<p><strong>ನವದೆಹಲಿ:</strong> ವಿಧಾನ ಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಮಂಗಳವಾರ ಪ್ರಕಟಿಸಿದ್ದು, ಒಂದು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. </p><p>ನವೆಂಬರ್ನಲ್ಲಿ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಈ ಹಿಂದೆಯೇ ಬಿಡುಗಡೆ ಮಾಡಿತ್ತು. ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳನ್ನು ಬಿಜೆಪಿ ಪ್ರಮುಖರ ಸಭೆಯಲ್ಲಿ ಚರ್ಚಿಸಿ ತಿಂಗಳುಗಳ ಹಿಂದೆಯೇ ವರಿಷ್ಠರಿಗೆ ಕಳುಹಿಸಲಾಗಿತ್ತು. ಪ್ರತಿಯೊಂದು ಕ್ಷೇತ್ರಕ್ಕೆ 3–4 ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಈ ಮೂಲಕ, ಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. </p>.ಬಿಜೆಪಿ ಹೈಕಮಾಂಡ್ ತೀಕ್ಷ್ಣ ಕ್ರಮ: ನವೀನ್ಗೆ ಮತ್ತೊಮ್ಮೆ ಅವಕಾಶ.Karnataka Budget: ₹1.32 ಲಕ್ಷ ಕೋಟಿ ಸಾಲ; ಬಿಜೆಪಿ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಧಾನ ಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಮಂಗಳವಾರ ಪ್ರಕಟಿಸಿದ್ದು, ಒಂದು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. </p><p>ನವೆಂಬರ್ನಲ್ಲಿ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಈ ಹಿಂದೆಯೇ ಬಿಡುಗಡೆ ಮಾಡಿತ್ತು. ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳನ್ನು ಬಿಜೆಪಿ ಪ್ರಮುಖರ ಸಭೆಯಲ್ಲಿ ಚರ್ಚಿಸಿ ತಿಂಗಳುಗಳ ಹಿಂದೆಯೇ ವರಿಷ್ಠರಿಗೆ ಕಳುಹಿಸಲಾಗಿತ್ತು. ಪ್ರತಿಯೊಂದು ಕ್ಷೇತ್ರಕ್ಕೆ 3–4 ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಈ ಮೂಲಕ, ಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. </p>.ಬಿಜೆಪಿ ಹೈಕಮಾಂಡ್ ತೀಕ್ಷ್ಣ ಕ್ರಮ: ನವೀನ್ಗೆ ಮತ್ತೊಮ್ಮೆ ಅವಕಾಶ.Karnataka Budget: ₹1.32 ಲಕ್ಷ ಕೋಟಿ ಸಾಲ; ಬಿಜೆಪಿ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>