<p><strong>ಬೆಂಗಳೂರು:</strong> 'ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರನ್ನು ಮಾತ್ರ ವಿಚಾರಣೆ ನಡೆಸಬೇಕೆಂದೇನೂ ಇಲ್ಲ; ಭಯೋತ್ಪಾದಕ ಕೃತ್ಯವೆಸಗಿದ ಯಾವುದೇ ವ್ಯಕ್ತಿಯನ್ನೂ ವಿಚಾರಣೆಗೆ ಒಳಪಡಿಸಬಹುದು' ಎಂದು ಹೈಕೋರ್ಟ್ ಆದೇಶಿಸಿದೆ.</p>.<p>ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ಇರ್ಫಾನ್ ಪಾಷಾ ಹಾಗೂ ಮೊಹಮ್ಮದ್ ಮುಜೀಬ್ ಉಲ್ಲಾ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಗಳನ್ನು ವಜಾಗೊಳಿಸಿರುವ ಹೈಕೋರ್ಟ್ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ವಿಭಾಗೀಯ ನ್ಯಾಯಪೀಠ, 'ಎನ್ಐಎ ವಿಶೇಷ ಕೋರ್ಟ್ ಆದೇಶ ರದ್ದುಪಡಿಸಲು ಯಾವುದೇ ಕಾರಣಗಳಿಲ್ಲ' ಎಂದು ಹೇಳಿದೆ.</p>.<p>'ಯುಎಪಿಎ ಕಲಂ 15ರಲ್ಲಿ ವ್ಯಾಖ್ಯಾನಿಸಲಾಗಿರುವ ಭಯೋತ್ಪಾದಕ ಕೃತ್ಯಗಳಲ್ಲಿ ಯಾವುದೇ ವ್ಯಕ್ತಿ ತನ್ನನ್ನು ತೊಡಗಿಸಿಕೊಂಡಿದ್ದರೆ, ಅವರನ್ನೂ ವಿಚಾರಣೆ ನಡೆಸಬಹುದು. ಆ ವ್ಯಕ್ತಿ ನಿಷೇಧಿತ ಉಗ್ರಗಾಮಿ ಸಂಘಟನೆಯ ಸದಸ್ಯನೇ ಆಗಿರಬೇಕೆಂದೇನೂ ಇಲ್ಲ' ಎಂದೂ ತಿಳಿಸಿದೆ. ಪ್ರಕರಣದ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಲಾಗಿದೆ. ಎನ್ಐಎ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರನ್ನು ಮಾತ್ರ ವಿಚಾರಣೆ ನಡೆಸಬೇಕೆಂದೇನೂ ಇಲ್ಲ; ಭಯೋತ್ಪಾದಕ ಕೃತ್ಯವೆಸಗಿದ ಯಾವುದೇ ವ್ಯಕ್ತಿಯನ್ನೂ ವಿಚಾರಣೆಗೆ ಒಳಪಡಿಸಬಹುದು' ಎಂದು ಹೈಕೋರ್ಟ್ ಆದೇಶಿಸಿದೆ.</p>.<p>ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ಇರ್ಫಾನ್ ಪಾಷಾ ಹಾಗೂ ಮೊಹಮ್ಮದ್ ಮುಜೀಬ್ ಉಲ್ಲಾ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಗಳನ್ನು ವಜಾಗೊಳಿಸಿರುವ ಹೈಕೋರ್ಟ್ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ವಿಭಾಗೀಯ ನ್ಯಾಯಪೀಠ, 'ಎನ್ಐಎ ವಿಶೇಷ ಕೋರ್ಟ್ ಆದೇಶ ರದ್ದುಪಡಿಸಲು ಯಾವುದೇ ಕಾರಣಗಳಿಲ್ಲ' ಎಂದು ಹೇಳಿದೆ.</p>.<p>'ಯುಎಪಿಎ ಕಲಂ 15ರಲ್ಲಿ ವ್ಯಾಖ್ಯಾನಿಸಲಾಗಿರುವ ಭಯೋತ್ಪಾದಕ ಕೃತ್ಯಗಳಲ್ಲಿ ಯಾವುದೇ ವ್ಯಕ್ತಿ ತನ್ನನ್ನು ತೊಡಗಿಸಿಕೊಂಡಿದ್ದರೆ, ಅವರನ್ನೂ ವಿಚಾರಣೆ ನಡೆಸಬಹುದು. ಆ ವ್ಯಕ್ತಿ ನಿಷೇಧಿತ ಉಗ್ರಗಾಮಿ ಸಂಘಟನೆಯ ಸದಸ್ಯನೇ ಆಗಿರಬೇಕೆಂದೇನೂ ಇಲ್ಲ' ಎಂದೂ ತಿಳಿಸಿದೆ. ಪ್ರಕರಣದ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಲಾಗಿದೆ. ಎನ್ಐಎ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>