<p><strong>ಬೆಂಗಳೂರು:</strong> ‘ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಸಮಗ್ರ ಸಮೀಕ್ಷೆಯ ಪ್ರಗತಿ ಬೆಂಗಳೂರು ವ್ಯಾಪ್ತಿಯಲ್ಲಿ ನಿಧಾನಗತಿಯಲ್ಲಿದೆ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಬೇಕು’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.</p>.<p>ಸಿ.ವಿ.ರಾಮನ್ ನಗರ ವ್ಯಾಪ್ತಿಯ ಎಂ.ಸಿ.ಕಾಲೊನಿಯ ದೊಡ್ಡಗುಂಟ ಬಡಾವಣೆಯಲ್ಲಿ ಬುಧವಾರ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕರ ಜತೆಗೆ ಆಂಜನೇಯ ಅವರೂ ಮನೆ–ಮನೆಗೆ ಭೇಟಿ ನೀಡಿದರು.</p>.<p>ಮಾದಿಗ ಸಮುದಾಯದವರ ಮನೆಗೆ ಭೇಟಿ ನೀಡಿದ ಅವರು, ‘ಸಮೀಕ್ಷೆ ವೇಳೆ ಎಲ್ಲರೂ ನಿಮ್ಮ ಜಾತಿಯಲ್ಲಿ ಮಾದಿಗ ಎಂದೇ ಬರೆಸಿ. ಸಮೀಕ್ಷೆಯಲ್ಲಿ ನಿಮ್ಮ ಜಾತಿಯ ಕ್ರಮ ಸಂಖ್ಯೆ 061. ಇದನ್ನು ಸರಿಯಾಗಿ ನೆನಪಿನಲ್ಲಿ ಇರಿಸಿಕೊಳ್ಳಿ’ ಎಂದರು.</p>.<p>ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ತ್ವರಿತವಾಗಿ ಆಗುತ್ತಿದೆ. ಬೆಂಗಳೂರಿನಲ್ಲಿ ನಿಧಾನವಾಗುತ್ತಿದೆ. ಜತೆಗೆ ಸಮೀಕ್ಷೆ ನಡೆಸುತ್ತಿರುವವರಿಗೂ ಪೂರ್ಣ ಮಾಹಿತಿ ಇಲ್ಲ. ಈ ಸಮಸ್ಯೆಗಳನ್ನು ಸರಿಪಡಿಸಿ, ಅವಧಿಯನ್ನೂ ವಿಸ್ತರಿಸಿ ಎಂದು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕಸದಸ್ಯ ವಿಚಾರಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಸಮಗ್ರ ಸಮೀಕ್ಷೆಯ ಪ್ರಗತಿ ಬೆಂಗಳೂರು ವ್ಯಾಪ್ತಿಯಲ್ಲಿ ನಿಧಾನಗತಿಯಲ್ಲಿದೆ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಬೇಕು’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.</p>.<p>ಸಿ.ವಿ.ರಾಮನ್ ನಗರ ವ್ಯಾಪ್ತಿಯ ಎಂ.ಸಿ.ಕಾಲೊನಿಯ ದೊಡ್ಡಗುಂಟ ಬಡಾವಣೆಯಲ್ಲಿ ಬುಧವಾರ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕರ ಜತೆಗೆ ಆಂಜನೇಯ ಅವರೂ ಮನೆ–ಮನೆಗೆ ಭೇಟಿ ನೀಡಿದರು.</p>.<p>ಮಾದಿಗ ಸಮುದಾಯದವರ ಮನೆಗೆ ಭೇಟಿ ನೀಡಿದ ಅವರು, ‘ಸಮೀಕ್ಷೆ ವೇಳೆ ಎಲ್ಲರೂ ನಿಮ್ಮ ಜಾತಿಯಲ್ಲಿ ಮಾದಿಗ ಎಂದೇ ಬರೆಸಿ. ಸಮೀಕ್ಷೆಯಲ್ಲಿ ನಿಮ್ಮ ಜಾತಿಯ ಕ್ರಮ ಸಂಖ್ಯೆ 061. ಇದನ್ನು ಸರಿಯಾಗಿ ನೆನಪಿನಲ್ಲಿ ಇರಿಸಿಕೊಳ್ಳಿ’ ಎಂದರು.</p>.<p>ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ತ್ವರಿತವಾಗಿ ಆಗುತ್ತಿದೆ. ಬೆಂಗಳೂರಿನಲ್ಲಿ ನಿಧಾನವಾಗುತ್ತಿದೆ. ಜತೆಗೆ ಸಮೀಕ್ಷೆ ನಡೆಸುತ್ತಿರುವವರಿಗೂ ಪೂರ್ಣ ಮಾಹಿತಿ ಇಲ್ಲ. ಈ ಸಮಸ್ಯೆಗಳನ್ನು ಸರಿಪಡಿಸಿ, ಅವಧಿಯನ್ನೂ ವಿಸ್ತರಿಸಿ ಎಂದು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕಸದಸ್ಯ ವಿಚಾರಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>