<p><strong>ಮೈಸೂರು:</strong> ‘ಸುಳ್ಳನ್ನೇ ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಸರ್ಕಾರವು ತಾನು ಮಾಡಿರುವ ಬೆಲೆ ಏರಿಕೆ ಸಮರ್ಥನೆಗೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯನ್ನು ಬಳಸಬಾರದು. ಪುಣ್ಯಾತ್ಮ ಮೋದಿ ಅವರು ಗ್ಯಾಸ್ ಸಿಲಿಂಡರ್ ಅನ್ನು ₹ 300 ಕಡಿಮೆ ಮಾಡಿ, ಈಗ ₹50 ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವ ಅನ್ಯಾಯವನ್ನೂ ಮಾಡಿಲ್ಲ’ ಎಂದರು.</p><p>‘ಮೋದಿ ಅಧಿಕಾರಕ್ಕೆ ಬರುವ ಮುನ್ನ ರಾಜ್ಯಕ್ಕೆ ಶೇ 31ರಷ್ಟು ತೆರಿಗೆ ಪಾಲು ಸಿಗುತ್ತಿತ್ತು. ಈಗ ಶೇ 42ರಷ್ಟು ಬರುತ್ತಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯಕ್ಕೆ 10 ವರ್ಷದಲ್ಲಿ ₹ 81,791 ಕೋಟಿ ಸಿಕ್ಕಿದ್ದರೆ, ಮೋದಿ ಸರ್ಕಾರ ಇದಕ್ಕೂ ಹೆಚ್ಚಿನ ಪಾಲನ್ನು ಕೊಟ್ಟಿದೆ’ ಎಂದರು.</p><p>‘ಸಿದ್ದರಾಮಯ್ಯ ಅವರಿಗೆ ಜಾಣ ಮರೆವಿದೆ. ಗೋಬೆಲ್ಸ್ ಸಿದ್ಧಾಂತದ ಮೇಲೆ ಅವರಿಗೆ ನಂಬಿಕೆ. ಸುಳ್ಳನ್ನೇ ಸಾವಿರ ಬಾರಿ ಹೇಳಿ ಸತ್ಯ ಮಾಡುವುದನ್ನು ಗೋಬೆಲ್ಸ್ ನೋಡಿದ್ದರೆ, ಸಿದ್ದರಾಮಯ್ಯ ತನ್ನ ಪ್ರೀತಿಯ ಶಿಷ್ಯ ಎನ್ನುತ್ತಿದ್ದರು’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸುಳ್ಳನ್ನೇ ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಸರ್ಕಾರವು ತಾನು ಮಾಡಿರುವ ಬೆಲೆ ಏರಿಕೆ ಸಮರ್ಥನೆಗೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯನ್ನು ಬಳಸಬಾರದು. ಪುಣ್ಯಾತ್ಮ ಮೋದಿ ಅವರು ಗ್ಯಾಸ್ ಸಿಲಿಂಡರ್ ಅನ್ನು ₹ 300 ಕಡಿಮೆ ಮಾಡಿ, ಈಗ ₹50 ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವ ಅನ್ಯಾಯವನ್ನೂ ಮಾಡಿಲ್ಲ’ ಎಂದರು.</p><p>‘ಮೋದಿ ಅಧಿಕಾರಕ್ಕೆ ಬರುವ ಮುನ್ನ ರಾಜ್ಯಕ್ಕೆ ಶೇ 31ರಷ್ಟು ತೆರಿಗೆ ಪಾಲು ಸಿಗುತ್ತಿತ್ತು. ಈಗ ಶೇ 42ರಷ್ಟು ಬರುತ್ತಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯಕ್ಕೆ 10 ವರ್ಷದಲ್ಲಿ ₹ 81,791 ಕೋಟಿ ಸಿಕ್ಕಿದ್ದರೆ, ಮೋದಿ ಸರ್ಕಾರ ಇದಕ್ಕೂ ಹೆಚ್ಚಿನ ಪಾಲನ್ನು ಕೊಟ್ಟಿದೆ’ ಎಂದರು.</p><p>‘ಸಿದ್ದರಾಮಯ್ಯ ಅವರಿಗೆ ಜಾಣ ಮರೆವಿದೆ. ಗೋಬೆಲ್ಸ್ ಸಿದ್ಧಾಂತದ ಮೇಲೆ ಅವರಿಗೆ ನಂಬಿಕೆ. ಸುಳ್ಳನ್ನೇ ಸಾವಿರ ಬಾರಿ ಹೇಳಿ ಸತ್ಯ ಮಾಡುವುದನ್ನು ಗೋಬೆಲ್ಸ್ ನೋಡಿದ್ದರೆ, ಸಿದ್ದರಾಮಯ್ಯ ತನ್ನ ಪ್ರೀತಿಯ ಶಿಷ್ಯ ಎನ್ನುತ್ತಿದ್ದರು’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>