<p><strong>ಬೆಂಗಳೂರು:</strong> ವಿಧಾನಸಭೆಯಲ್ಲಿ ಕಾಗದದ ಬಳಕೆಯನ್ನು ಬಿಟ್ಟು ಡಿಜಿಟಲೀಕರಣ ವ್ಯವಸ್ಥೆ ಜಾರಿಗೆ ತರಬೇಕು ಎಂದು ಕಾಂಗ್ರೆಸ್ನ ಎ.ಎಸ್.ಪೊನ್ನಣ್ಣ ಒತ್ತಾಯಿಸಿದರು.</p>.<p>ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ವಿಧಾನಸಭೆಯ ಕಲಾಪದಲ್ಲಿ ಕಾರ್ಯ ನಿರ್ವಹಿಸಲು ಐಪಾಡ್ಗಳ ಬಳಕೆ ಮಾಡುವ ಬಗ್ಗೆ ಗಂಭೀರ ಆಲೋಚನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.</p>.<p>ಕಲಾಪದ ವೇಳೆ ಪ್ರಶ್ನೋತ್ತರ ಮತ್ತು ಇತರ ಮಾಹಿತಿಗಳಿಗೆ ಭಾರಿ ಪ್ರಮಾಣದಲ್ಲಿ ಕಾಗದವನ್ನು ಬಳಸಲಾಗುತ್ತದೆ. ಆದರೆ, ಅದರ ಸದುಪಯೋಗ ಆಗುವುದಿಲ್ಲ. ಆದ್ದರಿಂದ, ಸಂಸತ್ತು ಮತ್ತು ಇತರ ಕೆಲವು ರಾಜ್ಯಗಳಲ್ಲಿರುವಂತೆ ಐಪಾಡ್ ಬಳಸುವುದು ಸೂಕ್ತ ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ₹4.5 ಲಕ್ಷ ಕೋಟಿ ಕರ್ನಾಟಕದಿಂದ ತೆರಿಗೆ ಸಂದಾಯವಾಗುತ್ತಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ ₹60 ಸಾವಿರ ಕೋಟಿ ಮಾತ್ರ ಬರುತ್ತಿದೆ. ಸುಮಾರು ₹1.25 ಲಕ್ಷ ಕೋಟಿ ಸರ್ಕಾರಕ್ಕೆ ನಷ್ಟವಾಗುತ್ತಿದೆ ಎಂದು ಪೊನ್ನಣ್ಣ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆಯಲ್ಲಿ ಕಾಗದದ ಬಳಕೆಯನ್ನು ಬಿಟ್ಟು ಡಿಜಿಟಲೀಕರಣ ವ್ಯವಸ್ಥೆ ಜಾರಿಗೆ ತರಬೇಕು ಎಂದು ಕಾಂಗ್ರೆಸ್ನ ಎ.ಎಸ್.ಪೊನ್ನಣ್ಣ ಒತ್ತಾಯಿಸಿದರು.</p>.<p>ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ವಿಧಾನಸಭೆಯ ಕಲಾಪದಲ್ಲಿ ಕಾರ್ಯ ನಿರ್ವಹಿಸಲು ಐಪಾಡ್ಗಳ ಬಳಕೆ ಮಾಡುವ ಬಗ್ಗೆ ಗಂಭೀರ ಆಲೋಚನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.</p>.<p>ಕಲಾಪದ ವೇಳೆ ಪ್ರಶ್ನೋತ್ತರ ಮತ್ತು ಇತರ ಮಾಹಿತಿಗಳಿಗೆ ಭಾರಿ ಪ್ರಮಾಣದಲ್ಲಿ ಕಾಗದವನ್ನು ಬಳಸಲಾಗುತ್ತದೆ. ಆದರೆ, ಅದರ ಸದುಪಯೋಗ ಆಗುವುದಿಲ್ಲ. ಆದ್ದರಿಂದ, ಸಂಸತ್ತು ಮತ್ತು ಇತರ ಕೆಲವು ರಾಜ್ಯಗಳಲ್ಲಿರುವಂತೆ ಐಪಾಡ್ ಬಳಸುವುದು ಸೂಕ್ತ ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ₹4.5 ಲಕ್ಷ ಕೋಟಿ ಕರ್ನಾಟಕದಿಂದ ತೆರಿಗೆ ಸಂದಾಯವಾಗುತ್ತಿದೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಕೇವಲ ₹60 ಸಾವಿರ ಕೋಟಿ ಮಾತ್ರ ಬರುತ್ತಿದೆ. ಸುಮಾರು ₹1.25 ಲಕ್ಷ ಕೋಟಿ ಸರ್ಕಾರಕ್ಕೆ ನಷ್ಟವಾಗುತ್ತಿದೆ ಎಂದು ಪೊನ್ನಣ್ಣ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>