಹಿತಿ ನೀಡಿ, ಭರ್ತಿ ಮಾಡುವ ಸಂಬಂಧ ‘ಖಾಸಗಿ ಉದ್ಯೋಗ ವಿನಿಮಯ ಕೇಂದ್ರ’ವನ್ನು ಸ್ಥಾಪಿಸಲಾಗುವುದು. ಐಟಿ–ಬಿಟಿ ಹೊರತುಪಡಿಸಿ ಇತರೆ ಸಾಕಷ್ಟು ಕ್ಷೇತ್ರಗಳು ಇದ್ದು, ಇಲ್ಲಿ ಉದ್ಯೋಗಾವಕಾಶಗಳು ಇವೆ. ಈ ಸಂಬಂಧ ಎಲ್ಲ ಕ್ಷೇತ್ರಗಳ ಉದ್ಯಮಿಗಳ ಜತೆ ಚರ್ಚೆ ನಡೆಸಲಾಗುವುದು. ಅವರ ಮನವೊಲಿಸಲಾಗುವುದು. ಕರ್ನಾಟಕದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ವಿವಿಧ ಉದ್ಯೋಗಗಳ ಅಗತ್ಯಕ್ಕೆ ತಕ್ಕಂತೆ ಅಭ್ಯರ್ಥಿಗಳಿಗೆ ಕೌಶಲ ತರಬೇತಿ ನೀಡಲಾಗುವುದು. ಇದಕ್ಕೆ ಪೂರಕವಾಗಿ ಮೂವರು ಸಚಿವರ ಒಂದು ಸಮಿತಿ ರಚಿಸಿ ರೂಪುರೇಷೆ ತಯಾರಿಸಿಕೊಡಲು ಸೂಚನೆ ನೀಡಲಾಗಿದೆ.</p><p>2,500 ಅಡಿಗಳವರೆಗಿನ ನಿವೇಶಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಒಸಿ ಮತ್ತು ಸಿಸಿ ಪಡೆಯುವುದರಿಂದ ಒಂದು ಬಾರಿಗೆ ವಿನಾಯ್ತಿ ನೀಡಲಾಗುವುದು. ಮೇ 31 ರೊಳಗೆ ಕಟ್ಟಡ ಕಟ್ಟಿದವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.</p><p>‘ಬಿ’ ಖಾತಾ ಹೊಂದಿರುವವರು ‘ಎ’ ಖಾತಾ ಪಡೆಯಲು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಮಹಾನಗರ ಪಾಲಿಕೆವರೆಗಿನ ಎಲ್ಲ ಹಂತಗಳಲ್ಲೂ ಅವಕಾಶ ನೀಡಲಾಗುವುದು. ಸದ್ಯಕ್ಕೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಲ್ಲಿ ಅವಕಾಶ ನೀಡಲಾಗಿತ್ತು.</p><p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ರಸ್ತೆಗಳ ಡಾಂಬರೀಕರಣಕ್ಕೆ ಹೊಸದಾಗಿ ₹2,000 ಕೋಟಿ ನೀಡಲಾಗುವುದು. ಮುಂದಿನ ಮೂರು– ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆಗಳನ್ನು ಡಾಂಬರೀಕರಣ ಮಾಡಲಾಗುವುದು.</p>.<p><strong>‘ಹಣ ಹೊಂದಿಸೋದು ಗೊತ್ತು’</strong></p><p>‘ಇದು ಡಿ.ಕೆ.ಸರ್ಕಾರ ಹಣ ಹೊಂದಿಸೋದು ಗೊತ್ತು’ ಎಂದು ಶಿವಕುಮಾರ್ ಕಡ್ಡಿ ಮುರಿದಂತೆ ಹೇಳಿದರು.</p><p>‘ಭಾರತ್ ಜೋಡೊ ಸಂಘಗಳಿಗೆ ನೆರವು ಮತ್ತು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ಗೆ ಅಪಾರ ಹಣ ಬೇಕಾಗಿದ್ದು, ಅದಕ್ಕೆ ಹೇಗೆ ಹೊಂದಿಸುತ್ತೀರಿ’ ಎಂಬ ಪ್ರಶ್ನೆಗೆ, ತಮ್ಮ ಎಂದಿನ ಶೈಲಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.