<p><strong>ಬೆಂಗಳೂರು</strong>: ಹಲವು ಕಾರಣಗಳನ್ನು ನೀಡಿ, ಅಂಕಿತ ಹಾಕದೆ ರಾಷ್ಟ್ರಪತಿಯ ವಿವೇಚನೆಗೆ ರಾಜ್ಯಪಾಲರು ಕಾಯ್ದಿರಿಸಿದ್ದ ದ್ವೇಷ ಭಾಷಣ ತಡೆ ಮಸೂದೆಯನ್ನು ರಾಷ್ಟ್ರಪತಿಯ ಅಂಕಿತಕ್ಕಾಗಿ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗೆ (ನ್ಯಾಯಾಂಗ) ರಾಜ್ಯ ಸರ್ಕಾರವು ಸೋಮವಾರ (ಫೆ. 4) ರವಾನಿಸಿದೆ.</p>.<p>ದ್ವೇಷ ಭಾಷಣ ಹಾಗೂ ದ್ವೇಷಾಪರಾಧಗಳನ್ನು ತಡೆಯಲು ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ -2025’ನ್ನು ಸರ್ಕಾರ ರೂಪಿಸಿ, ಅಂಕಿತ ಹಾಕುವಂತೆ ಕೋರಿ ಲೋಕಭವನಕ್ಕೆ ಕಳುಹಿಸಿತ್ತು.</p>.<p>ಆದರೆ, ಹೈಕೋರ್ಟ್ಗಳು ಮತ್ತು ಸುಪ್ರೀಂ ಕೋರ್ಟ್ ನೀಡಿದ್ದ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ಮತ್ತು ಸಾಂವಿಧಾನಿಕವಾಗಿ ಸಂರಕ್ಷಿತ ಪ್ರಜಾಪ್ರಭುತ್ವದ ಚರ್ಚೆಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟು ಮಾಡುವ ಸಾಧ್ಯತೆಯ ಆತಂಕ ವ್ಯಕ್ತಪಡಿಸಿ ಈ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು.</p>.<p>‘ದ್ವೇಷ ಅಪರಾಧಗಳನ್ನು ಸಹಿಸುವುದಿಲ್ಲ’ ಎಂದು 2018ರ ಜುಲೈ 17ರಂದು ಹಾಗೂ ‘ಕೋಮು ದ್ವೇಷ ಹರಡುವ ಅಥವಾ ದ್ವೇಷ ಭಾಷಣದಲ್ಲಿ ತೊಡಗಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ’ ಎಂದು 2025ರ ಮೇ 5ರಂದು ಸುಪ್ರೀಂ ಕೋರ್ಟ್ ಪ್ರತ್ಯೇಕ ತೀರ್ಪುಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ತೀರ್ಪುಗಳನ್ನು ಪರಿಗಣಿಸಿ ಮಸೂದೆಯನ್ನು ರೂಪಿಸಲಾಗಿದೆ. ಹೀಗಾಗಿ, ಅಂಕಿತ ಹಾಕುವಂತೆ ರಾಷ್ಟ್ರಪತಿಗೆ ಮನವಿ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಲವು ಕಾರಣಗಳನ್ನು ನೀಡಿ, ಅಂಕಿತ ಹಾಕದೆ ರಾಷ್ಟ್ರಪತಿಯ ವಿವೇಚನೆಗೆ ರಾಜ್ಯಪಾಲರು ಕಾಯ್ದಿರಿಸಿದ್ದ ದ್ವೇಷ ಭಾಷಣ ತಡೆ ಮಸೂದೆಯನ್ನು ರಾಷ್ಟ್ರಪತಿಯ ಅಂಕಿತಕ್ಕಾಗಿ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗೆ (ನ್ಯಾಯಾಂಗ) ರಾಜ್ಯ ಸರ್ಕಾರವು ಸೋಮವಾರ (ಫೆ. 4) ರವಾನಿಸಿದೆ.</p>.<p>ದ್ವೇಷ ಭಾಷಣ ಹಾಗೂ ದ್ವೇಷಾಪರಾಧಗಳನ್ನು ತಡೆಯಲು ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ -2025’ನ್ನು ಸರ್ಕಾರ ರೂಪಿಸಿ, ಅಂಕಿತ ಹಾಕುವಂತೆ ಕೋರಿ ಲೋಕಭವನಕ್ಕೆ ಕಳುಹಿಸಿತ್ತು.</p>.<p>ಆದರೆ, ಹೈಕೋರ್ಟ್ಗಳು ಮತ್ತು ಸುಪ್ರೀಂ ಕೋರ್ಟ್ ನೀಡಿದ್ದ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ಮತ್ತು ಸಾಂವಿಧಾನಿಕವಾಗಿ ಸಂರಕ್ಷಿತ ಪ್ರಜಾಪ್ರಭುತ್ವದ ಚರ್ಚೆಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟು ಮಾಡುವ ಸಾಧ್ಯತೆಯ ಆತಂಕ ವ್ಯಕ್ತಪಡಿಸಿ ಈ ಮಸೂದೆಯನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು.</p>.<p>‘ದ್ವೇಷ ಅಪರಾಧಗಳನ್ನು ಸಹಿಸುವುದಿಲ್ಲ’ ಎಂದು 2018ರ ಜುಲೈ 17ರಂದು ಹಾಗೂ ‘ಕೋಮು ದ್ವೇಷ ಹರಡುವ ಅಥವಾ ದ್ವೇಷ ಭಾಷಣದಲ್ಲಿ ತೊಡಗಿಸಿಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ’ ಎಂದು 2025ರ ಮೇ 5ರಂದು ಸುಪ್ರೀಂ ಕೋರ್ಟ್ ಪ್ರತ್ಯೇಕ ತೀರ್ಪುಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ತೀರ್ಪುಗಳನ್ನು ಪರಿಗಣಿಸಿ ಮಸೂದೆಯನ್ನು ರೂಪಿಸಲಾಗಿದೆ. ಹೀಗಾಗಿ, ಅಂಕಿತ ಹಾಕುವಂತೆ ರಾಷ್ಟ್ರಪತಿಗೆ ಮನವಿ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>