ಈ ಕುರಿತಂತೆ ಬೆಳಗಾವಿಯ ಶ್ರೀ ಮಲಪ್ರಭ ಸಹಕಾರಿ ಸಕ್ಕರೆ ಕಾರ್ಖಾನೆ ಸೊಸೈಟಿ ಅಧ್ಯಕ್ಷ ನಾಸಿರುದ್ದೀನ್ ಭಗವಾನ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದ್ದು, ’ಒಂದು ವೇಳೆ ಮೂರನೇ ಒಂದರಷ್ಟು ಅಂದರೆ ಶೇ 33ರಷ್ಟು ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದರೆ, ಯಾವುದೇ ಕಾರಣ ನೀಡುವ ಅಗತ್ಯವಿಲ್ಲ‘ ಎಂದು ಸ್ಪಷ್ಟಪಡಿಸಿದೆ.