<p><strong>ಬೆಂಗಳೂರು:</strong> ಹಾಲು ಉತ್ಪಾದಕರಿಗೆ ಕರ್ನಾಟಕ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಲೀಟರ್ಗೆ ₹5 ರಿಂದ ₹ 7ಕ್ಕೆ ಏರಿಸುವ ಕುರಿತು ಈ ಬಾರಿಯ ಬಜೆಟ್ನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ.</p><p>ಎರಡು ತಿಂಗಳ ಹಿಂದೆಯೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೋತ್ಸಾಹಧನ ಏರಿಸುವುದಾಗಿ ಘೋಷಿಸಿದ್ದರೂ ಅದು ಜಾರಿಯಾಗಿಲ್ಲ. ಅಧಿಕೃತವಾಗಿ ಬಜೆಟ್ ಮೂಲಕವೇ ಪ್ರಕಟಿಸಿ ಜಾರಿಗೊಳಿಸುವ ಸಾಧ್ಯತೆಯಿದೆ.</p><p>ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಪ್ರತಿನಿತ್ಯ 1 ಕೋಟಿ ಲೀಟರ್ ಹಾಲನ್ನು ಕೆಎಂಎಫ್ ಸಂಗ್ರಹ ಮಾಡುತ್ತಿದೆ. ಪ್ರೋತ್ಸಾಹಧನ ಏರಿಕೆಯಿಂದ ಹಾಲಿನ ಉತ್ಪಾದನೆ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ಗುರಿಯನ್ನು ಮಹಾಮಂಡಳಿ ಇಟ್ಟುಕೊಂಡಿದೆ.</p><p>₹730 ಕೋಟಿ ನೆರವು: ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ ₹3 ಏರಿಕೆ ಮಾಡಿದ್ದೂ ಅಲ್ಲದೇ ₹400 ಸಹಾಯಧನ ಹೆಚ್ಚಳ ಮಾಡಿತ್ತು. ಈ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ವರ್ಗ ಮಾಡುತ್ತಿದ್ದೇವೆ. ಮೇವಿನ ದರ, ಪಶು ಆಹಾರ ಸಹಿತ ಇತರೆ ಉತ್ಪನ್ನಗಳ ದರ ಏರಿಕೆ ಕಾರಣದಿಂದ ಪ್ರೋತ್ಸಾಹಧನ ಹೆಚ್ಚಿಸುವ ಬೇಡಿಕೆ ಇದೆ. ಈ ಹಿಂದೆ ನಾವೇ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪ್ರೋತ್ಸಾಹಧನ ₹7ಗೆ ಹೆಚ್ಚಳ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದರು.</p><p>ಕರ್ನಾಟಕದಲ್ಲಿ ಸದ್ಯ 16 ಹಾಲು ಒಕ್ಕೂಟಗಳ ವ್ಯಾಪ್ತಿಯ 9 ಲಕ್ಷ ರೈತರು ನಿತ್ಯ ಹಾಲು ಪ್ರೋತ್ಸಾಹಧನದ ಲಾಭ ಪಡೆಯುತ್ತಿದ್ದಾರೆ. ಪ್ರತಿ ವರ್ಷ ₹1900 ಕೋಟಿಯನ್ನು ರೈತರ ನೇರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಪ್ರತಿ ನಿತ್ಯ ₹2 ಗೆ ಏರಿಕೆಯಾದರೆ ವರ್ಷಕ್ಕೆ ₹730 ಪ್ರೋತ್ಸಾಹಧನ ಏರಿಕೆಯಾಗಲಿದೆ. ಸದ್ಯ ರೈತರಿಗೆ ಪ್ರತಿ ಲೀಟರ್ಗೆ ₹38ವರೆಗೂ ದರ ಸಿಗುತ್ತಿದೆ. </p><p>‘ಈಗಾಗಲೇ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್)ಯಿಂದಲೂ ಪ್ರೋತ್ಸಾಹಧನ ಏರಿಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದಕ್ಕೆ ಪೂರಕವಾಗಿ ಸ್ಪಂದನೆಯೂ ಸಿಕ್ಕಿದೆ’ ಎಂದು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದರು.</p><p>18 ವರ್ಷದ ಹಿಂದೆ ಆರಂಭ: ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದಲೇ 2008ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿ ಲೀಟರ್ ಹಾಲಿಗೆ ₹2 ಪ್ರೋತ್ಸಾಹ ಧನ ನೀಡುವ ಯೋಜನೆಗೆ ಚಾಲನೆ ನೀಡಿದರು.</p><p>2013ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಪ್ರೋತ್ಸಾಹಧನವನ್ನು ₹4 ಗೆ ಏರಿಸಿದರು. 