ವಿಶ್ವವಿದ್ಯಾಲಯದಲ್ಲಿ ಖಾಲಿ ಇದ್ದ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ಬೋಧಕ ವೃಂದದ 22 ಬ್ಯಾಕ್ಲಾಗ್ ಹುದ್ದೆಗಳಿಗೆ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡಗಳ ಬ್ಯಾಕ್ಲಾಗ್ ಅಧಿನಿಯಮವನ್ನು ಪಾಲಿಸದೇ ಆಯ್ಕೆ ಮಾಡಿಲಾಗಿದೆ. ಪಟ್ಟಿಯನ್ನು ರದ್ದು ಮಾಡಿ ಹೊಸದಾಗಿ ಆಯ್ಕೆ ಮಾಡಬೇಕು ಎಂದು ಭಾರತೀಯ ರಿಪಬ್ಲಿಕ್ ಪಕ್ಷದ ಅಧ್ಯಕ್ಷ ವೆಂಕಟಸ್ವಾಮಿ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ರಕ್ಷಣಾ ಒಕ್ಕೂಟದ ಎಚ್.ಇಂದ್ರಯ್ಯ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿದ್ದರು.