</p><p>‘ಈ ಸರ್ಕಾರದ ಪ್ರತಿ ತೀರ್ಮಾನ ಕೇವಲ ಶಿವಕುಮಾರ್ ತೀರ್ಮಾನ ಮಾತ್ರವಲ್ಲ. ಸಾಮೂಹಿಕ ತೀರ್ಮಾನವಾಗಿರುತ್ತದೆ’ ಎಂದು ಅವರು ಪ್ರತಿಪಾದಿಸಿದರು.</p>.<p><strong>‘ಉತ್ತರ ದಿಕ್ಕಿಗೇ ಅರೇಂಜ್ ಮಾಡಿ’</strong></p><p>ಸಚಿವ ಸಂಪುಟ ಸಭೆಯ ಬಳಿಕ ಸಮಿತಿ ಸಭಾಂಗಣದಲ್ಲಿ<br>ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಬಂದ ಶಿವಕುಮಾರ್ ಅವರಿಗೆ ತಾವು ಕೂತು ಮಾತನಾಡಬೇಕಾದ ದಕ್ಷಿಣ ದಿಕ್ಕು ಸರಿ ಇಲ್ಲ ಎಂದು ಅನ್ನಿಸಿ, ಸಾಮಾನ್ಯವಾಗಿ ಎಲ್ಲ ಮುಖ್ಯಮಂತ್ರಿಗಳು ಅಧ್ಯಕ್ಷತೆ ವಹಿಸಿ ಕೂರುವ ಕಡೆಗೆ ಹೋದರು. ಅಲ್ಲಿ ಕುಳಿತಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಎಬ್ಬಿಸಿದರು.</p><p>ಆದರೆ, ದಕ್ಷಿಣ ದಿಕ್ಕಿನಲ್ಲಿ ಟಿ.ವಿ ಕ್ಯಾಮರಾಗಳ ವ್ಯವಸ್ಥೆ ಮತ್ತು ಲೈವ್ ಇರುವುದನ್ನು ಅವರ ಗಮನಕ್ಕೆ ತಂದಾಗ ಮನಸ್ಸು ಬದಲಿಸಿ ದಕ್ಷಿಣ ದಿಕ್ಕಿನಲ್ಲೇ ಕೂತರು. ಆ ಬಳಿಕ ಅವರು, ‘ಇನ್ನು ಮುಂದೆ ಉತ್ತರ ದಿಕ್ಕಿನಲ್ಲೇ ನಾನು ಕೂತು ಮಾತನಾಡುವುದಕ್ಕೆ ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಹಿಂದೆ ಅಧಿಕಾರಿಗಳನ್ನು ಬಿಟ್ಟು ಬೇರೆ ಯಾರೂ<br>ನಿಂತಕೊಳ್ಳಬಾರದು ಎಂದು ತಾಕೀತು ಮಾಡಿದರು.</p>.<p><strong>‘ಸಿ.ಎಂ ಕುರ್ಚಿ ಜನರ ಕುರ್ಚಿ’</strong></p><p>‘ಮುಖ್ಯಮಂತ್ರಿ ಕುರ್ಚಿ ಶಿವಕುಮಾರನದ್ದಲ್ಲ, ಇದು ಜನರ ಕುರ್ಚಿ. ಜನರು ಕೊಟ್ಟಿರುವ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ’ ಎಂದು ಶಿವಕುಮಾರ್ ಹೇಳಿದರು.</p><p>‘ನನ್ನ ವೈಯಕ್ತಿಕ ವಿಚಾರ ಬದಿಗೊತ್ತಿ, ರಾಜ್ಯದ ಜನರ ಸೇವೆಗೆ ಸಂಕಲ್ಪ ಮಾಡಿ ಅಧಿಕಾರ ಸ್ವೀಕರಿಸಿದ್ದೇನೆ. ‘ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ ಎಂಬ ಮಾತನ್ನು ನಂಬಿರುವವನು ನಾನು. ನನಗೆ ಜಾತಿ ಮೇಲೆ, ಧರ್ಮದ ಮೇಲೆ ನಂಬಿಕೆ ಇಲ್ಲ. ನನಗೆ ನಮ್ಮದೇ ಆದ ನಂಬಿಕೆ ಇರಬಹುದು. ಆದರೆ ಮಾನವ ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು’ ಎಂದರು.