ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಸಾಕಷ್ಟು ಹಣ ವೆಚ್ಚ ಮಾಡುತ್ತಿದೆ. ಇತರೆ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಎದುರಾಗಿದೆ. ಮತ್ತೊಂದೆಡೆ ರಾಜ್ಯ ಬರ ಪರಿಸ್ಥಿತಿಯತ್ತ ಸಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಸಚಿವರ ಐಷಾರಾಮಿ ಕಾರು ಖರೀದಿಗೆ ತಲಾ ₹30 ಲಕ್ಷ ವೆಚ್ಚ ಮಾಡುವ ಅಗತ್ಯವಿತ್ತೇ ಎಂದು ಹಲವರು ಪ್ರಶ್ನಿಸಿದ್ದಾರೆ.