<p><strong>ನವದೆಹಲಿ:</strong> ಉದ್ದೇಶಿತ ಸಾರ್ವಜನಿಕ ವಿತರಣೆ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ನೆರವಿನಿಂದ ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ 2.43 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. </p>.<p>ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಕಲಬುರ್ಗಿ ಸಂಸದ ರಾಧಾಕೃಷ್ಣ ಕೇಳಿದ ಪ್ರಶ್ನೆಗೆ ಗ್ರಾಹಕ ವ್ಯವಹಾರ ಖಾತೆ ರಾಜ್ಯ ಸಚಿವೆ ನಿಮುಬೆನ್ ಜಯಂತಿಬಾಯಿ ಬಂಬಾನಿಯಾ ಈ ಬಗ್ಗೆ ಉತ್ತರ ನೀಡಿದ್ದಾರೆ. </p>.<p>ಪಡಿತರ ಚೀಟಿಗಳ ಡಿಜಿಟಲೀಕರಣ, ಆಧಾರ್ ಜೋಡಣೆ, ಅನರ್ಹ ದಾಖಲೆಗಳು, ಸಾವು, ಫಲಾನುಭವಿಗಳ ಶಾಶ್ವತ ವಲಸೆ ಮತ್ತಿತರ ಕಾರಣಗಳಿಂದ ದೇಶದಲ್ಲಿ ಈ ಅವಧಿಯಲ್ಲಿ 2.25 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ವಿವರ ನೀಡಿದ್ದಾರೆ. </p>.<p>ಇದಲ್ಲದೇ, ಇಲಾಖೆಯು 2024–25ನೇ ಸಾಲಿನಲ್ಲಿ ಸಮಗ್ರ ದತ್ತಾಂಶ ವಿಶ್ಲೇಷಣೆ ಮೂಲಕ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಪ್ರಕ್ರಿಯೆ ನಡೆಸಿದೆ. ಇದರಲ್ಲಿ 100 ವರ್ಷಕ್ಕಿಂತ ಮೇಲ್ಪಟ್ಟ ಫಲಾನುಭವಿಗಳು, ಚಾಲ್ತಿಯಲ್ಲಿಲ್ಲದ ಪಡಿತರ ಚೀಟಿಗಳು, ನಕಲಿ ಪಡಿತರ ಚೀಟಿಗಳು ಮತ್ತು ಏಕ-ಸದಸ್ಯ ಪಡಿತರ ಚೀಟಿಗಳನ್ನು ಹೊಂದಿರುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಫಲಾನುಭವಿಗಳ ದತ್ತಾಂಶಗಳನ್ನು ವಿವಿಧ ಇಲಾಖೆಗಳ ಜತೆಗೆ ಹಂಚಿಕೊಳ್ಳಲಾಯಿತು. ಈ ಪ್ರಕ್ರಿಯೆಯಲ್ಲಿ 8.51 ಕೋಟಿ ಫಲಾನುಭವಿಗಳನ್ನು ಗುರುತಿಸಿ ಕ್ಷೇತ್ರ ಪರಿಶೀಲನೆ ನಡೆಸಿ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಇಲ್ಲಿಯವರೆಗೆ, ಆಯಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು 2.12 ಕೋಟಿ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉದ್ದೇಶಿತ ಸಾರ್ವಜನಿಕ ವಿತರಣೆ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ನೆರವಿನಿಂದ ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ 2.43 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. </p>.<p>ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಕಲಬುರ್ಗಿ ಸಂಸದ ರಾಧಾಕೃಷ್ಣ ಕೇಳಿದ ಪ್ರಶ್ನೆಗೆ ಗ್ರಾಹಕ ವ್ಯವಹಾರ ಖಾತೆ ರಾಜ್ಯ ಸಚಿವೆ ನಿಮುಬೆನ್ ಜಯಂತಿಬಾಯಿ ಬಂಬಾನಿಯಾ ಈ ಬಗ್ಗೆ ಉತ್ತರ ನೀಡಿದ್ದಾರೆ. </p>.<p>ಪಡಿತರ ಚೀಟಿಗಳ ಡಿಜಿಟಲೀಕರಣ, ಆಧಾರ್ ಜೋಡಣೆ, ಅನರ್ಹ ದಾಖಲೆಗಳು, ಸಾವು, ಫಲಾನುಭವಿಗಳ ಶಾಶ್ವತ ವಲಸೆ ಮತ್ತಿತರ ಕಾರಣಗಳಿಂದ ದೇಶದಲ್ಲಿ ಈ ಅವಧಿಯಲ್ಲಿ 2.25 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ ಎಂದು ಅವರು ವಿವರ ನೀಡಿದ್ದಾರೆ. </p>.<p>ಇದಲ್ಲದೇ, ಇಲಾಖೆಯು 2024–25ನೇ ಸಾಲಿನಲ್ಲಿ ಸಮಗ್ರ ದತ್ತಾಂಶ ವಿಶ್ಲೇಷಣೆ ಮೂಲಕ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಪ್ರಕ್ರಿಯೆ ನಡೆಸಿದೆ. ಇದರಲ್ಲಿ 100 ವರ್ಷಕ್ಕಿಂತ ಮೇಲ್ಪಟ್ಟ ಫಲಾನುಭವಿಗಳು, ಚಾಲ್ತಿಯಲ್ಲಿಲ್ಲದ ಪಡಿತರ ಚೀಟಿಗಳು, ನಕಲಿ ಪಡಿತರ ಚೀಟಿಗಳು ಮತ್ತು ಏಕ-ಸದಸ್ಯ ಪಡಿತರ ಚೀಟಿಗಳನ್ನು ಹೊಂದಿರುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಫಲಾನುಭವಿಗಳ ದತ್ತಾಂಶಗಳನ್ನು ವಿವಿಧ ಇಲಾಖೆಗಳ ಜತೆಗೆ ಹಂಚಿಕೊಳ್ಳಲಾಯಿತು. ಈ ಪ್ರಕ್ರಿಯೆಯಲ್ಲಿ 8.51 ಕೋಟಿ ಫಲಾನುಭವಿಗಳನ್ನು ಗುರುತಿಸಿ ಕ್ಷೇತ್ರ ಪರಿಶೀಲನೆ ನಡೆಸಿ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ಇಲ್ಲಿಯವರೆಗೆ, ಆಯಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು 2.12 ಕೋಟಿ ಫಲಾನುಭವಿಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>