<p><strong>ಬೆಂಗಳೂರು:</strong> ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಎಸ್.ಸುರೇಶ್ ಬಳಿ ₹ 25 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಇಂದು (ಮಂಗಳವಾರ) ಪತ್ತೆ ಮಾಡಿದ್ದಾರೆ.</p><p>ರಾಜ್ಯದ ಆರು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.</p><p>ಇದರಲ್ಲಿ ಗರಿಷ್ಠ ಪ್ರಮಾಣದ ಆಸ್ತಿ ಪತ್ತೆಯಾಗಿರುವುದು ಸುರೇಶ್ ಬಳಿ. ಇವರಿಗೆ ಸೇರಿದ 6 ಕಡೆಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದರು. ಇದರಲ್ಲಿ 16 ನಿವೇಶನ, 1 ವಾಸದ ಮನೆ, 7.6 ಎಕರೆ ಕೃಷಿ ಜಮೀನು ಸೇರಿ ₹ 21.27 ಕೋಟಿಯಷ್ಟು ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 11.97 ಲಕ್ಷ ನಗದು, ₹ 2.11 ಕೋಟಿ ಮೌಲ್ಯದ ಚಿನ್ನಾಭರಣ, ₹ 2.07 ಕೋಟಿ ಮೌಲ್ಯದ ಬೆಲೆಬಾಳುವ ವಾಹನಗಳು ಸೇರಿ ಒಟ್ಟು ₹ 4.30 ಕೋಟಿ ಮೊತ್ತದ ಚರಾಸ್ತಿ ಪತ್ತೆಯಾಗಿದೆ.</p>.<h3>ಬೆಸ್ಕಾಂ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ನಾಗರಾಜ್ ಬಳಿ ₹6.37 ಕೋಟಿ</h3><p>ಬೆಸ್ಕಾಂನ ಮುಖ್ಯ ಕಚೇರಿಯಲ್ಲಿ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಎಂ.ಎಲ್.ನಾಗರಾಜ್ ಅವರ ಬಳಿ ₹ 6.37 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.</p><p>ಇವರಿಗೆ ಸೇರಿದ ಏಳು ಕಡೆಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದರು. 13 ನಿವೇಶನ, 2 ವಾಸದ ಮನೆಗಳು, ಕೃಷಿ ಜಮೀನು ಸೇರಿ ಒಟ್ಟು ₹ 5.35 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 6.77 ಲಕ್ಷ ನಗದು, ₹ 16.44 ಲಕ್ಷ ಮೌಲ್ಯದ ಆಭರಣ, ₹ 13.50 ಲಕ್ಷ ಬೆಲೆಯ ವಾಹನಗಳು, ₹ 11.19 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳ ಸಹಿತ ಒಟ್ಟು ₹ 63.66 ಲಕ್ಷ ಬೆಲೆಯ ಚರಾಸ್ತಿಗಳು ಪತ್ತೆಯಾಗಿವೆ.</p>.<h3>ಪಿಡಿಒ ಪದ್ಮನಾಭ್ ಬಳಿ ₹ 5.98 ಕೋಟಿ ಆಸ್ತಿ</h3><p>ದೇವನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯ್ತಿ ಅಧಿಕಾರಿ ಡಿ.ಎಂ.ಪದ್ಮನಾಭ ಬಳಿ ₹ 5.98 ಕೋಟಿ ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p><p>ಇವರಿಗೆ ಸೇರಿದ ಒಟ್ಟು 6 ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿದರು. ಒಂದು ಕೈಗಾರಿಕಾ ನಿವೇಶನ, 2 ವಾಸದ ಮನೆಗಳು, 8.18 ಎಕರೆ ಕೃಷಿ ಜಮೀನು, ಒಂದು ಫಾರ್ಮ್ ಹೌಸ್ ಸೇರಿ ಒಟ್ಟು ₹ 5.35 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 2.62 ಲಕ್ಷ ನಗದು, ₹ 17.24 ಲಕ್ಷದ ಬೆಲೆಯ ಚಿನ್ನಾಭರಣ, ₹ 28.75 ಲಕ್ಷ ಬೆಲೆಯ ವಾಹನಗಳು ಮತ್ತು ₹ 15 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸೇರಿ ₹ 63.66 ಲಕ್ಷ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.