<p><strong>ಮದ್ದೂರು: </strong>‘ಗುಜರಾತ್ನ ‘ಅಮುಲ್’ ಜತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದರು.</p>.<p>ತಾಲ್ಲೂಕಿನ ಗೆಜ್ಜಲಗೆರೆ ಜಿಲ್ಲಾ ಹಾಲು ಒಕ್ಕೂಟದ (ಮನ್ ಮುಲ್) ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗುಜರಾತ್ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975ರಿಂದಲೂ ಕೆಎಂಎಫ್ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ’ ಎಂದರು.</p>.<p>‘ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಅಧಿಕ ಪ್ರಾಥಮಿಕ ಡೇರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು. ಆ ಮೂಲಕ ಹಾಲಿನ ಉತ್ಪನ್ನಗಳನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡುವ ಗುರಿ ಹೊಂದಲಾಗಿದೆ’ ಎಂದರು.</p>.<p>‘ಕರ್ನಾಟಕದಲ್ಲಿ ಪ್ರಸ್ತುತ ಹಾಲು ಉತ್ಪಾದಕರಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪ್ರತಿ ಲೀಟರ್ ಹಾಲಿಗೆ ₹ 5 ಪ್ರೋತ್ಸಾಹ ಧನ ನೀಡುತ್ತಿದೆ. ಇದರಿಂದ ಸುಮಾರು ₹ 36 ಲಕ್ಷ ಹಾಲು ಉತ್ಪಾದಕರು ಇದರ ಉಪಯೋಗ ಪಡೆಯುತ್ತಿದ್ದಾರೆ. ಮನ್ಮುಲ್ ಆವರಣದಲ್ಲಿ ₹ 260 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೆಗಾ ಡೇರಿ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ’ ಎಂದರು.</p>.<p>ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾತನಾಡಿ ‘ನಾನು ಪ್ರಧಾನಿಯಾಗಿದ್ದಾಗ ಸಹಕಾರ ಕ್ಷೇತ್ರದ ಉನ್ನತಿಗೆ ದುಡಿದಿದ್ದೆ. ದೇಶದ ಹಲವಾರು ಹಾಲಿನ ಸೊಸೈಟಿಗಳನ್ನು ಒಟ್ಟುಗೂಡಿಸಿ ಹಾಲು ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಲು ಶ್ರಮಿಸಿದ್ದೆ’ ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ದೇಶ ಹಾಗೂ ರಾಜ್ಯದಲ್ಲಿ ಕ್ಷೀರ ಕ್ರಾಂತಿ ನಡೆಯುತ್ತಿದೆ. ಹೈನುಗಾರಿಕೆಯಿಂದ ರೈತರು ಆರ್ಥಿಕ ಪ್ರಗತಿ ಸಾಧಿಸುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಹಿಂದೆ ನಮ್ಮ ರಾಜ್ಯದ ಮೊದಲ ಬೆಂಗಳೂರು ಮೆಗಾ ಡೇರಿ ನಿರ್ಮಾಣಕ್ಕೆ ಕಾರಣರಾಗಿದ್ದವರು, ಅದನ್ನು ಯಾರೂ ಮರೆಯುವುದಿಲ್ಲ’ ಎಂದರು.</p>.<p>ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಶಾಸಕರಾದ ಡಿ.ಸಿ.ತಮ್ಮಣ್ಣ, ಪುಟ್ಟರಾಜು, ಸುರೇಶ್ ಗೌಡ, ಅನ್ನದಾನಿ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮನಮುಲ್ ಅಧ್ಯಕ್ಷ ರಾಮಚಂದ್ರು ಇದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/kannadigas-rises-objection-to-amul-and-nandini-kmf-merger-which-is-proposed-by-amit-shah-at-mandya-1001967.html" target="_blank">‘ನಂದಿನಿ’– ‘ಅಮುಲ್’ ವಿಲೀನಗೊಳಿಸುವ ಶಾ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ಆಕ್ರೋಶ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು: </strong>‘ಗುಜರಾತ್ನ ‘ಅಮುಲ್’ ಜತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದರು.