<p><strong>ಬೆಂಗಳೂರು: ‘</strong>ದೋಷಾರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು 2023ರ ಏಪ್ರಿಲ್ 20ರಂದು ಸೆಷನ್ಸ್ ನ್ಯಾಯಾಲಯ ನೀಡಿರುವ ಆದೇಶ ದೋಷಪೂರಿತವಾಗಿದೆ ಎಂಬ ಅರ್ಜಿಗಳ ಮೇಲಿನ ನಿಮ್ಮ ವಾದವನ್ನು ಆದಷ್ಟು ಬೇಗ ಮುಗಿಸಿಬಿಡಿ. ಏನೇ ಇದ್ದರೂ ಅದನ್ನು ಮುಂದಿನ ವಿಚಾರಣೆಯಲ್ಲಿ ನಾನು ಸಂಪೂರ್ಣ ಆಲಿಸಿ ಅಖೈರುಗೊಳಿಸುತ್ತೇನೆ. ಪುನಃ ಸಮಯ ಕೇಳಬೇಡಿ...‘ </p>.<p>ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ವಿವಿಧ ಪ್ರಕರಣಗಳಲ್ಲಿನ ಆರೋಪಗಳಿಗೆ ಸಂಬಂಧಿಸಿದ ಸೆಷನ್ಸ್ ಕೋರ್ಟ್ ವಿಚಾರಣೆಗೆ ನೀಡಲಾಗಿದ್ದ ತಡೆಯಾಜ್ಞೆ ವಿಸ್ತರಿಸುವ ಮುನ್ನ ಶರಣರ ಪರ ವಕೀಲರಿಗೆ ಹೈಕೋರ್ಟ್ ಮಾಡಿದ ತಾಕೀತು ಇದು.</p>.<p>ಈ ಸಂಬಂಧ ಆರೋಪಿ ಶಿವಮೂರ್ತಿ ಶರಣರು ಸಲ್ಲಿಸಿರುವ ನಾಲ್ಕು ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಆರೋಪಿ ಶರಣರ ಪರ ವಕೀಲ ಪಿ.ಎನ್. ಹೆಗ್ಡೆ, ‘ಶರಣರ ವಿರುದ್ಧ ದಾಖಲಿಸಿರುವ ಎರಡನೇ ದೂರಿಗೆ ಸಂಬಂಧಿಸಿದ ಪ್ರಕರಣದಲ್ಲಿ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಕಲಂ 207ರ ಪ್ರಕಾರ ವಿಚಾರಣಾ ನ್ಯಾಯಾಲಯವು ಆರೋಪಿಗೆ ಪೊಲೀಸ್ ವರದಿಯ ನಕಲು ಮತ್ತು ಇತರ ದಾಖಲೆಗಳನ್ನು ನೀಡಿಲ್ಲ’ ಎಂದು ಆಕ್ಷೇಪಿಸಿದರು. ಅಂತೆಯೇ, ‘ಇನ್ನೆರಡು ಪ್ರಕರಣಗಳಲ್ಲಿ ವಾದ ಮಾಡಬೇಕಿದ್ದ ಹಿರಿಯ ವಕೀಲರು ಹಾಜರಾಗಿಲ್ಲ. ಹೀಗಾಗಿ, ತಡೆಯಾಜ್ಞೆ ವಿಸ್ತರಿಸಿ ಇನ್ನೂ 10 ದಿನಗಳ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಅಂತಿಮ ವರದಿಯಲ್ಲಿನ ದೋಷಗಳನ್ನು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಹೊರತುಪಡಿಸಿ, ಉಳಿದಂತೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದ ವಿಚಾರಣೆ ಮುಂದುವರಿಯಲಿ. ಸಾಕ್ಷಿ ವಿಚಾರಣೆಯಲ್ಲಿ ಒಮ್ಮೆ ವಿಚಾರಣೆ ಆರಂಭವಾದರೆ ಅದನ್ನು ನಿಲ್ಲಿಸಲು ಆಗುವುದಿಲ್ಲವಲ್ಲಾ’ ಎಂದರು. </p>.<p>ಇದೇ ವೇಳೆ ರಾಜ್ಯ ಪ್ರಾಸಿಕ್ಯೂಷನ್ ಪರ ಹಾಜರಿದ್ದ ಕೆ.ಪಿ.ಯಶೋದಾ, ‘ರಾಜ್ಯ ಪ್ರಾಸಿಕ್ಯೂಟರ್ ಹುದ್ದೆಗಳಿಗೆ ನಿನ್ನೆಯಷ್ಟೇ (ಜು.10) ಹೊಸ ನೇಮಕ ನಡೆದಿದೆ. ಇನ್ನೊಂದಿಷ್ಟು ಸಮಯ ಬೇಕು’ ಎಂದು ಮನವಿ ಮಾಡಿದರು.</p>.