2016ರಲ್ಲಿ ಇದನ್ನು ₹5 ಗೆ ಏರಿಕೆ ಮಾಡಲಾಗಿತ್ತು. ಅಲ್ಲಿಂದ ದರ ಹೆಚ್ಚಿಸುವ ಬೇಡಿಕೆಯಿದ್ದರೂ ಹೆಚ್ಚಳ ಆಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾಲು ಉತ್ಪಾದಕರಿಗೆ ಕರ್ನಾಟಕ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಲೀಟರ್ಗೆ ₹5 ರಿಂದ ₹ 7ಕ್ಕೆ ಏರಿಸುವ ಕುರಿತು ಈ ಬಾರಿಯ ಬಜೆಟ್ನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ.</p><p>ಎರಡು ತಿಂಗಳ ಹಿಂದೆಯೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೋತ್ಸಾಹಧನ ಏರಿಸುವುದಾಗಿ ಘೋಷಿಸಿದ್ದರೂ ಅದು ಜಾರಿಯಾಗಿಲ್ಲ. ಅಧಿಕೃತವಾಗಿ ಬಜೆಟ್ ಮೂಲಕವೇ ಪ್ರಕಟಿಸಿ ಜಾರಿಗೊಳಿಸುವ ಸಾಧ್ಯತೆಯಿದೆ.</p><p>ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಪ್ರತಿನಿತ್ಯ 1 ಕೋಟಿ ಲೀಟರ್ ಹಾಲನ್ನು ಕೆಎಂಎಫ್ ಸಂಗ್ರಹ ಮಾಡುತ್ತಿದೆ. ಪ್ರೋತ್ಸಾಹಧನ ಏರಿಕೆಯಿಂದ ಹಾಲಿನ ಉತ್ಪಾದನೆ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ಗುರಿಯನ್ನು ಮಹಾಮಂಡಳಿ ಇಟ್ಟುಕೊಂಡಿದೆ.</p><p>₹730 ಕೋಟಿ ನೆರವು: ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ ₹3 ಏರಿಕೆ ಮಾಡಿದ್ದೂ ಅಲ್ಲದೇ ₹400 ಸಹಾಯಧನ ಹೆಚ್ಚಳ ಮಾಡಿತ್ತು. ಈ ಮೊತ್ತವನ್ನು ನೇರವಾಗಿ ರೈತರ ಖಾತೆಗೆ ವರ್ಗ ಮಾಡುತ್ತಿದ್ದೇವೆ. ಮೇವಿನ ದರ, ಪಶು ಆಹಾರ ಸಹಿತ ಇತರೆ ಉತ್ಪನ್ನಗಳ ದರ ಏರಿಕೆ ಕಾರಣದಿಂದ ಪ್ರೋತ್ಸಾಹಧನ ಹೆಚ್ಚಿಸುವ ಬೇಡಿಕೆ ಇದೆ. ಈ ಹಿಂದೆ ನಾವೇ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪ್ರೋತ್ಸಾಹಧನ ₹7ಗೆ ಹೆಚ್ಚಳ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದರು.</p><p>ಕರ್ನಾಟಕದಲ್ಲಿ ಸದ್ಯ 16 ಹಾಲು ಒಕ್ಕೂಟಗಳ ವ್ಯಾಪ್ತಿಯ 9 ಲಕ್ಷ ರೈತರು ನಿತ್ಯ ಹಾಲು ಪ್ರೋತ್ಸಾಹಧನದ ಲಾಭ ಪಡೆಯುತ್ತಿದ್ದಾರೆ. ಪ್ರತಿ ವರ್ಷ ₹1900 ಕೋಟಿಯನ್ನು ರೈತರ ನೇರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಪ್ರತಿ ನಿತ್ಯ ₹2 ಗೆ ಏರಿಕೆಯಾದರೆ ವರ್ಷಕ್ಕೆ ₹730 ಪ್ರೋತ್ಸಾಹಧನ ಏರಿಕೆಯಾಗಲಿದೆ. ಸದ್ಯ ರೈತರಿಗೆ ಪ್ರತಿ ಲೀಟರ್ಗೆ ₹38ವರೆಗೂ ದರ ಸಿಗುತ್ತಿದೆ. </p><p>‘ಈಗಾಗಲೇ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್)ಯಿಂದಲೂ ಪ್ರೋತ್ಸಾಹಧನ ಏರಿಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಇದಕ್ಕೆ ಪೂರಕವಾಗಿ ಸ್ಪಂದನೆಯೂ ಸಿಕ್ಕಿದೆ’ ಎಂದು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ತಿಳಿಸಿದರು.</p><p>18 ವರ್ಷದ ಹಿಂದೆ ಆರಂಭ: ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದಲೇ 2008ರಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿ ಲೀಟರ್ ಹಾಲಿಗೆ ₹2 ಪ್ರೋತ್ಸಾಹ ಧನ ನೀಡುವ ಯೋಜನೆಗೆ ಚಾಲನೆ ನೀಡಿದರು.</p><p>2013ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಪ್ರೋತ್ಸಾಹಧನವನ್ನು ₹4 ಗೆ ಏರಿಸಿದರು. 2016ರಲ್ಲಿ ಇದನ್ನು ₹5 ಗೆ ಏರಿಕೆ ಮಾಡಲಾಗಿತ್ತು. ಅಲ್ಲಿಂದ ದರ ಹೆಚ್ಚಿಸುವ ಬೇಡಿಕೆಯಿದ್ದರೂ ಹೆಚ್ಚಳ ಆಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>