<p><strong>ಬೆಂಗಳೂರು</strong>: ಒಂಬತ್ತು ದಿನಗಳಲ್ಲಿ ಒಟ್ಟು 54 ಗಂಟೆಯಷ್ಟು ನಡೆದ ವಿಧಾನ ಪರಿಷತ್ತಿನ ಕಲಾಪವು, ಕಡೆಯ ದಿನ ವಿರೋಧ ಪಕ್ಷಗಳ ಸದಸ್ಯರ ಧರಣಿಯೊಂದಿಗೆ ಕೊನೆಗೊಂಡಿತು.</p>.<p>ಶುಕ್ರವಾರದ ಕಲಾಪದಲ್ಲಿ ಪ್ರಶ್ನೋತ್ತರಕ್ಕೂ ಮುನ್ನ ಬಿಜೆಪಿಯ ಶಶಿಲ್ ಜಿ. ನಮೋಷಿ ಅವರು ಒಂದು ವಿಚಾರ ಪ್ರಸ್ತಾಪ ಮಾಡಲು ಅನುಮತಿ ಕೇಳಿದರು. ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಷಯ ಪ್ರಸ್ತಾಪಿಸುವಂತೆ ಸೂಚಿಸಿದರು.</p>.<p>ನಮೋಷಿ ಅವರು, ‘ಇದೇ 27ರಂದು ಗಣೇಶನ ಹಬ್ಬವಿದೆ. ಈ ಸಂದರ್ಭದಲ್ಲಿ ರಾತ್ರಿ 10ರ ನಂತರ ಡಿ.ಜೆ ಬಳಸಬಾರದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ತಿಲಕರು ಸಾರ್ವಜನಿಕ ಗಣೇಶೋತ್ಸವ ಆರಂಭಿಸಿದಾಗ ಬ್ರಿಟಿಷರೇ ಅಡ್ಡಿಪಡಿಸಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ನಮ್ಮ ಹಬ್ಬಕ್ಕೆ ಅಡಚಣೆ ಮಾಡುತ್ತಿದೆ’ ಎಂದು ತಕರಾರು ಎತ್ತಿದರು.</p>.<p>ಸಭಾನಾಯಕ ಎನ್.ಎಸ್.ಭೋಸರಾಜು, ‘ಆಯಾ ಜಿಲ್ಲೆಯಲ್ಲಿನ ಸ್ಥಿತಿಗತಿಯನ್ನು ನೋಡಿಕೊಂಡು ಅನುಮತಿ ನೀಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಇದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ’ ಎಂದರು.</p>.<p>ಅವರ ಉತ್ತರದಿಂದ ತೃಪ್ತರಾಗದ ಬಿಜೆಪಿ ಸದಸ್ಯರು, ‘ಈ ಆದೇಶವನ್ನು ಸರ್ಕಾರ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು. ಸಭಾನಾಯಕರು ಅದಕ್ಕೆ ಪ್ರತಿಕ್ರಿಯೆ ನೀಡದೇ ಇದ್ದಾಗ, ‘ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ’ ಎಂದು ಕೂಗಿದರು. </p>.<p>ಆಗ ವಿರೋಧ ಪಕ್ಷಗಳ ಸದಸ್ಯರು ಸಭಾಪತಿ ಪೀಠದ ಎದುರಿಗೆ ಧಾವಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಭಾಪತಿ ಹೊರಟ್ಟಿ ಅವರು ಪರಿಷತ್ತಿನ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಒಂಬತ್ತು ದಿನಗಳಲ್ಲಿ ಒಟ್ಟು 54 ಗಂಟೆಯಷ್ಟು ನಡೆದ ವಿಧಾನ ಪರಿಷತ್ತಿನ ಕಲಾಪವು, ಕಡೆಯ ದಿನ ವಿರೋಧ ಪಕ್ಷಗಳ ಸದಸ್ಯರ ಧರಣಿಯೊಂದಿಗೆ ಕೊನೆಗೊಂಡಿತು.</p>.<p>ಶುಕ್ರವಾರದ ಕಲಾಪದಲ್ಲಿ ಪ್ರಶ್ನೋತ್ತರಕ್ಕೂ ಮುನ್ನ ಬಿಜೆಪಿಯ ಶಶಿಲ್ ಜಿ. ನಮೋಷಿ ಅವರು ಒಂದು ವಿಚಾರ ಪ್ರಸ್ತಾಪ ಮಾಡಲು ಅನುಮತಿ ಕೇಳಿದರು. ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಷಯ ಪ್ರಸ್ತಾಪಿಸುವಂತೆ ಸೂಚಿಸಿದರು.</p>.<p>ನಮೋಷಿ ಅವರು, ‘ಇದೇ 27ರಂದು ಗಣೇಶನ ಹಬ್ಬವಿದೆ. ಈ ಸಂದರ್ಭದಲ್ಲಿ ರಾತ್ರಿ 10ರ ನಂತರ ಡಿ.ಜೆ ಬಳಸಬಾರದು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ತಿಲಕರು ಸಾರ್ವಜನಿಕ ಗಣೇಶೋತ್ಸವ ಆರಂಭಿಸಿದಾಗ ಬ್ರಿಟಿಷರೇ ಅಡ್ಡಿಪಡಿಸಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ನಮ್ಮ ಹಬ್ಬಕ್ಕೆ ಅಡಚಣೆ ಮಾಡುತ್ತಿದೆ’ ಎಂದು ತಕರಾರು ಎತ್ತಿದರು.</p>.<p>ಸಭಾನಾಯಕ ಎನ್.ಎಸ್.ಭೋಸರಾಜು, ‘ಆಯಾ ಜಿಲ್ಲೆಯಲ್ಲಿನ ಸ್ಥಿತಿಗತಿಯನ್ನು ನೋಡಿಕೊಂಡು ಅನುಮತಿ ನೀಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಇದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ’ ಎಂದರು.</p>.<p>ಅವರ ಉತ್ತರದಿಂದ ತೃಪ್ತರಾಗದ ಬಿಜೆಪಿ ಸದಸ್ಯರು, ‘ಈ ಆದೇಶವನ್ನು ಸರ್ಕಾರ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು. ಸಭಾನಾಯಕರು ಅದಕ್ಕೆ ಪ್ರತಿಕ್ರಿಯೆ ನೀಡದೇ ಇದ್ದಾಗ, ‘ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ’ ಎಂದು ಕೂಗಿದರು. </p>.<p>ಆಗ ವಿರೋಧ ಪಕ್ಷಗಳ ಸದಸ್ಯರು ಸಭಾಪತಿ ಪೀಠದ ಎದುರಿಗೆ ಧಾವಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಭಾಪತಿ ಹೊರಟ್ಟಿ ಅವರು ಪರಿಷತ್ತಿನ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>