2022ರ ಮಾರ್ಚ್ 2ರಂದು ವೈದ್ಯಕೀಯ ಶಿಕ್ಷಣ ಇಲಾಖೆಯು ಕೆಇಎಗೆ ವಾಟ್ಸ್ ಆ್ಯಪ್ ಮೂಲಕ ಪತ್ರ ರವಾನಿಸಿ ರಾಜೇಶ್ ಕುಮಾರ್ ಅವರಿಗೆ ಹಂಚಿಕೆಯಾಗಿದ್ದ ಸೀಟನ್ನು ರದ್ದುಪಡಿಸಿರುವುದಾಗಿ ತಿಳಿಸಿತ್ತು. ಆದರೆ, ಈ ಸೀಟು ಎರಡನೇ ಸುತ್ತಿನ ಕೌನ್ಸೆಲಿಂಗ್ನಲ್ಲಿ ಖಾಲಿ ಇರುವ ಬಗ್ಗೆ ಕಾಣಿಸಿರಲಿಲ್ಲ. ಏತನ್ಮಧ್ಯೆ, ಇದೇ ಸೀಟನ್ನು ಪ್ರದೀಪ್ ನಾಯಕ್ ಅವರಿಗೆ ಹಂಚಿಕೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಡಾ.ರಾಜೇಶ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.