</p>.<h3>ಕೆಆರ್ಐಡಿಎಲ್ ಪ್ರಭಾರ ಇಇ ಸೈಯದ್ ಮುನೀರ್ ಅಹಮದ್ ಬಳಿ ₹ 5.48 ಕೋಟಿ</h3><p>ರಾಮನಗರ ಜಿಲ್ಲೆಯ ಕೆಆರ್ಯಡಿಎಲ್ ಕಚೇರಿಯ ಪ್ರಭಾರ ಕಾರ್ಯ ನಿರ್ವಾಹಕ ಎಂಜಿನಿಯರ್ ಸೈಯದ್ ಮುನೀರ್ ಅಹಮದ್ ಬಳಿ ₹ 5.48 ಕೋಟಿ ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p><p>ಸೈಯದ್ ಮುನೀರ್ ಅವರಿಗೆ ಸೇರಿದ 6 ಸ್ಥಳಗಳಲ್ಲಿ ಮಂಗಳವಾರ ನಡೆದ ಶೋಧ ಕಾರ್ಯದಲ್ಲಿ, 2 ನಿವೇಶನ, ಒಟ್ಟು 7 ವಾಸದ ಮನೆಗಳು, ಕೃಷಿ ಜಮೀನು ಸೇರಿ ಒಟ್ಟು ₹ 4.10 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 8.54 ಲಕ್ಷ ನಗದು, ₹ 73.47 ಲಕ್ಷದ ಚಿನ್ನಾಭರಣ, ₹ 21 ಲಕ್ಷ ಮೌಲ್ಯದ ವಾಹನಗಳು ಹಾಗೂ ₹ 35 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸೇರಿ ಒಟ್ಟು ₹ 1.38 ಕೋಟಿ ಮೌಲ್ಯದ ಚರಾಸ್ತಿ ಪತ್ತೆಯಾಗಿವೆ.</p>.<h3>ಪಿಡಬ್ಲೂಡಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಸತೀಶ್ ಬಾಬು ಬಳಿ ₹ 4.52 ಕೋಟಿ</h3><p>ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯ ಕಟ್ಟಡ ವೃತ್ತದ ಸೂಪರಿಂಟೆಂಡೆಂಟ್ ಎಂಜಿನಿಯರ್ ಎನ್.ಸತೀಶ್ ಬಾಬು ಅವರ ಬಳಿ ₹ 4.52 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.</p><p>ಇವರಿಗೆ ಸೇರಿದ 5 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಶೋಧ ಕಾರ್ಯ ನಡೆಸಿದರು. ಇದರಲ್ಲಿ 1 ನಿವೇಶನ, 2 ವಾಸದ ಮನೆಗಳು, 15 ಎಕರೆ ಕೃಷಿ ಜಮೀನು ಸೇರಿ ಒಟ್ಟು ₹ 3.70 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 9 ಲಕ್ಷ ನಗದು, ₹ 64.62 ಲಕ್ಷ ಮೌಲ್ಯದ ಚಿನ್ನಾಭರಣ, ₹ 8.70 ಲಕ್ಷ ಬೆಲೆಯ ವಾಹನಗಳು ಸೇರಿ ಒಟ್ಟು ₹ 82.32 ಲಕ್ಷ ಮೌಲ್ಯದ ಚರಾಸ್ತಿಗಳು ಪತ್ತೆಯಾಗಿವೆ.</p>.<h3>ನಗರ ಯೋಜನೆಯ ಜಂಟಿ ನಿರ್ದೇಶಕ ಬಿ.ಮಂಜೇಶ್ ಬಳಿ ₹ 3.18 ಕೋಟಿ</h3><p>ಆನೇಕಲ್ ತಾಲ್ಲೂಕಿನ ಯೋಜನಾ ಪ್ರಾಧಿಕಾರದ ನಗರ ಮತ್ತು ಯೋಜನೆ ವಿಭಾಗದ ಸದಸ್ಯ ಕಾರ್ಯದರ್ಶಿ ಮತ್ತು ಜಂಟಿ ನಿರ್ದೇಶಕ ಬಿ.ಮಂಜೇಶ್ ಬಳಿ ₹ 3.18 ಕೋಟಿ ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p><p>ಅವರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಮಂಗಳವಾರ ದಾಳಿ ನಡೆಸಿದ ಪೊಲೀಸರು, 11 ನಿವೇಶನಗಳು, 1 ವಾಸದ ಮನೆ ಸೇರಿ ಒಟ್ಟು ₹ 1.20 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆ ಮಾಡಿದ್ದಾರೆ.</p><p>₹ 5.07 ಲಕ್ಷ ನಗದು, ₹ 35.97 ಲಕ್ಷ ಮೌಲ್ಯದ ಚಿನ್ನಾಭರಣ, ₹ 7.71 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸೇರಿ ₹ 1.98 ಕೋಟಿ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಎಸ್.