ಯಾವುದೇ ಸರ್ಕಾರ ತಮ್ಮ ರಾಜಕೀಯ ಅನುಕೂಲಗಳಿಗಾಗಿ ಸಂವಿಧಾನದ ಮೇಲೆ ಸವಾರಿ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ತೀರ್ಪು ಎತ್ತಿ ತೋರಿಸಿದೆಗಿರೀಶ್ ಭಾರದ್ವಾಜ್, ಅರ್ಜಿದಾರ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ದುಷ್ಪೃತ್ಯಗಳಿಗೂ ರಕ್ಷಣೆ ಸಿಗುತ್ತದೆ ಎಂಬ ಮನಃಸ್ಥಿತಿಯ ದುಷ್ಟ ಶಕ್ತಿಗಳಿಗೆ ಹೈಕೋರ್ಟ್ನ ಈ ತೀರ್ಪು ಎಚ್ಚರಿಕೆ ಗಂಟೆಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ರಾಜಕಾರಣದಲ್ಲಿ ಚುನಾವಣೆಯ ಸಂದರ್ಭವನ್ನು ಹೊರತುಪಡಿಸಿ ಅಧಿಕಾರಕ್ಕೆ ಬಂದ ನಂತರ ಜನರ ರಕ್ಷಣೆಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವುದು, ಸಮಾಜಘಾತಕ ಶಕ್ತಿಗಳ ಹೆಡೆಮುರಿ ಕಟ್ಟುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು. ಇನ್ನು ಮುಂದಾದರೂ ಕಾಂಗ್ರೆಸ್ ಸರ್ಕಾರವು ಕಾನೂನು ಸುವ್ಯವಸ್ಥೆಯನ್ನು ಸುಭದ್ರಗೊಳಿಸುವ ಬದ್ಧತೆ ತೋರಲಿ. ಸಮಾಜಘಾತುಕ ಮುಸ್ಲಿಂ ಕೋಮುವಾದಿ ಗೂಂಡಾಗಳಿಗೆ ರಕ್ಷಣೆ ಒದಗಿಸುವುದನ್ನು ನಿಲ್ಲಿಸಲಿಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಪ್ರಕರಣವನ್ನು ವಾಪಸ್ ಪಡೆಯುವುದು ಸರಿಯಲ್ಲ ಎಂದು ನಾನು ಹೇಳಿದ್ದೆ. ಒತ್ತಡ ಮತ್ತು ಓಲೈಕೆ ರಾಜಕಾರಣಕ್ಕಾಗಿ ಸರ್ಕಾರ ಪ್ರಕರಣ ವಾಪಸ್ ಪಡೆದಿತ್ತು. ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಈಗ ಛೀಮಾರಿ ಹಾಕಿದೆ. ರಾಜ್ಯದ ಸಚಿವ ಸಂಪುಟವು ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೇ ಹೊರತು, ಓಲೈಕೆ ರಾಜಕಾರಣ ವನ್ನಲ್ಲ.ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ನಡೆಸಿದವರ ವಿರುದ್ಧ ಸರ್ಕಾರವು ಇನ್ನಾದರೂ ಕಾನೂನು ಕ್ರಮ ತೆಗೆದುಕೊಳ್ಳಲಿಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದ
ತಾವು ಕೋಮುವಾದದ ವಿರೋಧಿಗಳು ಎಂದು ಪೋಸು ನೀಡುವ ಕಾಂಗ್ರೆಸ್ ಪಕ್ಷವು, ಮತ್ತೊಂದೆಡೆ ಕೋಮುವಾದಿಗಳಿಗೆ ಆಶ್ರಯ ನೀಡುತ್ತದೆ. ಸರ್ಕಾರ ವಾಪಸ್ ಪಡೆದಿದ್ದ 43 ಪ್ರಕರಣಗಳಲ್ಲಿ ಒಂದಾದರೂ ಜನಪರ ಹೋರಾಟದ, ಕನ್ನಡ ಚಳವಳಿಗಾರರ ಅಥವಾ ರೈತರ ಪರ ಹೋರಾಟದ ಪ್ರಕರಣಗಳಿದ್ದವೇ? ಪೊಲೀಸ್ ಠಾಣೆಗೆ ಬೆಂಕಿ ಹಾಕಿ, ಸಾರ್ವಜನಿಕರ ಆಸ್ತಿ ಹಾನಿ ಮಾಡಿದ ಪ್ರಕರಣಗಳವು. ಹೈಕೋರ್ಟ್ ಇವರಿಗೆ ಸರಿಯಾಗಿ ಛೀಮಾರಿ ಹಾಕಿದೆಸಿ.ಟಿ.ರವಿ, ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.