‘ಆರೋಪ ಎದುರಾದಲ್ಲಿ ಮಾಹಿತಿದಾರರು ಸಹಿ ಹಾಕಿ ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಬಹುದು. ಇಲ್ಲವೇ, ನಿಖರ ಮಾಹಿತಿಯ ಆಧಾರದಲ್ಲಿ ಪೊಲೀಸ್ ಅಧಿಕಾರಿಯೇ ಖುದ್ದು ದೂರು ದಾಖಲಿಸಿಕೊಂಡು ಎಫ್ಐಆರ್ ದಾಖಲಿಸುತ್ತಾರೆ. ಈ ಎರಡರಲ್ಲಿಯೂ ಮೊದಲು ಮಾಹಿತಿಯನ್ನು ಲಿಖಿತವಾಗಿ ದಾಖಲಿಸಿಕೊಂಡು ನಂತರ ತನಿಖೆ ನಡೆಸಲಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ಅಂತಹ ಪ್ರಕ್ರಿಯೆ ನಡೆದಿಲ್ಲ. ಬದಲಿಗೆ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದವರಿಂದ ಮದ್ಯ ವಶಪಡಿಸಿಕೊಂಡು ಪಂಚನಾಮೆ ನಡೆಸಿದ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನು ಬಾಹಿರ. ಈ ಅಂಶವನ್ನು ಪರಿಗಣಿಸದೆ ಶಿಕ್ಷೆ ವಿಧಿಸಿರುವುದು ದೋಷದಿಂದ ಕೂಡಿದೆ’ ಎಂದು ನ್ಯಾಯಪೀಠ ಹೇಳಿದೆ.