<p><strong>ಬೆಂಗಳೂರು: </strong>ಎರಡು ವರ್ಷಗಳ ಹಿಂದೆ ರೆಸಾರ್ಟ್ನಲ್ಲಿ ಪರಸ್ಪರ ಹೊಡೆದಾಡಿಕೊಂಡು ಕೋರ್ಟ್ ಮೆಟ್ಟಿಲೇರಿದ್ದ ವಿಜಯನಗರ ಕ್ಷೇತ್ರದ ಶಾಸಕ, ಸಚಿವ ಆನಂದ ಸಿಂಗ್ ಮತ್ತು ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಮಧ್ಯದ ಪ್ರಕರಣ ಪರಸ್ಪರ ರಾಜಿ ಸಂಧಾನದಲ್ಲಿ ಅಂತ್ಯಗೊಂಡಿದೆ.</p>.<p>ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಕಂಪ್ಲಿ ಗಣೇಶ್ ಸಲ್ಲಿಸಿದ್ದ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪುರಸ್ಕರಿಸಿದೆ.</p>.<p>ಕಂಪ್ಲಿ ಗಣೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ’ಈ ಪ್ರಕರಣದಲ್ಲಿ ಕೊಲೆ (ಕಲಂ 307) ಯತ್ನದ ಉದ್ದೇಶ ಕಂಡು ಬರುತ್ತಿಲ್ಲ. ಇದು ಆ ಕ್ಷಣಕ್ಕೆ ಘಟಿಸಿದ್ದಾಗಿದೆ. ಈ ಕುರಿತ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿ, ಸಾಕ್ಷ್ಯಗಳೂ ಇದನ್ನೇ ದೃಢಪಡಿಸುತ್ತಿವೆ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು‘ ಎಂದು ಕೋರಿದರು.</p>.<p>‘ಕೊಲೆ ಯತ್ನ ಆರೋಪ ಇದ್ದ ಕಾರಣ ರಾಜಿ ಸಂಧಾನ ಸಾಧ್ಯವಾಗಿರಲಿಲ್ಲ. ಇದು ಕೇವಲ ಹಣಕಾಸಿನ ವಿಚಾರವಾಗಿ ನಡೆದಿದ್ದ ಜಗಳವಾಗಿತ್ತು. ಈಗಾಗಲೇ ಆರೋಪಿ ಮತ್ತು ದೂರುದಾರರು ರಾಜಿ ಮಾಡಿಕೊಳ್ಳಲು ಒಪ್ಪಿರುವುದರಿಂದ ಕಲಂ 307 ಅನ್ವಯವಾಗುವುದಿಲ್ಲ‘ ಎಂಬ ಅಂಶಗಳನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.</p>.<p>ಇದನ್ನು ಮನ್ನಿಸಿದ ನ್ಯಾಯಪೀಠ, ಶಾಸಕ ಗಣೇಶ್ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.</p>.<p><strong>ಹಿನ್ನೆಲೆ: </strong>2019 ಜನವರಿ 19ರ ರಾತ್ರಿ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆನಂದ್ ಸಿಂಗ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪೊಲೀಸರು ಗಣೇಶ್ ವಿರುದ್ಧ ಹಲ್ಲೆ ಹಾಗೂ ಕೊಲೆ ಯತ್ನ ಆರೋಪದಡಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಸಂಬಂಧ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಎರಡು ವರ್ಷಗಳ ಹಿಂದೆ ರೆಸಾರ್ಟ್ನಲ್ಲಿ ಪರಸ್ಪರ ಹೊಡೆದಾಡಿಕೊಂಡು ಕೋರ್ಟ್ ಮೆಟ್ಟಿಲೇರಿದ್ದ ವಿಜಯನಗರ ಕ್ಷೇತ್ರದ ಶಾಸಕ, ಸಚಿವ ಆನಂದ ಸಿಂಗ್ ಮತ್ತು ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಮಧ್ಯದ ಪ್ರಕರಣ ಪರಸ್ಪರ ರಾಜಿ ಸಂಧಾನದಲ್ಲಿ ಅಂತ್ಯಗೊಂಡಿದೆ.</p>.<p>ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಕಂಪ್ಲಿ ಗಣೇಶ್ ಸಲ್ಲಿಸಿದ್ದ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪುರಸ್ಕರಿಸಿದೆ.</p>.<p>ಕಂಪ್ಲಿ ಗಣೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ’ಈ ಪ್ರಕರಣದಲ್ಲಿ ಕೊಲೆ (ಕಲಂ 307) ಯತ್ನದ ಉದ್ದೇಶ ಕಂಡು ಬರುತ್ತಿಲ್ಲ. ಇದು ಆ ಕ್ಷಣಕ್ಕೆ ಘಟಿಸಿದ್ದಾಗಿದೆ. ಈ ಕುರಿತ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿ, ಸಾಕ್ಷ್ಯಗಳೂ ಇದನ್ನೇ ದೃಢಪಡಿಸುತ್ತಿವೆ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು‘ ಎಂದು ಕೋರಿದರು.</p>.<p>‘ಕೊಲೆ ಯತ್ನ ಆರೋಪ ಇದ್ದ ಕಾರಣ ರಾಜಿ ಸಂಧಾನ ಸಾಧ್ಯವಾಗಿರಲಿಲ್ಲ. ಇದು ಕೇವಲ ಹಣಕಾಸಿನ ವಿಚಾರವಾಗಿ ನಡೆದಿದ್ದ ಜಗಳವಾಗಿತ್ತು. ಈಗಾಗಲೇ ಆರೋಪಿ ಮತ್ತು ದೂರುದಾರರು ರಾಜಿ ಮಾಡಿಕೊಳ್ಳಲು ಒಪ್ಪಿರುವುದರಿಂದ ಕಲಂ 307 ಅನ್ವಯವಾಗುವುದಿಲ್ಲ‘ ಎಂಬ ಅಂಶಗಳನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.</p>.<p>ಇದನ್ನು ಮನ್ನಿಸಿದ ನ್ಯಾಯಪೀಠ, ಶಾಸಕ ಗಣೇಶ್ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ.</p>.<p><strong>ಹಿನ್ನೆಲೆ: </strong>2019 ಜನವರಿ 19ರ ರಾತ್ರಿ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆನಂದ್ ಸಿಂಗ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪೊಲೀಸರು ಗಣೇಶ್ ವಿರುದ್ಧ ಹಲ್ಲೆ ಹಾಗೂ ಕೊಲೆ ಯತ್ನ ಆರೋಪದಡಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಸಂಬಂಧ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>