<p>ಬೆಂಗಳೂರು: ‘ಮಾನವ- ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಬೇಕು. ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಬೇಕು’ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.</p>.<p>ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಯಿತು.</p>.<p>‘ವಯಸ್ಸಾದ ಕಾರಣಕ್ಕೆ, ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ತೆಗೆದುಕೊಳ್ಳಬೇಕು. ಅದಕ್ಕೆ ಅಗತ್ಯವಾದ ಸಿಬ್ಬಂದಿ, ಅನುದಾನ ಸೇರಿ ಎಲ್ಲ ನೆರವು ನೀಡಲಾಗುವುದು’ ಎಂದು ಅವರು ಭರವಸೆ ನೀಡಿದರು.</p>.<p>‘ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸಬೇಕು’ ಎಂದೂ ಅವರು ಸೂಚನೆ ನೀಡಿದರು.</p>.<p>ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿವೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25ರಲ್ಲಿ ಇಂತಹ ಪ್ರಕರಣ ಶೇ 30ರಷ್ಟು ಕಡಿಮೆಯಾಗಿದೆ. ವನ್ಯಜೀವಿಗಳು ಆಹಾರ ಹುಡುಕಿಕೊಂಡು ಕಾಡಿನಿಂದ ಹೊರಗೆ ಬರುವುದನ್ನು ನಿಗ್ರಹಿಸಬೇಕು. ಬೇಸಿಗೆ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಂಟಾನ ಕಳೆ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.</p>.<h2>ಎಂಟು ಅಂಶಗಳು ಯಾವುವು? </h2><p>* ಮಾನವ– ವನ್ಯಜೀವಿ ಸಂಘರ್ಷದ ಜಾಗ ಗುರುತಿಸಿ ಯಾವ ಸ್ವರೂಪದ ಸಂಘರ್ಷವೆಂದು ಪಟ್ಟಿ ಮಾಡಬೇಕು </p><p>* ಸಂಘರ್ಷದ ತೀವ್ರತೆಯ ಆಧಾರದಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಬೇಕು </p><p>* ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಹಾಗೂ ರಿಜಿಸ್ಟರ್ ನಿರ್ವಹಣೆ </p><p>* ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ಹಿರಿಯ ಅಧಿಕಾರಿಗಳು ನಿಯಮಿತವಾಗಿ ವಾಸ್ತವ್ಯ ಮಾಡಬೇಕು </p><p>* ಅರಣ್ಯದಂಚಿನ ಸ್ಥಳೀಯರನ್ನು ಗುರುತಿಸಿ ‘ಅರಣ್ಯ ಮಿತ್ರ’ ಎಂದು ಪರಿಗಣಿಸಿ ಗಸ್ತು ವನ್ಯಜೀವಿ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳಬೇಕು </p><p>* ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24X7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ಮಾಡಬೇಕು </p><p>* ವನ್ಯಜೀವಿ ಸೆರೆ ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕೆಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಬೇಕು </p><p>* ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಹಯೋಗ ಸಮಿತಿ ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚಿಸಬೇಕು</p>.<h2>ವನ್ಯಪ್ರಾಣಿ ಹಾವಳಿ: 200 ಜೀವಹಾನಿ</h2><p>ಕರ್ನಾಟಕದಲ್ಲಿ 6395 ಆನೆಗಳಿದ್ದು ಆನೆಗಳ ಸಂಖ್ಯೆಯಲ್ಲಿ ರಾಜ್ಯವು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 563 ಹುಲಿಗಳಿದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ವನ್ಯಪ್ರಾಣಿಗಳ ಹಾವಳಿಯಿಂದ 2022-23ರಲ್ಲಿ 57 2023-24ರಲ್ಲಿ 65 2024-25ರಲ್ಲಿ 46 2025-26ರಲ್ಲಿ 32 ಮಾನವ ಜೀವಹಾನಿ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಮಾನವ- ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ಡ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಬೇಕು. ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಬೇಕು’ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.</p>.<p>ರಾಜ್ಯ ಮಟ್ಟದ ಸಮಗ್ರ ಮಾನವ- ವನ್ಯಜೀವಿ ಸಂಘರ್ಷ ನಿರ್ವಹಣಾ ಕಾರ್ಯತಂತ್ರಗಳನ್ನು ರೂಪಿಸಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಯಿತು.</p>.<p>‘ವಯಸ್ಸಾದ ಕಾರಣಕ್ಕೆ, ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ಡ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ತೆಗೆದುಕೊಳ್ಳಬೇಕು. ಅದಕ್ಕೆ ಅಗತ್ಯವಾದ ಸಿಬ್ಬಂದಿ, ಅನುದಾನ ಸೇರಿ ಎಲ್ಲ ನೆರವು ನೀಡಲಾಗುವುದು’ ಎಂದು ಅವರು ಭರವಸೆ ನೀಡಿದರು.</p>.<p>‘ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸಬೇಕು’ ಎಂದೂ ಅವರು ಸೂಚನೆ ನೀಡಿದರು.</p>.<p>ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿವೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25ರಲ್ಲಿ ಇಂತಹ ಪ್ರಕರಣ ಶೇ 30ರಷ್ಟು ಕಡಿಮೆಯಾಗಿದೆ. ವನ್ಯಜೀವಿಗಳು ಆಹಾರ ಹುಡುಕಿಕೊಂಡು ಕಾಡಿನಿಂದ ಹೊರಗೆ ಬರುವುದನ್ನು ನಿಗ್ರಹಿಸಬೇಕು. ಬೇಸಿಗೆ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಂಟಾನ ಕಳೆ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಹೇಳಿದರು.</p>.<h2>ಎಂಟು ಅಂಶಗಳು ಯಾವುವು? </h2><p>* ಮಾನವ– ವನ್ಯಜೀವಿ ಸಂಘರ್ಷದ ಜಾಗ ಗುರುತಿಸಿ ಯಾವ ಸ್ವರೂಪದ ಸಂಘರ್ಷವೆಂದು ಪಟ್ಟಿ ಮಾಡಬೇಕು </p><p>* ಸಂಘರ್ಷದ ತೀವ್ರತೆಯ ಆಧಾರದಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಬೇಕು </p><p>* ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಹಾಗೂ ರಿಜಿಸ್ಟರ್ ನಿರ್ವಹಣೆ </p><p>* ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ಹಿರಿಯ ಅಧಿಕಾರಿಗಳು ನಿಯಮಿತವಾಗಿ ವಾಸ್ತವ್ಯ ಮಾಡಬೇಕು </p><p>* ಅರಣ್ಯದಂಚಿನ ಸ್ಥಳೀಯರನ್ನು ಗುರುತಿಸಿ ‘ಅರಣ್ಯ ಮಿತ್ರ’ ಎಂದು ಪರಿಗಣಿಸಿ ಗಸ್ತು ವನ್ಯಜೀವಿ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳಬೇಕು </p><p>* ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24X7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ಮಾಡಬೇಕು </p><p>* ವನ್ಯಜೀವಿ ಸೆರೆ ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕೆಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಬೇಕು </p><p>* ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಹಯೋಗ ಸಮಿತಿ ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚಿಸಬೇಕು</p>.<h2>ವನ್ಯಪ್ರಾಣಿ ಹಾವಳಿ: 200 ಜೀವಹಾನಿ</h2><p>ಕರ್ನಾಟಕದಲ್ಲಿ 6395 ಆನೆಗಳಿದ್ದು ಆನೆಗಳ ಸಂಖ್ಯೆಯಲ್ಲಿ ರಾಜ್ಯವು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 563 ಹುಲಿಗಳಿದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ವನ್ಯಪ್ರಾಣಿಗಳ ಹಾವಳಿಯಿಂದ 2022-23ರಲ್ಲಿ 57 2023-24ರಲ್ಲಿ 65 2024-25ರಲ್ಲಿ 46 2025-26ರಲ್ಲಿ 32 ಮಾನವ ಜೀವಹಾನಿ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>