<p><strong>ಬೆಂಗಳೂರು:</strong> ಒಕ್ಕೂಟ ವ್ಯವಸ್ಥೆಯಲ್ಲಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಹಾಗಾಗಿ ಕಾನೂನು ಹೋರಾಟ ನಡೆಸುವ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ನಗರದಲ್ಲಿ ಸೋಮವಾರ ವಿಧಾನಮಂಡಲದ ಸದಸ್ಯರಿಗೆ ಆಯವ್ಯಯ ರಾಜಸ್ವ ಸಂಗ್ರಹಣೆ, ಅನುದಾನ ವರ್ಗೀಕರಣ ಮತ್ತು ಹಂಚಿಕೆ, ಆಯವ್ಯಯ ಅನುದಾನ ಬಳಕೆ ಮತ್ತು ನಿರ್ವಹಣೆ ವಿಷಯದ ಬಗ್ಗೆ ಏರ್ಪಡಿಸಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಹಿಂದೆ ರಾಜ್ಯದಲ್ಲಿ ಬರಗಾಲ ಆವರಿಸಿದ್ದಾಗ ಕೇಂದ್ರ ಪರಿಹಾರ ನೀಡಿರಲಿಲ್ಲ. ಸುಪ್ರೀಂ ಕೋರ್ಟ್ ಮೊರೆಹೋದಾಗ ₹3 ಸಾವಿರ ಕೋಟಿ ಪರಿಹಾರ ಬಿಡುಗಡೆ ಮಾಡಲಾಯಿತು. ಜಿಎಸ್ಟಿ ಮಂಡಳಿಯಿಂದ ರಾಜ್ಯಕ್ಕೆ ನ್ಯಾಯ ಸಿಗುವ ಭರವಸೆ ಇಲ್ಲ. ರಾಜ್ಯಕ್ಕೆ ಬರಬೇಕಾದ ಹಣ ಬಂದಿಲ್ಲ. ಕಾನೂನು ಹೋರಾಟ ನಡೆಸುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದರು.</p>.<p>‘ರಾಜ್ಯದಿಂದ ಸಂಗ್ರಹವಾಗುವ ತೆರಿಗೆ ಮೊತ್ತದಲ್ಲಿ ₹4.50 ಲಕ್ಷ ಕೋಟಿ ಕೇಂದ್ರಕ್ಕೆ ಹೋಗಿದೆ. 2025–26ನೇ ಸಾಲಿನಲ್ಲಿ ರಾಜ್ಯಕ್ಕೆ ₹60 ಸಾವಿರ ಕೋಟಿ ವಾಪಸ್ ಬಂದಿದೆ. 2026–27ನೇ ಸಾಲಿಗೆ ₹73 ಸಾವಿರ ಕೋಟಿ ನೀಡಬಹುದು. ಅಂದರೆ 1 ರೂಪಾಯಿಗೆ 15 ಪೈಸೆ ಮಾತ್ರ ವಾಪಸ್ ಬರುತ್ತಿದೆ. ರಾಜಕೀಯ ಕಾರಣಕ್ಕೆ ಈ ಮಾತು ಹೇಳುತ್ತಿಲ್ಲ. ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ವಿರೋಧ ಪಕ್ಷಗಳು, ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಸುಳ್ಳು ಅಪಪ್ರಚಾರ ಮಾಡುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ರಾಜ್ಯ ಸರ್ಕಾರ ವೃದ್ಧಾಪ್ಯ, ವಿಧವಾ ವೇತನ ಸೇರಿ ಹಲವು ಪಿಂಚಣಿ ಯೋಜನೆಗಳಿಗೆ ₹11 ಸಾವಿರ ಕೋಟಿ ನೀಡುತ್ತಿದೆ. ಆದರೆ, ಕೇಂದ್ರ ನೀಡುತ್ತಿರುವುದು ₹550 ಕೋಟಿ. ‘ನಮ್ಮ ಮೆಟ್ರೊ‘ಗೆ ರಾಜ್ಯದ ಪಾಲು ಶೇ 88. ಕೇಂದ್ರದ ಪಾಲು ಶೇ 12. ಕೇಂದ್ರ ಪುರಸ್ಕೃತ ಯೋಜನೆಗಳಿಗೂ 50:50 ಅನುಪಾತ ಬಂದಿದೆ. ರೈಲ್ವೆ ಯೋಜನೆಗೆ ಭೂಮಿ ಹಾಗೂ ಯೋಜನಾ ವೆಚ್ಚ ಶೇ 50ರಷ್ಟು ರಾಜ್ಯ ಸರ್ಕಾರ ನೀಡಿದರೂ ಆದಾಯ ಮಾತ್ರ ಕೇಂದ್ರಕ್ಕೆ ಹೋಗುತ್ತಿದೆ ಎಂದರು.