</p><p>‘ರೈತರು ಮತ್ತು ಕೂಲಿ ಕಾರ್ಮಿಕರ ಬಗ್ಗೆ ನನಗೆ ಕಾಳಜಿ ಇದೆ. ರೈತರ ಬಗ್ಗೆ ಮುಂದಿನ ದಿನಗಳಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳುತ್ತೇನೆ. ರೈತರು ನಗರಗಳತ್ತ ವಲಸೆ ಬರುವುದನ್ನು ತಡೆಯಲು, ಅಲ್ಲೇ ಹೊಸ ಅವಕಾಶಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತೇನೆ’ ಎಂದರು.</p><p>‘ರಾಜ್ಯದ ಜನತೆಗೆ ನನ್ನ ಮೇಲೆ ಅಪಾರ ವಿಶ್ವಾಸ ಇದೆ. ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಪ್ರಯತ್ನ ಮಾಡುತ್ತೇನೆ. 1985ರಿಂದ ಇಲ್ಲಿಯವರೆಗೂ ಕಷ್ಟ ನೋಡಿದ್ದೇನೆ, ಸುಖ ನೋಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅಧಿಕಾರ ನೋಡಿದ್ದೇನೆ. ಅನೇಕ ರಾಜಕೀಯ ತಂತ್ರಗಳ ಬಲೆಗೆ ಬಿದ್ದಿದ್ದೇನೆ. ತಿಹಾರ್ ಜೈಲಿಗೆ ಹೋಗುವ ಪರಿಸ್ಥಿತಿ ಬಂತು. ನಾನು ಎಂದಿಗೂ ಎದೆಗುಂದಲಿಲ್ಲ. ನಾನು ಭರವಸೆಗಳ ಮೇಲೆ ಬದುಕಿದೆ. ಇದೇ ವಿಶ್ವಾಸ ಮತ್ತೆ ರಾಜ್ಯದ ಜನರ ಸೇವೆ ಮಾಡಿ, ಸಾಕ್ಷಿಗುಡ್ಡೆ ಬಿಟ್ಟು ಹೋಗಲು ಅವಕಾಶ ಸಿಕ್ಕಿದೆ’ ಎಂದು ಭಾವನಾತ್ಮಕವಾಗಿ ನುಡಿದರು.</p><p><strong>ಕುಟುಂಬದ ನಾಲ್ವರು ರಾಜಕಾರಣದಲ್ಲಿ</strong></p><p>ಶಿವಕುಮಾರ್ ಅವರ ಕುಟುಂಬದ ಹಲವರು ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ.</p><p>ಅವರ ಸೋದರ ಡಿ.ಕೆ.ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಈಗ ಬಮೂಲ್ ಅಧ್ಯಕ್ಷರಾಗಿದ್ದಾರೆ.</p><p>ಶಿವಕುಮಾರ್ ಅವರ ಷಡ್ಡಕ ಎಚ್.ಡಿ.ರಂಗನಾಥ್ ಕುಣಿಗಲ್ ಕ್ಷೇತ್ರದ ಶಾಸಕ. ಶಿವಕುಮಾರ್ ಅವರ ಸೋದರ ಸಂಬಂಧಿ ಎಸ್.ರವಿ, ವಿಧಾನ ಪರಿಷತ್ತಿನ<br>ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರು ಶಿವಕುಮಾರ್ ಅವರ ಅಳಿಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ವಿ</strong>ವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಶೀಘ್ರವೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p><p>ಈ ಹುದ್ದೆಗಳ ಭರ್ತಿಗೆ ಇದ್ದ ಎಲ್ಲ ತೊಡಕುಗಳು ನಿವಾರಣೆ ಆಗಿವೆ. ಎಲ್ಲ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ವೇಳಾಪಟ್ಟಿ ಪ್ರಕಟಿಸಲು ಸೂಚನೆ ನೀಡಲಾಗಿದೆ ಎಂದರು.