ಸುರೇಶ್ ಬಳಿ ₹ 25 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಇಂದು (ಮಂಗಳವಾರ) ಪತ್ತೆ ಮಾಡಿದ್ದಾರೆ.</p><p>ರಾಜ್ಯದ ಆರು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.</p><p>ಇದರಲ್ಲಿ ಗರಿಷ್ಠ ಪ್ರಮಾಣದ ಆಸ್ತಿ ಪತ್ತೆಯಾಗಿರುವುದು ಸುರೇಶ್ ಬಳಿ. ಇವರಿಗೆ ಸೇರಿದ 6 ಕಡೆಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದರು. ಇದರಲ್ಲಿ 16 ನಿವೇಶನ, 1 ವಾಸದ ಮನೆ, 7.6 ಎಕರೆ ಕೃಷಿ ಜಮೀನು ಸೇರಿ ₹ 21.27 ಕೋಟಿಯಷ್ಟು ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 11.97 ಲಕ್ಷ ನಗದು, ₹ 2.11 ಕೋಟಿ ಮೌಲ್ಯದ ಚಿನ್ನಾಭರಣ, ₹ 2.07 ಕೋಟಿ ಮೌಲ್ಯದ ಬೆಲೆಬಾಳುವ ವಾಹನಗಳು ಸೇರಿ ಒಟ್ಟು ₹ 4.30 ಕೋಟಿ ಮೊತ್ತದ ಚರಾಸ್ತಿ ಪತ್ತೆಯಾಗಿದೆ.</p>.<h3>ಬೆಸ್ಕಾಂ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ನಾಗರಾಜ್ ಬಳಿ ₹6.37 ಕೋಟಿ</h3><p>ಬೆಸ್ಕಾಂನ ಮುಖ್ಯ ಕಚೇರಿಯಲ್ಲಿ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಎಂ.ಎಲ್.ನಾಗರಾಜ್ ಅವರ ಬಳಿ ₹ 6.37 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.</p><p>ಇವರಿಗೆ ಸೇರಿದ ಏಳು ಕಡೆಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದರು. 13 ನಿವೇಶನ, 2 ವಾಸದ ಮನೆಗಳು, ಕೃಷಿ ಜಮೀನು ಸೇರಿ ಒಟ್ಟು ₹ 5.35 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 6.77 ಲಕ್ಷ ನಗದು, ₹ 16.44 ಲಕ್ಷ ಮೌಲ್ಯದ ಆಭರಣ, ₹ 13.50 ಲಕ್ಷ ಬೆಲೆಯ ವಾಹನಗಳು, ₹ 11.19 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳ ಸಹಿತ ಒಟ್ಟು ₹ 63.66 ಲಕ್ಷ ಬೆಲೆಯ ಚರಾಸ್ತಿಗಳು ಪತ್ತೆಯಾಗಿವೆ.</p>.<h3>ಪಿಡಿಒ ಪದ್ಮನಾಭ್ ಬಳಿ ₹ 5.98 ಕೋಟಿ ಆಸ್ತಿ</h3><p>ದೇವನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯ್ತಿ ಅಧಿಕಾರಿ ಡಿ.ಎಂ.ಪದ್ಮನಾಭ ಬಳಿ ₹ 5.98 ಕೋಟಿ ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p><p>ಇವರಿಗೆ ಸೇರಿದ ಒಟ್ಟು 6 ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿದರು. ಒಂದು ಕೈಗಾರಿಕಾ ನಿವೇಶನ, 2 ವಾಸದ ಮನೆಗಳು, 8.18 ಎಕರೆ ಕೃಷಿ ಜಮೀನು, ಒಂದು ಫಾರ್ಮ್ ಹೌಸ್ ಸೇರಿ ಒಟ್ಟು ₹ 5.35 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 2.62 ಲಕ್ಷ ನಗದು, ₹ 17.24 ಲಕ್ಷದ ಬೆಲೆಯ ಚಿನ್ನಾಭರಣ, ₹ 28.75 ಲಕ್ಷ ಬೆಲೆಯ ವಾಹನಗಳು ಮತ್ತು ₹ 15 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸೇರಿ ₹ 63.66 ಲಕ್ಷ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.