<p><strong>ಬೆಂಗಳೂರು</strong>: ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 22ರಿಂದ 25ರವರೆಗೆ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.</p><p>ಕಂಪ್ಯೂಟರ್ ಆಪರೇಟರ್, ಸಹಾಯಕ, ಕಿರಿಯ ಸಹಾಯಕ, ಹಿರಿಯ ಪ್ರೋಗ್ರಾಮರ್, ಡಾಟಾ ಎಂಟ್ರಿ ಸಹಾಯಕ ಹೀಗೆ ವಿವಿಧ ಏಳು ಹುದ್ದೆಗಳಿಗೆ ಬೆಂಗಳೂರು ನಗರದ ಹತ್ತು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>ಒಂದೊಂದು ಹುದ್ದೆಗೆ ಒಂದೊಂದು ದಿನ ಪರೀಕ್ಷೆ ನಡೆಯಲಿದೆ. ಒಟ್ಟಾರೆ 4,868 ಮಂದಿ ಪರೀಕ್ಷೆ ಬರೆಯುತ್ತಿದ್ದು, ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಕಲಿಗೆ ಅವಕಾಶ ಇಲ್ಲದಂತೆ ನಿಗಾ ಇಡಲಾಗುವುದು ಎಂದು ಅವರು ವಿವರಿಸಿದ್ದಾರೆ.</p><p>ಸ್ಪರ್ಧಾತ್ಮಕ ಪರೀಕ್ಷೆ ಸಲುವಾಗಿ ವಸ್ತ್ರಸಂಹಿತೆ ಕೂಡ ಇದ್ದು, ಆ ಪ್ರಕಾರ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾರ್ಚ್ 22ರಿಂದ 25ರವರೆಗೆ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.</p><p>ಕಂಪ್ಯೂಟರ್ ಆಪರೇಟರ್, ಸಹಾಯಕ, ಕಿರಿಯ ಸಹಾಯಕ, ಹಿರಿಯ ಪ್ರೋಗ್ರಾಮರ್, ಡಾಟಾ ಎಂಟ್ರಿ ಸಹಾಯಕ ಹೀಗೆ ವಿವಿಧ ಏಳು ಹುದ್ದೆಗಳಿಗೆ ಬೆಂಗಳೂರು ನಗರದ ಹತ್ತು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>ಒಂದೊಂದು ಹುದ್ದೆಗೆ ಒಂದೊಂದು ದಿನ ಪರೀಕ್ಷೆ ನಡೆಯಲಿದೆ. ಒಟ್ಟಾರೆ 4,868 ಮಂದಿ ಪರೀಕ್ಷೆ ಬರೆಯುತ್ತಿದ್ದು, ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಕಲಿಗೆ ಅವಕಾಶ ಇಲ್ಲದಂತೆ ನಿಗಾ ಇಡಲಾಗುವುದು ಎಂದು ಅವರು ವಿವರಿಸಿದ್ದಾರೆ.</p><p>ಸ್ಪರ್ಧಾತ್ಮಕ ಪರೀಕ್ಷೆ ಸಲುವಾಗಿ ವಸ್ತ್ರಸಂಹಿತೆ ಕೂಡ ಇದ್ದು, ಆ ಪ್ರಕಾರ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಕ್ರಮ ಎಸಗುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>