</p><p>ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಬಂದ ಅವರು, ಮೂರನೇ ಮಹಡಿಯ ಕೊಠಡಿಯನ್ನು ಧಾರ್ಮಿಕ ವಿಧಿಗಳ ಮೂಲಕ ಪ್ರವೇಶಿಸಿದರು. ಬಳಿಕ, ಸಂಪುಟ ಸಭೆ ನಡೆಯುವ ಸಭಾಂಗಣದಲ್ಲಿ ಸುಮಾರು ಎರಡುಗಂಟೆ ತಮ್ಮ ಚೊಚ್ಚಲ ಸಂಪುಟ ಸಭೆ ನಡೆಸಿದರು.</p><p>ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು, ಕೈಗೊಂಡ ನಿರ್ಣಯಗಳ ಈ ಮಾಹಿತಿ ನೀಡಿದರು.</p><p><strong>ಇತರ ತೀರ್ಮಾನಗಳು:</strong> ರಾಜ್ಯದಲ್ಲಿ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಲಭ್ಯತೆ ಬಗ್ಗೆ ಮಾಹಿತಿ ನೀಡಿ, ಭರ್ತಿ ಮಾಡುವ ಸಂಬಂಧ ‘ಖಾಸಗಿ ಉದ್ಯೋಗ ವಿನಿಮಯ ಕೇಂದ್ರ’ವನ್ನು ಸ್ಥಾಪಿಸಲಾಗುವುದು. ಐಟಿ–ಬಿಟಿ ಹೊರತುಪಡಿಸಿ ಇತರೆ ಸಾಕಷ್ಟು ಕ್ಷೇತ್ರಗಳು ಇದ್ದು, ಇಲ್ಲಿ ಉದ್ಯೋಗಾವಕಾಶಗಳು ಇವೆ. ಈ ಸಂಬಂಧ ಎಲ್ಲ ಕ್ಷೇತ್ರಗಳ ಉದ್ಯಮಿಗಳ ಜತೆ ಚರ್ಚೆ ನಡೆಸಲಾಗುವುದು. ಅವರ ಮನವೊಲಿಸಲಾಗುವುದು. ಕರ್ನಾಟಕದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ವಿವಿಧ ಉದ್ಯೋಗಗಳ ಅಗತ್ಯಕ್ಕೆ ತಕ್ಕಂತೆ ಅಭ್ಯರ್ಥಿಗಳಿಗೆ ಕೌಶಲ ತರಬೇತಿ ನೀಡಲಾಗುವುದು. ಇದಕ್ಕೆ ಪೂರಕವಾಗಿ ಮೂವರು ಸಚಿವರ ಒಂದು ಸಮಿತಿ ರಚಿಸಿ ರೂಪುರೇಷೆ ತಯಾರಿಸಿಕೊಡಲು ಸೂಚನೆ ನೀಡಲಾಗಿದೆ.</p><p>2,500 ಅಡಿಗಳವರೆಗಿನ ನಿವೇಶಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಒಸಿ ಮತ್ತು ಸಿಸಿ ಪಡೆಯುವುದರಿಂದ ಒಂದು ಬಾರಿಗೆ ವಿನಾಯ್ತಿ ನೀಡಲಾಗುವುದು. ಮೇ 31 ರೊಳಗೆ ಕಟ್ಟಡ ಕಟ್ಟಿದವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.</p><p>‘ಬಿ’ ಖಾತಾ ಹೊಂದಿರುವವರು ‘ಎ’ ಖಾತಾ ಪಡೆಯಲು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಮಹಾನಗರ ಪಾಲಿಕೆವರೆಗಿನ ಎಲ್ಲ ಹಂತಗಳಲ್ಲೂ ಅವಕಾಶ ನೀಡಲಾಗುವುದು. ಸದ್ಯಕ್ಕೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಲ್ಲಿ ಅವಕಾಶ ನೀಡಲಾಗಿತ್ತು.</p><p>ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ರಸ್ತೆಗಳ ಡಾಂಬರೀಕರಣಕ್ಕೆ ಹೊಸದಾಗಿ ₹2,000 ಕೋಟಿ ನೀಡಲಾಗುವುದು. ಮುಂದಿನ ಮೂರು– ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆಗಳನ್ನು ಡಾಂಬರೀಕರಣ ಮಾಡಲಾಗುವುದು.</p>.