</p>.<h3>ಕೆಆರ್ಐಡಿಎಲ್ ಪ್ರಭಾರ ಇಇ ಸೈಯದ್ ಮುನೀರ್ ಅಹಮದ್ ಬಳಿ ₹ 5.48 ಕೋಟಿ</h3><p>ರಾಮನಗರ ಜಿಲ್ಲೆಯ ಕೆಆರ್ಯಡಿಎಲ್ ಕಚೇರಿಯ ಪ್ರಭಾರ ಕಾರ್ಯ ನಿರ್ವಾಹಕ ಎಂಜಿನಿಯರ್ ಸೈಯದ್ ಮುನೀರ್ ಅಹಮದ್ ಬಳಿ ₹ 5.48 ಕೋಟಿ ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p><p>ಸೈಯದ್ ಮುನೀರ್ ಅವರಿಗೆ ಸೇರಿದ 6 ಸ್ಥಳಗಳಲ್ಲಿ ಮಂಗಳವಾರ ನಡೆದ ಶೋಧ ಕಾರ್ಯದಲ್ಲಿ, 2 ನಿವೇಶನ, ಒಟ್ಟು 7 ವಾಸದ ಮನೆಗಳು, ಕೃಷಿ ಜಮೀನು ಸೇರಿ ಒಟ್ಟು ₹ 4.10 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 8.54 ಲಕ್ಷ ನಗದು, ₹ 73.47 ಲಕ್ಷದ ಚಿನ್ನಾಭರಣ, ₹ 21 ಲಕ್ಷ ಮೌಲ್ಯದ ವಾಹನಗಳು ಹಾಗೂ ₹ 35 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸೇರಿ ಒಟ್ಟು ₹ 1.38 ಕೋಟಿ ಮೌಲ್ಯದ ಚರಾಸ್ತಿ ಪತ್ತೆಯಾಗಿವೆ.</p>.<h3>ಪಿಡಬ್ಲೂಡಿ ಸೂಪರಿಂಟೆಂಡೆಂಟ್ ಎಂಜಿನಿಯರ್ ಸತೀಶ್ ಬಾಬು ಬಳಿ ₹ 4.52 ಕೋಟಿ</h3><p>ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯ ಕಟ್ಟಡ ವೃತ್ತದ ಸೂಪರಿಂಟೆಂಡೆಂಟ್ ಎಂಜಿನಿಯರ್ ಎನ್.ಸತೀಶ್ ಬಾಬು ಅವರ ಬಳಿ ₹ 4.52 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.</p><p>ಇವರಿಗೆ ಸೇರಿದ 5 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಶೋಧ ಕಾರ್ಯ ನಡೆಸಿದರು. ಇದರಲ್ಲಿ 1 ನಿವೇಶನ, 2 ವಾಸದ ಮನೆಗಳು, 15 ಎಕರೆ ಕೃಷಿ ಜಮೀನು ಸೇರಿ ಒಟ್ಟು ₹ 3.70 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ.</p><p>₹ 9 ಲಕ್ಷ ನಗದು, ₹ 64.62 ಲಕ್ಷ ಮೌಲ್ಯದ ಚಿನ್ನಾಭರಣ, ₹ 8.70 ಲಕ್ಷ ಬೆಲೆಯ ವಾಹನಗಳು ಸೇರಿ ಒಟ್ಟು ₹ 82.32 ಲಕ್ಷ ಮೌಲ್ಯದ ಚರಾಸ್ತಿಗಳು ಪತ್ತೆಯಾಗಿವೆ.</p>.<h3>ನಗರ ಯೋಜನೆಯ ಜಂಟಿ ನಿರ್ದೇಶಕ ಬಿ.ಮಂಜೇಶ್ ಬಳಿ ₹ 3.18 ಕೋಟಿ</h3><p>ಆನೇಕಲ್ ತಾಲ್ಲೂಕಿನ ಯೋಜನಾ ಪ್ರಾಧಿಕಾರದ ನಗರ ಮತ್ತು ಯೋಜನೆ ವಿಭಾಗದ ಸದಸ್ಯ ಕಾರ್ಯದರ್ಶಿ ಮತ್ತು ಜಂಟಿ ನಿರ್ದೇಶಕ ಬಿ.ಮಂಜೇಶ್ ಬಳಿ ₹ 3.18 ಕೋಟಿ ಮೌಲ್ಯದ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.</p><p>ಅವರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಮಂಗಳವಾರ ದಾಳಿ ನಡೆಸಿದ ಪೊಲೀಸರು, 11 ನಿವೇಶನಗಳು, 1 ವಾಸದ ಮನೆ ಸೇರಿ ಒಟ್ಟು ₹ 1.20 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆ ಮಾಡಿದ್ದಾರೆ.</p><p>₹ 5.07 ಲಕ್ಷ ನಗದು, ₹ 35.97 ಲಕ್ಷ ಮೌಲ್ಯದ ಚಿನ್ನಾಭರಣ, ₹ 7.71 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸೇರಿ ₹ 1.98 ಕೋಟಿ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>