<p><strong>ಬೆಂಗಳೂರು</strong>: ಗೌರಿ–ಗಣೇಶ ಹಬ್ಬ, ಈದ್ ಮಿಲಾದ್ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಡಿಜೆ (ಡಿಸ್ಕ್ ಜಾಕಿ–ಡಿಜಿಟಲ್ ಜಾಕಿ) ಹಾಗೂ ಸೌಂಡ್ ಸಿಸ್ಟಂ ಬಳಕೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಇದೇ 14 ರಂದು ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ, ‘ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘಟನೆ’ ಪದಾಧಿಕಾರಿಯಾದ ಚಾಮರಾಜಪೇಟೆಯ ಶಂಕರ್, ರಿಟ್ ಅರ್ಜಿ ಸಲ್ಲಿಸಿದ್ದರು.</p>.<p>ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ಈ ಅರ್ಜಿ ವಿಚಾರಣೆ ನಡೆಸಿ, ‘ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೌಂಡ್ ಸಿಸ್ಟಂ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ವಸತಿ ಪ್ರದೇಶದಲ್ಲಿ ಶಬ್ದದ ಮಟ್ಟ ಹಗಲಿನ ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಮಟ್ಟಕ್ಕೆ ನಿರ್ಬಂಧಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಡಿಜೆ ಮತ್ತು ಸೌಂಡ್ ಸಿಸ್ಟಂ ಬಳಕೆಯನ್ನು ಒಪ್ಪಿಕೊಳ್ಳುವುದು ಈ ನ್ಯಾಯಾಲಯಕ್ಕೆ ಕಷ್ಟ’ ಎಂದು ನ್ಯಾಯಪೀಠ ತಿಳಿಸಿತು.</p>.<p><strong>ಆಕ್ಷೇಪ ಏನಿತ್ತು?</strong></p><p>‘ಶಬ್ದ ಮಾಲಿನ್ಯ ನಿಯಮಗಳು–2000ಕ್ಕೆ ಅನುಗುಣವಾಗಿ ಮಾರ್ಗದರ್ಶಿ ಸೂತ್ರ ಹೆಣೆಯುವುದನ್ನು ಬಿಟ್ಟು ಈ ರೀತಿ ವ್ಯಾಪಕ ಕಾರ್ಯಾದೇಶ ಹೊರಡಿಸಿರುವುದು ಸಾಂವಿಧಾನಿಕವಾಗಿ ಕೊಡಮಾಡಿರುವ ನಮ್ಮ ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ಸೌಂಡ್ ಸಿಸ್ಟಂ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದೆ. ಆದರೆ, ಬಳಕೆಯನ್ನು ನಿರ್ಬಂಧಿಸುವುದು ಸಮಂಜಸ ಕ್ರಮವಲ್ಲ’ ಎಂದು ಅರ್ಜಿದಾರರು ಸುತ್ತೋಲೆಯನ್ನು ಆಕ್ಷೇಪಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೌರಿ–ಗಣೇಶ ಹಬ್ಬ, ಈದ್ ಮಿಲಾದ್ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಡಿಜೆ (ಡಿಸ್ಕ್ ಜಾಕಿ–ಡಿಜಿಟಲ್ ಜಾಕಿ) ಹಾಗೂ ಸೌಂಡ್ ಸಿಸ್ಟಂ ಬಳಕೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಇದೇ 14 ರಂದು ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ, ‘ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘಟನೆ’ ಪದಾಧಿಕಾರಿಯಾದ ಚಾಮರಾಜಪೇಟೆಯ ಶಂಕರ್, ರಿಟ್ ಅರ್ಜಿ ಸಲ್ಲಿಸಿದ್ದರು.</p>.<p>ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ಈ ಅರ್ಜಿ ವಿಚಾರಣೆ ನಡೆಸಿ, ‘ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೌಂಡ್ ಸಿಸ್ಟಂ ಮತ್ತು ಡಿಜೆ ನಿರ್ಬಂಧಿಸಿ ಬೆಂಗಳೂರು ಪೊಲೀಸರು ಹೊರಡಿಸಿರುವ ಸುತ್ತೋಲೆಯಲ್ಲಿ ಯಾವುದೇ ಲೋಪಗಳಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.</p>.<p>‘ವಸತಿ ಪ್ರದೇಶದಲ್ಲಿ ಶಬ್ದದ ಮಟ್ಟ ಹಗಲಿನ ವೇಳೆ 55 ಡೆಸಿಬಲ್ ಮತ್ತು ರಾತ್ರಿ ವೇಳೆ 45 ಡೆಸಿಬಲ್ ಮಟ್ಟಕ್ಕೆ ನಿರ್ಬಂಧಿಸಲಾಗಿದೆ. ಆದ್ದರಿಂದ, ಸಾರ್ವಜನಿಕ ಡಿಜೆ ಮತ್ತು ಸೌಂಡ್ ಸಿಸ್ಟಂ ಬಳಕೆಯನ್ನು ಒಪ್ಪಿಕೊಳ್ಳುವುದು ಈ ನ್ಯಾಯಾಲಯಕ್ಕೆ ಕಷ್ಟ’ ಎಂದು ನ್ಯಾಯಪೀಠ ತಿಳಿಸಿತು.</p>.<p><strong>ಆಕ್ಷೇಪ ಏನಿತ್ತು?</strong></p><p>‘ಶಬ್ದ ಮಾಲಿನ್ಯ ನಿಯಮಗಳು–2000ಕ್ಕೆ ಅನುಗುಣವಾಗಿ ಮಾರ್ಗದರ್ಶಿ ಸೂತ್ರ ಹೆಣೆಯುವುದನ್ನು ಬಿಟ್ಟು ಈ ರೀತಿ ವ್ಯಾಪಕ ಕಾರ್ಯಾದೇಶ ಹೊರಡಿಸಿರುವುದು ಸಾಂವಿಧಾನಿಕವಾಗಿ ಕೊಡಮಾಡಿರುವ ನಮ್ಮ ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ಸೌಂಡ್ ಸಿಸ್ಟಂ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದೆ. ಆದರೆ, ಬಳಕೆಯನ್ನು ನಿರ್ಬಂಧಿಸುವುದು ಸಮಂಜಸ ಕ್ರಮವಲ್ಲ’ ಎಂದು ಅರ್ಜಿದಾರರು ಸುತ್ತೋಲೆಯನ್ನು ಆಕ್ಷೇಪಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>