<p>‘ಮುಂದಿನ ಮುದ್ದತಿನಂದು ನೀವು ವಾದ ಮಂಡಿಸಲು ತಯಾರಿರಬೇಕು. ಆವತ್ತು ವಿಚಾರಣೆ ಮುಗಿಸುತ್ತೇನೆ’ ಎಂದು ಆರೋಪಿ ಪರ ವಕೀಲರಿಗೆ ತಾಕೀತು ಮಾಡಿದ ನ್ಯಾಯಮೂರ್ತಿ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ದೋಷಾರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು 2023ರ ಏಪ್ರಿಲ್ 20ರಂದು ಸೆಷನ್ಸ್ ನ್ಯಾಯಾಲಯ ನೀಡಿರುವ ಆದೇಶ ದೋಷಪೂರಿತವಾಗಿದೆ ಎಂಬ ಅರ್ಜಿಗಳ ಮೇಲಿನ ನಿಮ್ಮ ವಾದವನ್ನು ಆದಷ್ಟು ಬೇಗ ಮುಗಿಸಿಬಿಡಿ. ಏನೇ ಇದ್ದರೂ ಅದನ್ನು ಮುಂದಿನ ವಿಚಾರಣೆಯಲ್ಲಿ ನಾನು ಸಂಪೂರ್ಣ ಆಲಿಸಿ ಅಖೈರುಗೊಳಿಸುತ್ತೇನೆ. ಪುನಃ ಸಮಯ ಕೇಳಬೇಡಿ...‘ </p>.<p>ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ವಿವಿಧ ಪ್ರಕರಣಗಳಲ್ಲಿನ ಆರೋಪಗಳಿಗೆ ಸಂಬಂಧಿಸಿದ ಸೆಷನ್ಸ್ ಕೋರ್ಟ್ ವಿಚಾರಣೆಗೆ ನೀಡಲಾಗಿದ್ದ ತಡೆಯಾಜ್ಞೆ ವಿಸ್ತರಿಸುವ ಮುನ್ನ ಶರಣರ ಪರ ವಕೀಲರಿಗೆ ಹೈಕೋರ್ಟ್ ಮಾಡಿದ ತಾಕೀತು ಇದು.</p>.<p>ಈ ಸಂಬಂಧ ಆರೋಪಿ ಶಿವಮೂರ್ತಿ ಶರಣರು ಸಲ್ಲಿಸಿರುವ ನಾಲ್ಕು ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಆರೋಪಿ ಶರಣರ ಪರ ವಕೀಲ ಪಿ.ಎನ್. ಹೆಗ್ಡೆ, ‘ಶರಣರ ವಿರುದ್ಧ ದಾಖಲಿಸಿರುವ ಎರಡನೇ ದೂರಿಗೆ ಸಂಬಂಧಿಸಿದ ಪ್ರಕರಣದಲ್ಲಿ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಕಲಂ 207ರ ಪ್ರಕಾರ ವಿಚಾರಣಾ ನ್ಯಾಯಾಲಯವು ಆರೋಪಿಗೆ ಪೊಲೀಸ್ ವರದಿಯ ನಕಲು ಮತ್ತು ಇತರ ದಾಖಲೆಗಳನ್ನು ನೀಡಿಲ್ಲ’ ಎಂದು ಆಕ್ಷೇಪಿಸಿದರು. ಅಂತೆಯೇ, ‘ಇನ್ನೆರಡು ಪ್ರಕರಣಗಳಲ್ಲಿ ವಾದ ಮಾಡಬೇಕಿದ್ದ ಹಿರಿಯ ವಕೀಲರು ಹಾಜರಾಗಿಲ್ಲ. ಹೀಗಾಗಿ, ತಡೆಯಾಜ್ಞೆ ವಿಸ್ತರಿಸಿ ಇನ್ನೂ 10 ದಿನಗಳ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. </p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ‘ಅಂತಿಮ ವರದಿಯಲ್ಲಿನ ದೋಷಗಳನ್ನು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಹೊರತುಪಡಿಸಿ, ಉಳಿದಂತೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಪ್ರಕರಣದ ವಿಚಾರಣೆ ಮುಂದುವರಿಯಲಿ. ಸಾಕ್ಷಿ ವಿಚಾರಣೆಯಲ್ಲಿ ಒಮ್ಮೆ ವಿಚಾರಣೆ ಆರಂಭವಾದರೆ ಅದನ್ನು ನಿಲ್ಲಿಸಲು ಆಗುವುದಿಲ್ಲವಲ್ಲಾ’ ಎಂದರು. </p>.<p>ಇದೇ ವೇಳೆ ರಾಜ್ಯ ಪ್ರಾಸಿಕ್ಯೂಷನ್ ಪರ ಹಾಜರಿದ್ದ ಕೆ.ಪಿ.ಯಶೋದಾ, ‘ರಾಜ್ಯ ಪ್ರಾಸಿಕ್ಯೂಟರ್ ಹುದ್ದೆಗಳಿಗೆ ನಿನ್ನೆಯಷ್ಟೇ (ಜು.10) ಹೊಸ ನೇಮಕ ನಡೆದಿದೆ. ಇನ್ನೊಂದಿಷ್ಟು ಸಮಯ ಬೇಕು’ ಎಂದು ಮನವಿ ಮಾಡಿದರು.</p>.<p>‘ಮುಂದಿನ ಮುದ್ದತಿನಂದು ನೀವು ವಾದ ಮಂಡಿಸಲು ತಯಾರಿರಬೇಕು. ಆವತ್ತು ವಿಚಾರಣೆ ಮುಗಿಸುತ್ತೇನೆ’ ಎಂದು ಆರೋಪಿ ಪರ ವಕೀಲರಿಗೆ ತಾಕೀತು ಮಾಡಿದ ನ್ಯಾಯಮೂರ್ತಿ ವಿಚಾರಣೆಯನ್ನು ಇದೇ 20ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>