</p>.<p>ರಾಜ್ಯ ಸರ್ಕಾರ ಹೆಚ್ಚಿನ ಸಾಲ ಮಾಡಿದೆ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಮುಂದಿನ ವರ್ಷ ₹1.32 ಲಕ್ಷ ಕೋಟಿ ಸಾಲ ಮಾಡುವುದಾಗಿ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಮುಂದಿನ ಆರ್ಥಿಕ ವರ್ಷಕ್ಕೆ ಸಾಲದ ಮೊತ್ತ ₹8.24 ಲಕ್ಷ ಕೋಟಿ ಆಗಲಿದೆ. ಕೇಂದ್ರ, ಆರ್ಬಿಐ ನಿಯಮಾನುಸಾರ ಸಾಲ ಮಾಡಲಾಗಿದೆ. ಕೇಂದ್ರ ಹಾಗೂ ಅನ್ಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಹಣಕಾಸು ಸ್ಥಿತಿ ಸರಿಯಾಗಿದೆ ಎಂದು ಸಮರ್ಥಿಸಿಕೊಂಡರು.</p>.<p>ಯುಪಿಎ ಅವಧಿಯಲ್ಲಿ ಮನಮೋಹನ ಸಿಂಗ್ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದಾಗ ₹53.11 ಲಕ್ಷ ಕೋಟಿ ಸಾಲ ಇತ್ತು. ನರೇಂದ್ರ ಮೋದಿ ಅವರ 11 ವರ್ಷದ ಅವಧಿಯಲ್ಲಿ ₹165 ಲಕ್ಷ ಕೋಟಿ ಸಾಲ ಮಾಡಲಾಗಿದೆ. ರಾಜ್ಯದ ಬಗ್ಗೆ ಆರೋಪ ಮಾಡುವ ವಿಪಕ್ಷಗಳಿಗೆ ಕೇಂದ್ರ ಸರ್ಕಾರ ಸಾಲ ಮಾಡಿರುವುದು ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಚಿವರಾದ ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಎನ್.ಎಸ್. ಬೋಸರಾಜು ಪಾಲ್ಗೊಂಡಿದ್ದರು.</p>.<h2>ಶಾಸಕರಿಗೆ ಮುಖ್ಯಮಂತ್ರಿ ಪಾಠ </h2>.<p>ಸಂಪನ್ಮೂಲಗಳು ಹೇಗೆ ಸಂಗ್ರಹ ಆಗುತ್ತವೆ? ಅದನ್ನು ಖರ್ಚು ಮಾಡುವುದಕ್ಕೆ ಹೇಗೆ ಯೋಜನೆ ರೂಪಿಸಲಾಗುತ್ತದೆ? ಮುಖ್ಯವಾಗಿ ನಾವು ಖರ್ಚು ಮಾಡಿದ ಹಣದಿಂದ ಜನರಿಗೆ ನಿಜವಾಗಲೂ ಅನುಕೂಲ ಆಗುತ್ತಿದೆಯೇ? ಎಂಬುದನ್ನು ಶಾಸಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಈ ಎಲ್ಲಾ ವಿಚಾರಗಳ ಬಗ್ಗೆ ತಿಳಿದುಕೊಂಡರೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸಲು ಸಾಧ್ಯ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಒಕ್ಕೂಟ ವ್ಯವಸ್ಥೆಯಲ್ಲಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಹಾಗಾಗಿ ಕಾನೂನು ಹೋರಾಟ ನಡೆಸುವ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ನಗರದಲ್ಲಿ ಸೋಮವಾರ ವಿಧಾನಮಂಡಲದ ಸದಸ್ಯರಿಗೆ ಆಯವ್ಯಯ ರಾಜಸ್ವ ಸಂಗ್ರಹಣೆ, ಅನುದಾನ ವರ್ಗೀಕರಣ ಮತ್ತು ಹಂಚಿಕೆ, ಆಯವ್ಯಯ ಅನುದಾನ ಬಳಕೆ ಮತ್ತು ನಿರ್ವಹಣೆ ವಿಷಯದ ಬಗ್ಗೆ ಏರ್ಪಡಿಸಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ಹಿಂದೆ ರಾಜ್ಯದಲ್ಲಿ ಬರಗಾಲ ಆವರಿಸಿದ್ದಾಗ ಕೇಂದ್ರ ಪರಿಹಾರ ನೀಡಿರಲಿಲ್ಲ. ಸುಪ್ರೀಂ ಕೋರ್ಟ್ ಮೊರೆಹೋದಾಗ ₹3 ಸಾವಿರ ಕೋಟಿ ಪರಿಹಾರ ಬಿಡುಗಡೆ ಮಾಡಲಾಯಿತು. ಜಿಎಸ್ಟಿ ಮಂಡಳಿಯಿಂದ ರಾಜ್ಯಕ್ಕೆ ನ್ಯಾಯ ಸಿಗುವ ಭರವಸೆ ಇಲ್ಲ. ರಾಜ್ಯಕ್ಕೆ ಬರಬೇಕಾದ ಹಣ ಬಂದಿಲ್ಲ. ಕಾನೂನು ಹೋರಾಟ ನಡೆಸುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದರು.</p>.<p>‘ರಾಜ್ಯದಿಂದ ಸಂಗ್ರಹವಾಗುವ ತೆರಿಗೆ ಮೊತ್ತದಲ್ಲಿ ₹4.50 ಲಕ್ಷ ಕೋಟಿ ಕೇಂದ್ರಕ್ಕೆ ಹೋಗಿದೆ. 2025–26ನೇ ಸಾಲಿನಲ್ಲಿ ರಾಜ್ಯಕ್ಕೆ ₹60 ಸಾವಿರ ಕೋಟಿ ವಾಪಸ್ ಬಂದಿದೆ. 2026–27ನೇ ಸಾಲಿಗೆ ₹73 ಸಾವಿರ ಕೋಟಿ ನೀಡಬಹುದು. ಅಂದರೆ 1 ರೂಪಾಯಿಗೆ 15 ಪೈಸೆ ಮಾತ್ರ ವಾಪಸ್ ಬರುತ್ತಿದೆ. ರಾಜಕೀಯ ಕಾರಣಕ್ಕೆ ಈ ಮಾತು ಹೇಳುತ್ತಿಲ್ಲ. ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ವಿರೋಧ ಪಕ್ಷಗಳು, ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಸುಳ್ಳು ಅಪಪ್ರಚಾರ ಮಾಡುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ರಾಜ್ಯ ಸರ್ಕಾರ ವೃದ್ಧಾಪ್ಯ, ವಿಧವಾ ವೇತನ ಸೇರಿ ಹಲವು ಪಿಂಚಣಿ ಯೋಜನೆಗಳಿಗೆ ₹11 ಸಾವಿರ ಕೋಟಿ ನೀಡುತ್ತಿದೆ. ಆದರೆ, ಕೇಂದ್ರ ನೀಡುತ್ತಿರುವುದು ₹550 ಕೋಟಿ. ‘ನಮ್ಮ ಮೆಟ್ರೊ‘ಗೆ ರಾಜ್ಯದ ಪಾಲು ಶೇ 88. ಕೇಂದ್ರದ ಪಾಲು ಶೇ 12. ಕೇಂದ್ರ ಪುರಸ್ಕೃತ ಯೋಜನೆಗಳಿಗೂ 50:50 ಅನುಪಾತ ಬಂದಿದೆ. ರೈಲ್ವೆ ಯೋಜನೆಗೆ ಭೂಮಿ ಹಾಗೂ ಯೋಜನಾ ವೆಚ್ಚ ಶೇ 50ರಷ್ಟು ರಾಜ್ಯ ಸರ್ಕಾರ ನೀಡಿದರೂ ಆದಾಯ ಮಾತ್ರ ಕೇಂದ್ರಕ್ಕೆ ಹೋಗುತ್ತಿದೆ ಎಂದರು.