<p><strong>ಬೆಂಗಳೂರು:</strong> ‘ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸಾಮಾನ್ಯ ಜನರ ಹಕ್ಕುಗಳ ರಕ್ಷಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ದೇಶಕ್ಕೇ ಮಾದರಿ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು.</p>.<p>ಲೋಕಾಯುಕ್ತ ಸಂಸ್ಥೆಯು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಕರ್ನಾಟಕ ಲೋಕಾಯುಕ್ತದ 4 ದಶಕಗಳ ಪಯಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರದ ಸೇವೆ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ, ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಲೋಕಾಯುಕ್ತವು ಮಹತ್ವದ ಪಾತ್ರವಹಿಸಿದೆ. ಸಂಸ್ಥೆಯು 40 ವರ್ಷಗಳಿಂದಲೂ ಈ ಕೆಲಸವನ್ನು ಮಾಡಿಕೊಂಡು ಬರುತ್ತಿದೆ’ ಎಂದರು.</p>.<p>‘ಕಬ್ಬಿಣದ ಅದಿರು ಸೇರಿ ಖನಿಜ ಸಂಪನ್ಮೂಲಗಳ ಗಣಿಗಾರಿಕೆಯಲ್ಲಿನ ಅಕ್ರಮಗಳನ್ನು ಹೊರಗೆಡವಿದ್ದು ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು. ಜನರೇ ಭ್ರಷ್ಟಾಚಾರವನ್ನು ತಿರಸ್ಕರಿಸುವಂತಹ ವಾತಾವರಣ ನಿರ್ಮಿಸಿದ ಈ ಸಂಸ್ಥೆಯ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದರು.</p>.<p>ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ‘ಭ್ರಷ್ಟಾಚಾರದ ವಿರುದ್ಧ ಹೋರಾಡಲು ದೇಶದಲ್ಲೇ ಮೊದಲ ಬಾರಿಗೆ ಲೋಕಾಯುಕ್ತವನ್ನು ಆರಂಭಿಸಿದ ಹೆಗ್ಗಳಿಕೆ ಕರ್ನಾಟಕಕ್ಕೆ ಸಲ್ಲುತ್ತದೆ. ಭ್ರಷ್ಟಾಚಾರ ಒಂದು ಸಾಮಾಜಿಕ ಪಿಡುಗು ಮತ್ತು ಅದರ ವಿರುದ್ಧ ಹೋರಾಡಬೇಕು ಎಂಬ ಮನಸ್ಥಿತಿಯನ್ನು ಜನರಲ್ಲಿ ಮೂಡಿಸುವಲ್ಲಿ ಈ ಸಂಸ್ಥೆ ದುಡಿದಿದೆ’ ಎಂದರು.</p>.<p>‘ಭ್ರಷ್ಟಾಚಾರ ಮತ್ತು ಅಪರಾಧದ ಸ್ವರೂಪದ ಪ್ರತಿದಿನವೂ ಬದಲಾಗುತ್ತಿದೆ. ಸೈಬರ್ ಅಪರಾಧ/ಭ್ರಷ್ಟಾಚಾರ, ಡಿಜಿಟಲ್ ತಿರುಚುವಿಕೆ ಈಗ ದೊಡ್ಡ ಪಿಡುಗುಗಳಾಗಿವೆ. ಅವುಗಳನ್ನೂ ನಿರ್ವಹಣೆ ಮಾಡುವಂತಹ ಅತ್ಯಾಧುನಿಕ ತಂತ್ರಜ್ಞಾನ, ವಿಧಿವಿಜ್ಞಾನ ಪರೀಕ್ಷೆಗಳಂತಹ ಸವಲತ್ತುಗಳನ್ನು ಕರ್ನಾಟಕ ಲೋಕಾಯುಕ್ತವು ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ, ‘ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ತರುವುದು ಮತ್ತು ಆಡಳಿತ ಯಂತ್ರದಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವುದೇ ಲೋಕಾಯುಕ್ತದ ಮೂಲ ಉದ್ದೇಶ’ ಎಂದರು.</p>.<p>‘ದಿಢೀರ್ ದಾಳಿಗಳು ಮತ್ತು ದೂರುಗಳ ಆಧಾರದಲ್ಲಿ ತನಿಖೆ ಮಾತ್ರವಲ್ಲದೆ, ಜಿಲ್ಲಾ ಪ್ರವಾಸ ಹಾಗೂ ಲೋಕ ಅದಾಲತ್ಗಳನ್ನು ನಡೆಸುತ್ತಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ. ಸರ್ಕಾರದ ಸೌಲಭ್ಯಗಳು ಅರ್ಹರನ್ನು ತಲುಪದೇ ಇದ್ದ ಅಥವಾ ವಿಳಂಬವಾದ ಸಂದರ್ಭದಲ್ಲಿ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಈ ವ್ಯವಸ್ಥೆ ಮೇಲೆ ಜನರಿಗೆ ನಂಬಿಕೆ ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸಾಮಾನ್ಯ ಜನರ ಹಕ್ಕುಗಳ ರಕ್ಷಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ದೇಶಕ್ಕೇ ಮಾದರಿ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು.</p>.<p>ಲೋಕಾಯುಕ್ತ ಸಂಸ್ಥೆಯು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಕರ್ನಾಟಕ ಲೋಕಾಯುಕ್ತದ 4 ದಶಕಗಳ ಪಯಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸರ್ಕಾರದ ಸೇವೆ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ, ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಲೋಕಾಯುಕ್ತವು ಮಹತ್ವದ ಪಾತ್ರವಹಿಸಿದೆ. ಸಂಸ್ಥೆಯು 40 ವರ್ಷಗಳಿಂದಲೂ ಈ ಕೆಲಸವನ್ನು ಮಾಡಿಕೊಂಡು ಬರುತ್ತಿದೆ’ ಎಂದರು.</p>.<p>‘ಕಬ್ಬಿಣದ ಅದಿರು ಸೇರಿ ಖನಿಜ ಸಂಪನ್ಮೂಲಗಳ ಗಣಿಗಾರಿಕೆಯಲ್ಲಿನ ಅಕ್ರಮಗಳನ್ನು ಹೊರಗೆಡವಿದ್ದು ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು. ಜನರೇ ಭ್ರಷ್ಟಾಚಾರವನ್ನು ತಿರಸ್ಕರಿಸುವಂತಹ ವಾತಾವರಣ ನಿರ್ಮಿಸಿದ ಈ ಸಂಸ್ಥೆಯ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದರು.</p>.<p>ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ‘ಭ್ರಷ್ಟಾಚಾರದ ವಿರುದ್ಧ ಹೋರಾಡಲು ದೇಶದಲ್ಲೇ ಮೊದಲ ಬಾರಿಗೆ ಲೋಕಾಯುಕ್ತವನ್ನು ಆರಂಭಿಸಿದ ಹೆಗ್ಗಳಿಕೆ ಕರ್ನಾಟಕಕ್ಕೆ ಸಲ್ಲುತ್ತದೆ. ಭ್ರಷ್ಟಾಚಾರ ಒಂದು ಸಾಮಾಜಿಕ ಪಿಡುಗು ಮತ್ತು ಅದರ ವಿರುದ್ಧ ಹೋರಾಡಬೇಕು ಎಂಬ ಮನಸ್ಥಿತಿಯನ್ನು ಜನರಲ್ಲಿ ಮೂಡಿಸುವಲ್ಲಿ ಈ ಸಂಸ್ಥೆ ದುಡಿದಿದೆ’ ಎಂದರು.</p>.<p>‘ಭ್ರಷ್ಟಾಚಾರ ಮತ್ತು ಅಪರಾಧದ ಸ್ವರೂಪದ ಪ್ರತಿದಿನವೂ ಬದಲಾಗುತ್ತಿದೆ. ಸೈಬರ್ ಅಪರಾಧ/ಭ್ರಷ್ಟಾಚಾರ, ಡಿಜಿಟಲ್ ತಿರುಚುವಿಕೆ ಈಗ ದೊಡ್ಡ ಪಿಡುಗುಗಳಾಗಿವೆ. ಅವುಗಳನ್ನೂ ನಿರ್ವಹಣೆ ಮಾಡುವಂತಹ ಅತ್ಯಾಧುನಿಕ ತಂತ್ರಜ್ಞಾನ, ವಿಧಿವಿಜ್ಞಾನ ಪರೀಕ್ಷೆಗಳಂತಹ ಸವಲತ್ತುಗಳನ್ನು ಕರ್ನಾಟಕ ಲೋಕಾಯುಕ್ತವು ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ, ‘ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ತರುವುದು ಮತ್ತು ಆಡಳಿತ ಯಂತ್ರದಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವುದೇ ಲೋಕಾಯುಕ್ತದ ಮೂಲ ಉದ್ದೇಶ’ ಎಂದರು.</p>.<p>‘ದಿಢೀರ್ ದಾಳಿಗಳು ಮತ್ತು ದೂರುಗಳ ಆಧಾರದಲ್ಲಿ ತನಿಖೆ ಮಾತ್ರವಲ್ಲದೆ, ಜಿಲ್ಲಾ ಪ್ರವಾಸ ಹಾಗೂ ಲೋಕ ಅದಾಲತ್ಗಳನ್ನು ನಡೆಸುತ್ತಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ. ಸರ್ಕಾರದ ಸೌಲಭ್ಯಗಳು ಅರ್ಹರನ್ನು ತಲುಪದೇ ಇದ್ದ ಅಥವಾ ವಿಳಂಬವಾದ ಸಂದರ್ಭದಲ್ಲಿ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಈ ವ್ಯವಸ್ಥೆ ಮೇಲೆ ಜನರಿಗೆ ನಂಬಿಕೆ ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>