<p><strong>ಬೆಂಗಳೂರು:</strong> ಬಾಲಕಿಯೊಬ್ಬಳ ಸ್ಕ್ಯಾನಿಂಗ್ (ಭ್ರೂಣಲಿಂಗ ಪತ್ತೆ) ವರದಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಕಾಯ್ದೆಯ ನಿಯಮ ಉಲ್ಲಂಘಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ರೇಡಿಯಾಲಜಿ ತಜ್ಞರೊಬ್ಬರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.</p>.<p>ಜಾಮೀನು ಕೋರಿ ಮೈಸೂರಿನ ಡಾ.ವೈ.ಆರ್.ಹರ್ಷಿತ್ (32) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಅರ್ಜಿದಾರರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ 'ನವಿ ಡಯಾಗ್ನಾಸ್ಟಿಕ್ ಸೆಂಟರ್'ನಲ್ಲಿ ರೇಡಿಯಾಲಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ಪ್ರಕರಣ: ಲೋಕಾಯುಕ್ತ ಅಧಿಕಾರಿಗಳು ಕೆ.ಆರ್. ಪೇಟೆಯ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ 2026ರ ಏಪ್ರಿಲ್ 17ರಂದು ಹಠಾತ್ ದಾಳಿ ನಡೆಸಿದ್ದರು. ಈ ವೇಳೆ ಬಾಲಕಿಯೊಬ್ಬಳಿಗೆ ಸ್ಕ್ಯಾನಿಂಗ್ ಮಾಡಿದ ವರದಿಗಳು ದೊರಕಿದ್ದವು.</p>.<p>‘ಹರ್ಷಿತ್ ಅವರು ಮಾಹಿತಿಯನ್ನು ಇಲಾಖೆಗೆ ತಿಳಿಸದೆ ಕರ್ತವ್ಯ ಲೋಪ ಎಸಗಿದ್ದಾರೆ’ ಎಂದು ಆರೋಪಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಈ ಹಿನ್ನೆಲೆಯಲ್ಲಿ ಹರ್ಷಿತ್ ಅವರನ್ನು ಬಂಧಿಸಲಾಗಿತ್ತು. ಮಂಡ್ಯದ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಲಕಿಯೊಬ್ಬಳ ಸ್ಕ್ಯಾನಿಂಗ್ (ಭ್ರೂಣಲಿಂಗ ಪತ್ತೆ) ವರದಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಕಾಯ್ದೆಯ ನಿಯಮ ಉಲ್ಲಂಘಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ರೇಡಿಯಾಲಜಿ ತಜ್ಞರೊಬ್ಬರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.</p>.<p>ಜಾಮೀನು ಕೋರಿ ಮೈಸೂರಿನ ಡಾ.ವೈ.ಆರ್.ಹರ್ಷಿತ್ (32) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಅರ್ಜಿದಾರರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ 'ನವಿ ಡಯಾಗ್ನಾಸ್ಟಿಕ್ ಸೆಂಟರ್'ನಲ್ಲಿ ರೇಡಿಯಾಲಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ಪ್ರಕರಣ: ಲೋಕಾಯುಕ್ತ ಅಧಿಕಾರಿಗಳು ಕೆ.ಆರ್. ಪೇಟೆಯ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ 2026ರ ಏಪ್ರಿಲ್ 17ರಂದು ಹಠಾತ್ ದಾಳಿ ನಡೆಸಿದ್ದರು. ಈ ವೇಳೆ ಬಾಲಕಿಯೊಬ್ಬಳಿಗೆ ಸ್ಕ್ಯಾನಿಂಗ್ ಮಾಡಿದ ವರದಿಗಳು ದೊರಕಿದ್ದವು.</p>.<p>‘ಹರ್ಷಿತ್ ಅವರು ಮಾಹಿತಿಯನ್ನು ಇಲಾಖೆಗೆ ತಿಳಿಸದೆ ಕರ್ತವ್ಯ ಲೋಪ ಎಸಗಿದ್ದಾರೆ’ ಎಂದು ಆರೋಪಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಈ ಹಿನ್ನೆಲೆಯಲ್ಲಿ ಹರ್ಷಿತ್ ಅವರನ್ನು ಬಂಧಿಸಲಾಗಿತ್ತು. ಮಂಡ್ಯದ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>