<p><strong>ಬೆಂಗಳೂರು:</strong> ‘ಹಣ ದುರುಪಯೋಗ ಮತ್ತು ಬೈ–ಲಾ ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಚಲನಚಿತ್ರ ಅಕಾಡೆಮಿ ವಿರುದ್ಧ ನೀಡಲಾಗಿರುವ ಅರ್ಜಿದಾರರ ದೂರನ್ನು ಪರಿಗಣಿಸಿ’ ಎಂದು ಹೈಕೋರ್ಟ್, ಬೆಂಗಳೂರು ನಗರ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಆದೇಶಿಸಿದೆ.</p>.<p>ತುಮಕೂರಿನ, ‘ಮೆಸರ್ಸ್ ಸಂವಿಧಾನ ಸಿನಿ ಕಂಬೈನ್ಸ್’ ನಿರ್ಮಾಪಕ ಎ.ವಿ.ನಾಗರಾಜು (ಟೈಗರ್ ನಾಗ) ಮತ್ತು ಆನೇಕಲ್ನ ಎ.ಆರ್.ಪ್ರೊಡಕ್ಷನ್ಸ್ನ ನಿರ್ಮಾಪಕ ಅರುಣ್ ರೈ ತೋಡರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಅಕಾಡೆಮಿಯ ಲೆಕ್ಕಪರಿಶೋಧನೆಗೆ ಸಂಬಂಧಿಸಿದ ಲೆಕ್ಕಪತ್ರಗಳನ್ನು ಸಲ್ಲಿಸಲು ಮತ್ತು ಕನ್ನಡ ಚಲನಚಿತ್ರ ಅಕಾಡೆಮಿಯ ಪದಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಅರ್ಜಿದಾರರು 2025ರ ಆಗಸ್ಟ್ 18ರಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ನೋಂದಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಎತ್ತಿರುವ ದೂರುಗಳನ್ನು ಪರಿಶೀಲಿಸಿ’ ಎಂದು ನ್ಯಾಯಪೀಠ ಪ್ರತಿವಾದಿ ಸಹಕಾರ ಸಂಘಗಳ ಉಪನಿಬಂಧಕರಿಗೆ ನಿರ್ದೇಶಿಸಿದೆ.</p>.<p>‘ಅರ್ಜಿದಾರರು, 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2026ರ ಜನವರಿ 29ರಿಂದ 2026ರ ಫೆಬ್ರುವರಿ 6ರವರೆಗೆ ನಡೆಸುವುದಕ್ಕೂ ಮುನ್ನ ರಾಜ್ಯ ಸರ್ಕಾರ ಹೊಸ ಆಯ್ಕೆ ಸಮಿತಿ ರಚಿಸಬೇಕು ಎಂದು ಕೋರಿದ ಅಂಶವೂ ಅರ್ಜಿಯಲ್ಲಿ ಅಡಕವಾಗಿದೆ. ಆದರೆ, ಚಲನಚಿತ್ರೋತ್ಸವ ಈಗಾಗಲೇ ಮುಕ್ತಾಯಗೊಂಡಿದ್ದು, ಈ ಅಂಶದ ಬಗ್ಗೆ ಗಮನಹರಿಸುವುದು ಈಗ ವ್ಯರ್ಥ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಅರ್ಜಿಯಲ್ಲಿ, ಕನ್ನಡ ಸಂಸ್ಕೃತಿ ಮತ್ತು ಮಾಹಿತಿ ಇಲಾಖೆ ಕಾರ್ಯದರ್ಶಿ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹಾಗೂ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನೂ ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹಣ ದುರುಪಯೋಗ ಮತ್ತು ಬೈ–ಲಾ ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಚಲನಚಿತ್ರ ಅಕಾಡೆಮಿ ವಿರುದ್ಧ ನೀಡಲಾಗಿರುವ ಅರ್ಜಿದಾರರ ದೂರನ್ನು ಪರಿಗಣಿಸಿ’ ಎಂದು ಹೈಕೋರ್ಟ್, ಬೆಂಗಳೂರು ನಗರ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಆದೇಶಿಸಿದೆ.</p>.<p>ತುಮಕೂರಿನ, ‘ಮೆಸರ್ಸ್ ಸಂವಿಧಾನ ಸಿನಿ ಕಂಬೈನ್ಸ್’ ನಿರ್ಮಾಪಕ ಎ.ವಿ.ನಾಗರಾಜು (ಟೈಗರ್ ನಾಗ) ಮತ್ತು ಆನೇಕಲ್ನ ಎ.ಆರ್.ಪ್ರೊಡಕ್ಷನ್ಸ್ನ ನಿರ್ಮಾಪಕ ಅರುಣ್ ರೈ ತೋಡರ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.</p>.<p>‘ಅಕಾಡೆಮಿಯ ಲೆಕ್ಕಪರಿಶೋಧನೆಗೆ ಸಂಬಂಧಿಸಿದ ಲೆಕ್ಕಪತ್ರಗಳನ್ನು ಸಲ್ಲಿಸಲು ಮತ್ತು ಕನ್ನಡ ಚಲನಚಿತ್ರ ಅಕಾಡೆಮಿಯ ಪದಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಅರ್ಜಿದಾರರು 2025ರ ಆಗಸ್ಟ್ 18ರಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ನೋಂದಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಎತ್ತಿರುವ ದೂರುಗಳನ್ನು ಪರಿಶೀಲಿಸಿ’ ಎಂದು ನ್ಯಾಯಪೀಠ ಪ್ರತಿವಾದಿ ಸಹಕಾರ ಸಂಘಗಳ ಉಪನಿಬಂಧಕರಿಗೆ ನಿರ್ದೇಶಿಸಿದೆ.</p>.<p>‘ಅರ್ಜಿದಾರರು, 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2026ರ ಜನವರಿ 29ರಿಂದ 2026ರ ಫೆಬ್ರುವರಿ 6ರವರೆಗೆ ನಡೆಸುವುದಕ್ಕೂ ಮುನ್ನ ರಾಜ್ಯ ಸರ್ಕಾರ ಹೊಸ ಆಯ್ಕೆ ಸಮಿತಿ ರಚಿಸಬೇಕು ಎಂದು ಕೋರಿದ ಅಂಶವೂ ಅರ್ಜಿಯಲ್ಲಿ ಅಡಕವಾಗಿದೆ. ಆದರೆ, ಚಲನಚಿತ್ರೋತ್ಸವ ಈಗಾಗಲೇ ಮುಕ್ತಾಯಗೊಂಡಿದ್ದು, ಈ ಅಂಶದ ಬಗ್ಗೆ ಗಮನಹರಿಸುವುದು ಈಗ ವ್ಯರ್ಥ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಅರ್ಜಿಯಲ್ಲಿ, ಕನ್ನಡ ಸಂಸ್ಕೃತಿ ಮತ್ತು ಮಾಹಿತಿ ಇಲಾಖೆ ಕಾರ್ಯದರ್ಶಿ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹಾಗೂ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನೂ ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಜಿ.ಆರ್.ಮೋಹನ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>