<p><strong>ಹುಬ್ಬಳ್ಳಿ:</strong> ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಮುಖ್ಯಮಂತ್ರಿ ವಿಶೇಷ ಅನುದಾನದಡಿ ವಸತಿ ಇಲಾಖೆ ಮತ್ತು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯು ನಿರ್ಮಿಸಿರುವ ಒಟ್ಟು 42,345 ಮನೆಗಳ ಲೋಕಾರ್ಪಣೆ ಮತ್ತು ಹಕ್ಕುಪತ್ರಗಳ ವಿತರಣಾ ಸಮಾರಂಭ ಇಲ್ಲಿನ ಮಂಟೂರು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ 11ಕ್ಕೆ ನಡೆಯಲಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು, ಶಾಸಕರು ಮತ್ತು ಪ್ರಮುಖರು ಸಮಾರಂಭದಲ್ಲಿ ಭಾಗವಹಿಸುವರು’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಧಾರವಾಡ ಜಿಲ್ಲೆಯಲ್ಲಿ 2,169 ಮನೆಗಳು, ಬೆಂಗಳೂರಿನಲ್ಲಿ 5,731 ಮನೆಗಳು ಸೇರಿ ರಾಜ್ಯದ ವಿವಿಧೆಡೆ ಒಟ್ಟು 42,345 ಮನೆಗಳನ್ನು ನಿರ್ಮಿಸಲಾಗಿದೆ. ಏಕಕಾಲಕ್ಕೆ ವರ್ಚ್ಯುಯಲ್ ಮೂಲಕ ಮುಖ್ಯಮಂತ್ರಿಯವರು ಲೋಕಾರ್ಪಣೆ ಮಾಡುವರು. ಡಿಸಿಎಂ ಅವರು ಮನೆಗಳ ಹಕ್ಕುಪತ್ರಗಳನ್ನು ಸಾಂಕೇತಿಕವಾಗಿ ಫಲಾನುಭವಿಗಳಿಗೆ ವಿತರಿಸುವರು’ ಎಂದು ಹೇಳಿದರು.</p>.<p>‘ರಾಜ್ಯದ ವಿವಿಧೆಡೆಯಿಂದ ಅಂದಾಜು 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಅವ್ಯವಸ್ಥೆ ಆಗದಂತೆ ನಿಭಾಯಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಊಟದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ನಿಲುಗಡೆಗೆಂದೇ 6 ಕಡೆ ಸೌಲಭ್ಯ ಕಲ್ಪಿಸಲಾಗಿದೆ’ ಎಂದರು.</p>.<p>ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಮಾತನಾಡಿ, ‘ಕೊಳೆಗೇರಿ ನಿವಾಸಿಗಳ ಬಹು ದಿನಗಳ ಕನಸು ಈಡೇರಲಿದೆ. ಎಲ್ಲರೂ ನೆಮ್ಮದಿಯಿಂದ ಸುಭದ್ರವಾದ ಸೂರಿನಲ್ಲಿ ನೆಲೆಸಲು ಸಾಧ್ಯವಾಗಲಿದೆ’ ಎಂದರು.</p>.<div><blockquote>ಮನೆಗಳ ಹಂಚಿಕೆ ಬಡಜನರ ಸಮಾರಂಭವಾಗಿದೆ. ಇದು ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಸಿದ್ದರಾಮಯ್ಯ ಅವರು ಎತ್ತರಕ್ಕೆ ಬೆಳೆದಿದ್ದು ಅವರಿಗೆ ಶಕ್ತಿ ಪ್ರದರ್ಶನದ ಅಗತ್ಯವಿಲ್ಲ. </blockquote><span class="attribution">-ಜಮೀರ್ ಅಹಮದ್ ಖಾನ್, ವಸತಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಮುಖ್ಯಮಂತ್ರಿ ವಿಶೇಷ ಅನುದಾನದಡಿ ವಸತಿ ಇಲಾಖೆ ಮತ್ತು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯು ನಿರ್ಮಿಸಿರುವ ಒಟ್ಟು 42,345 ಮನೆಗಳ ಲೋಕಾರ್ಪಣೆ ಮತ್ತು ಹಕ್ಕುಪತ್ರಗಳ ವಿತರಣಾ ಸಮಾರಂಭ ಇಲ್ಲಿನ ಮಂಟೂರು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ 11ಕ್ಕೆ ನಡೆಯಲಿದೆ.</p>.<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು, ಶಾಸಕರು ಮತ್ತು ಪ್ರಮುಖರು ಸಮಾರಂಭದಲ್ಲಿ ಭಾಗವಹಿಸುವರು’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಧಾರವಾಡ ಜಿಲ್ಲೆಯಲ್ಲಿ 2,169 ಮನೆಗಳು, ಬೆಂಗಳೂರಿನಲ್ಲಿ 5,731 ಮನೆಗಳು ಸೇರಿ ರಾಜ್ಯದ ವಿವಿಧೆಡೆ ಒಟ್ಟು 42,345 ಮನೆಗಳನ್ನು ನಿರ್ಮಿಸಲಾಗಿದೆ. ಏಕಕಾಲಕ್ಕೆ ವರ್ಚ್ಯುಯಲ್ ಮೂಲಕ ಮುಖ್ಯಮಂತ್ರಿಯವರು ಲೋಕಾರ್ಪಣೆ ಮಾಡುವರು. ಡಿಸಿಎಂ ಅವರು ಮನೆಗಳ ಹಕ್ಕುಪತ್ರಗಳನ್ನು ಸಾಂಕೇತಿಕವಾಗಿ ಫಲಾನುಭವಿಗಳಿಗೆ ವಿತರಿಸುವರು’ ಎಂದು ಹೇಳಿದರು.</p>.<p>‘ರಾಜ್ಯದ ವಿವಿಧೆಡೆಯಿಂದ ಅಂದಾಜು 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಅವ್ಯವಸ್ಥೆ ಆಗದಂತೆ ನಿಭಾಯಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಊಟದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ವೈದ್ಯಕೀಯ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ನಿಲುಗಡೆಗೆಂದೇ 6 ಕಡೆ ಸೌಲಭ್ಯ ಕಲ್ಪಿಸಲಾಗಿದೆ’ ಎಂದರು.</p>.<p>ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಮಾತನಾಡಿ, ‘ಕೊಳೆಗೇರಿ ನಿವಾಸಿಗಳ ಬಹು ದಿನಗಳ ಕನಸು ಈಡೇರಲಿದೆ. ಎಲ್ಲರೂ ನೆಮ್ಮದಿಯಿಂದ ಸುಭದ್ರವಾದ ಸೂರಿನಲ್ಲಿ ನೆಲೆಸಲು ಸಾಧ್ಯವಾಗಲಿದೆ’ ಎಂದರು.</p>.<div><blockquote>ಮನೆಗಳ ಹಂಚಿಕೆ ಬಡಜನರ ಸಮಾರಂಭವಾಗಿದೆ. ಇದು ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಸಿದ್ದರಾಮಯ್ಯ ಅವರು ಎತ್ತರಕ್ಕೆ ಬೆಳೆದಿದ್ದು ಅವರಿಗೆ ಶಕ್ತಿ ಪ್ರದರ್ಶನದ ಅಗತ್ಯವಿಲ್ಲ. </blockquote><span class="attribution">-ಜಮೀರ್ ಅಹಮದ್ ಖಾನ್, ವಸತಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>