</p>.<p>ತಾಲ್ಲೂಕಿನ ಗೆಜ್ಜಲಗೆರೆ ಜಿಲ್ಲಾ ಹಾಲು ಒಕ್ಕೂಟದ (ಮನ್ ಮುಲ್) ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗುಜರಾತ್ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975ರಿಂದಲೂ ಕೆಎಂಎಫ್ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ’ ಎಂದರು.</p>.<p>‘ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಅಧಿಕ ಪ್ರಾಥಮಿಕ ಡೇರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು. ಆ ಮೂಲಕ ಹಾಲಿನ ಉತ್ಪನ್ನಗಳನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡುವ ಗುರಿ ಹೊಂದಲಾಗಿದೆ’ ಎಂದರು.</p>.<p>‘ಕರ್ನಾಟಕದಲ್ಲಿ ಪ್ರಸ್ತುತ ಹಾಲು ಉತ್ಪಾದಕರಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪ್ರತಿ ಲೀಟರ್ ಹಾಲಿಗೆ ₹ 5 ಪ್ರೋತ್ಸಾಹ ಧನ ನೀಡುತ್ತಿದೆ. ಇದರಿಂದ ಸುಮಾರು ₹ 36 ಲಕ್ಷ ಹಾಲು ಉತ್ಪಾದಕರು ಇದರ ಉಪಯೋಗ ಪಡೆಯುತ್ತಿದ್ದಾರೆ. ಮನ್ಮುಲ್ ಆವರಣದಲ್ಲಿ ₹ 260 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೆಗಾ ಡೇರಿ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ’ ಎಂದರು.</p>.<p>ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾತನಾಡಿ ‘ನಾನು ಪ್ರಧಾನಿಯಾಗಿದ್ದಾಗ ಸಹಕಾರ ಕ್ಷೇತ್ರದ ಉನ್ನತಿಗೆ ದುಡಿದಿದ್ದೆ. ದೇಶದ ಹಲವಾರು ಹಾಲಿನ ಸೊಸೈಟಿಗಳನ್ನು ಒಟ್ಟುಗೂಡಿಸಿ ಹಾಲು ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಲು ಶ್ರಮಿಸಿದ್ದೆ’ ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ದೇಶ ಹಾಗೂ ರಾಜ್ಯದಲ್ಲಿ ಕ್ಷೀರ ಕ್ರಾಂತಿ ನಡೆಯುತ್ತಿದೆ. ಹೈನುಗಾರಿಕೆಯಿಂದ ರೈತರು ಆರ್ಥಿಕ ಪ್ರಗತಿ ಸಾಧಿಸುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಹಿಂದೆ ನಮ್ಮ ರಾಜ್ಯದ ಮೊದಲ ಬೆಂಗಳೂರು ಮೆಗಾ ಡೇರಿ ನಿರ್ಮಾಣಕ್ಕೆ ಕಾರಣರಾಗಿದ್ದವರು, ಅದನ್ನು ಯಾರೂ ಮರೆಯುವುದಿಲ್ಲ’ ಎಂದರು.</p>.<p>ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.</p>.<p>ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಶಾಸಕರಾದ ಡಿ.ಸಿ.ತಮ್ಮಣ್ಣ, ಪುಟ್ಟರಾಜು, ಸುರೇಶ್ ಗೌಡ, ಅನ್ನದಾನಿ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮನಮುಲ್ ಅಧ್ಯಕ್ಷ ರಾಮಚಂದ್ರು ಇದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/kannadigas-rises-objection-to-amul-and-nandini-kmf-merger-which-is-proposed-by-amit-shah-at-mandya-1001967.html" target="_blank">‘ನಂದಿನಿ’– ‘ಅಮುಲ್’ ವಿಲೀನಗೊಳಿಸುವ ಶಾ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ಆಕ್ರೋಶ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>