</p>.<p>ರಾಜ್ಯ ಸರ್ಕಾರ ಹೆಚ್ಚಿನ ಸಾಲ ಮಾಡಿದೆ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಮುಂದಿನ ವರ್ಷ ₹1.32 ಲಕ್ಷ ಕೋಟಿ ಸಾಲ ಮಾಡುವುದಾಗಿ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಮುಂದಿನ ಆರ್ಥಿಕ ವರ್ಷಕ್ಕೆ ಸಾಲದ ಮೊತ್ತ ₹8.24 ಲಕ್ಷ ಕೋಟಿ ಆಗಲಿದೆ. ಕೇಂದ್ರ, ಆರ್ಬಿಐ ನಿಯಮಾನುಸಾರ ಸಾಲ ಮಾಡಲಾಗಿದೆ. ಕೇಂದ್ರ ಹಾಗೂ ಅನ್ಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಹಣಕಾಸು ಸ್ಥಿತಿ ಸರಿಯಾಗಿದೆ ಎಂದು ಸಮರ್ಥಿಸಿಕೊಂಡರು.</p>.<p>ಯುಪಿಎ ಅವಧಿಯಲ್ಲಿ ಮನಮೋಹನ ಸಿಂಗ್ ಅವರು ಪ್ರಧಾನಿ ಹುದ್ದೆಯಿಂದ ಕೆಳಗಿಳಿದಾಗ ₹53.11 ಲಕ್ಷ ಕೋಟಿ ಸಾಲ ಇತ್ತು. ನರೇಂದ್ರ ಮೋದಿ ಅವರ 11 ವರ್ಷದ ಅವಧಿಯಲ್ಲಿ ₹165 ಲಕ್ಷ ಕೋಟಿ ಸಾಲ ಮಾಡಲಾಗಿದೆ. ರಾಜ್ಯದ ಬಗ್ಗೆ ಆರೋಪ ಮಾಡುವ ವಿಪಕ್ಷಗಳಿಗೆ ಕೇಂದ್ರ ಸರ್ಕಾರ ಸಾಲ ಮಾಡಿರುವುದು ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಚಿವರಾದ ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಎನ್.ಎಸ್. ಬೋಸರಾಜು ಪಾಲ್ಗೊಂಡಿದ್ದರು.</p>.<h2>ಶಾಸಕರಿಗೆ ಮುಖ್ಯಮಂತ್ರಿ ಪಾಠ </h2>.<p>ಸಂಪನ್ಮೂಲಗಳು ಹೇಗೆ ಸಂಗ್ರಹ ಆಗುತ್ತವೆ? ಅದನ್ನು ಖರ್ಚು ಮಾಡುವುದಕ್ಕೆ ಹೇಗೆ ಯೋಜನೆ ರೂಪಿಸಲಾಗುತ್ತದೆ? ಮುಖ್ಯವಾಗಿ ನಾವು ಖರ್ಚು ಮಾಡಿದ ಹಣದಿಂದ ಜನರಿಗೆ ನಿಜವಾಗಲೂ ಅನುಕೂಲ ಆಗುತ್ತಿದೆಯೇ? ಎಂಬುದನ್ನು ಶಾಸಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಈ ಎಲ್ಲಾ ವಿಚಾರಗಳ ಬಗ್ಗೆ ತಿಳಿದುಕೊಂಡರೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸಲು ಸಾಧ್ಯ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>