<p><strong>‘ಹಣ ಹೊಂದಿಸೋದು ಗೊತ್ತು’</strong></p><p>‘ಇದು ಡಿ.ಕೆ.ಸರ್ಕಾರ ಹಣ ಹೊಂದಿಸೋದು ಗೊತ್ತು’ ಎಂದು ಶಿವಕುಮಾರ್ ಕಡ್ಡಿ ಮುರಿದಂತೆ ಹೇಳಿದರು.</p><p>‘ಭಾರತ್ ಜೋಡೊ ಸಂಘಗಳಿಗೆ ನೆರವು ಮತ್ತು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ಗೆ ಅಪಾರ ಹಣ ಬೇಕಾಗಿದ್ದು, ಅದಕ್ಕೆ ಹೇಗೆ ಹೊಂದಿಸುತ್ತೀರಿ’ ಎಂಬ ಪ್ರಶ್ನೆಗೆ, ತಮ್ಮ ಎಂದಿನ ಶೈಲಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.</p><p>‘ಈ ಸರ್ಕಾರದ ಪ್ರತಿ ತೀರ್ಮಾನ ಕೇವಲ ಶಿವಕುಮಾರ್ ತೀರ್ಮಾನ ಮಾತ್ರವಲ್ಲ. ಸಾಮೂಹಿಕ ತೀರ್ಮಾನವಾಗಿರುತ್ತದೆ’ ಎಂದು ಅವರು ಪ್ರತಿಪಾದಿಸಿದರು.</p>.<p><strong>‘ಉತ್ತರ ದಿಕ್ಕಿಗೇ ಅರೇಂಜ್ ಮಾಡಿ’</strong></p><p>ಸಚಿವ ಸಂಪುಟ ಸಭೆಯ ಬಳಿಕ ಸಮಿತಿ ಸಭಾಂಗಣದಲ್ಲಿ<br>ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಬಂದ ಶಿವಕುಮಾರ್ ಅವರಿಗೆ ತಾವು ಕೂತು ಮಾತನಾಡಬೇಕಾದ ದಕ್ಷಿಣ ದಿಕ್ಕು ಸರಿ ಇಲ್ಲ ಎಂದು ಅನ್ನಿಸಿ, ಸಾಮಾನ್ಯವಾಗಿ ಎಲ್ಲ ಮುಖ್ಯಮಂತ್ರಿಗಳು ಅಧ್ಯಕ್ಷತೆ ವಹಿಸಿ ಕೂರುವ ಕಡೆಗೆ ಹೋದರು. ಅಲ್ಲಿ ಕುಳಿತಿದ್ದ ಮಾಧ್ಯಮ ಪ್ರತಿನಿಧಿಗಳನ್ನು ಎಬ್ಬಿಸಿದರು.</p><p>ಆದರೆ, ದಕ್ಷಿಣ ದಿಕ್ಕಿನಲ್ಲಿ ಟಿ.ವಿ ಕ್ಯಾಮರಾಗಳ ವ್ಯವಸ್ಥೆ ಮತ್ತು ಲೈವ್ ಇರುವುದನ್ನು ಅವರ ಗಮನಕ್ಕೆ ತಂದಾಗ ಮನಸ್ಸು ಬದಲಿಸಿ ದಕ್ಷಿಣ ದಿಕ್ಕಿನಲ್ಲೇ ಕೂತರು. ಆ ಬಳಿಕ ಅವರು, ‘ಇನ್ನು ಮುಂದೆ ಉತ್ತರ ದಿಕ್ಕಿನಲ್ಲೇ ನಾನು ಕೂತು ಮಾತನಾಡುವುದಕ್ಕೆ ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಹಿಂದೆ ಅಧಿಕಾರಿಗಳನ್ನು ಬಿಟ್ಟು ಬೇರೆ ಯಾರೂ<br>ನಿಂತಕೊಳ್ಳಬಾರದು ಎಂದು ತಾಕೀತು ಮಾಡಿದರು.</p>.<p><strong>‘ಸಿ.ಎಂ ಕುರ್ಚಿ ಜನರ ಕುರ್ಚಿ’</strong></p><p>‘ಮುಖ್ಯಮಂತ್ರಿ ಕುರ್ಚಿ ಶಿವಕುಮಾರನದ್ದಲ್ಲ, ಇದು ಜನರ ಕುರ್ಚಿ. ಜನರು ಕೊಟ್ಟಿರುವ ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ’ ಎಂದು ಶಿವಕುಮಾರ್ ಹೇಳಿದರು.