ಸರ್ಕಾರದ ಆದೇಶವು ಸಂವಿಧಾನದ ಅಧ್ಯಾಯ IIIರಲ್ಲಿ ಪ್ರತಿಪಾದಿಸಲಾದ ಹಕ್ಕುಗಳನ್ನು, ಅದರಲ್ಲೂ ನಿರ್ದಿಷ್ಟವಾಗಿ 19(1)(ಎ) ಮತ್ತು (ಬಿ) ಅಡಿಯಲ್ಲಿ ಕೊಡಮಾಡಲಾಗಿರುವ ಸ್ವಾತಂತ್ರ್ಯಗಳನ್ನು ಉಲ್ಲಂಘಿಸುತ್ತದೆ.
-ಎಂ.ನಾಗಪ್ರಸನ್ನ, ನ್ಯಾಯಮೂರ್ತಿ
ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ನ ಏಕ ಸದಸ್ಯ ಪೀಠ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಾರ್ವಜನಿಕ ಸ್ಥಳಗಳಲ್ಲಿ ಜನರ ಜಮಾವಣೆಗೆ ಪೊಲೀಸ್ ಇಲಾಖೆ ಪೂರ್ವಾನುಮತಿ ಕಡ್ಡಾಯ ಎನ್ನುವ ಸಂಪುಟ ನಿರ್ಧಾರ ಜಾರಿಗೆ ಹೈಕೋರ್ಟ್ ತಡೆ ನೀಡಿರುವುದು ಸರ್ಕಾರಕ್ಕೆ ಹಿನ್ನಡೆ, ಕುತಂತ್ರ, ಷಡ್ಯಂತ್ರಕ್ಕೆ ತಡೆ.