</p><p>‘ನನ್ನ ವೈಯಕ್ತಿಕ ವಿಚಾರ ಬದಿಗೊತ್ತಿ, ರಾಜ್ಯದ ಜನರ ಸೇವೆಗೆ ಸಂಕಲ್ಪ ಮಾಡಿ ಅಧಿಕಾರ ಸ್ವೀಕರಿಸಿದ್ದೇನೆ. ‘ಹಿಂದಿನ ಹೆಜ್ಜೆಗಳನ್ನು ಮರೆತವನು ಮುಂದಿನ ಹೆಜ್ಜೆ ಇಡಲಾರ ಎಂಬ ಮಾತನ್ನು ನಂಬಿರುವವನು ನಾನು. ನನಗೆ ಜಾತಿ ಮೇಲೆ, ಧರ್ಮದ ಮೇಲೆ ನಂಬಿಕೆ ಇಲ್ಲ. ನನಗೆ ನಮ್ಮದೇ ಆದ ನಂಬಿಕೆ ಇರಬಹುದು. ಆದರೆ ಮಾನವ ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು’ ಎಂದರು.</p><p>‘ರೈತರು ಮತ್ತು ಕೂಲಿ ಕಾರ್ಮಿಕರ ಬಗ್ಗೆ ನನಗೆ ಕಾಳಜಿ ಇದೆ. ರೈತರ ಬಗ್ಗೆ ಮುಂದಿನ ದಿನಗಳಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳುತ್ತೇನೆ. ರೈತರು ನಗರಗಳತ್ತ ವಲಸೆ ಬರುವುದನ್ನು ತಡೆಯಲು, ಅಲ್ಲೇ ಹೊಸ ಅವಕಾಶಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತೇನೆ’ ಎಂದರು.</p><p>‘ರಾಜ್ಯದ ಜನತೆಗೆ ನನ್ನ ಮೇಲೆ ಅಪಾರ ವಿಶ್ವಾಸ ಇದೆ. ರಾಜ್ಯದ ಆಡಳಿತದಲ್ಲಿ ಹೊಸ ಬೆಳಕು ಮೂಡಿಸಲು ನನ್ನ 40 ವರ್ಷಗಳ ರಾಜಕೀಯ ಅನುಭವದಲ್ಲಿ ಪ್ರಯತ್ನ ಮಾಡುತ್ತೇನೆ. 1985ರಿಂದ ಇಲ್ಲಿಯವರೆಗೂ ಕಷ್ಟ ನೋಡಿದ್ದೇನೆ, ಸುಖ ನೋಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅಧಿಕಾರ ನೋಡಿದ್ದೇನೆ. ಅನೇಕ ರಾಜಕೀಯ ತಂತ್ರಗಳ ಬಲೆಗೆ ಬಿದ್ದಿದ್ದೇನೆ. ತಿಹಾರ್ ಜೈಲಿಗೆ ಹೋಗುವ ಪರಿಸ್ಥಿತಿ ಬಂತು. ನಾನು ಎಂದಿಗೂ ಎದೆಗುಂದಲಿಲ್ಲ. ನಾನು ಭರವಸೆಗಳ ಮೇಲೆ ಬದುಕಿದೆ. ಇದೇ ವಿಶ್ವಾಸ ಮತ್ತೆ ರಾಜ್ಯದ ಜನರ ಸೇವೆ ಮಾಡಿ, ಸಾಕ್ಷಿಗುಡ್ಡೆ ಬಿಟ್ಟು ಹೋಗಲು ಅವಕಾಶ ಸಿಕ್ಕಿದೆ’ ಎಂದು ಭಾವನಾತ್ಮಕವಾಗಿ ನುಡಿದರು.</p><p><strong>ಕುಟುಂಬದ ನಾಲ್ವರು ರಾಜಕಾರಣದಲ್ಲಿ</strong></p><p>ಶಿವಕುಮಾರ್ ಅವರ ಕುಟುಂಬದ ಹಲವರು ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ.</p><p>ಅವರ ಸೋದರ ಡಿ.ಕೆ.ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಈಗ ಬಮೂಲ್ ಅಧ್ಯಕ್ಷರಾಗಿದ್ದಾರೆ.</p><p>ಶಿವಕುಮಾರ್ ಅವರ ಷಡ್ಡಕ ಎಚ್.ಡಿ.ರಂಗನಾಥ್ ಕುಣಿಗಲ್ ಕ್ಷೇತ್ರದ ಶಾಸಕ. ಶಿವಕುಮಾರ್ ಅವರ ಸೋದರ ಸಂಬಂಧಿ ಎಸ್.ರವಿ, ವಿಧಾನ ಪರಿಷತ್ತಿನ<br>ಸದಸ್ಯರಾಗಿದ್ದಾರೆ. ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಹೆಗ್ಡೆ ಅವರು ಶಿವಕುಮಾರ್ ಅವರ ಅಳಿಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>