ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ವಾಲ್ಮೀಕಿ ನಿಗಮ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ

Published : 6 ಜೂನ್ 2024, 10:19 IST
Last Updated : 7 ಜೂನ್ 2024, 0:13 IST
ಫಾಲೋ ಮಾಡಿ
Comments
ಭ್ರಷ್ಟ ಸಚಿವ ನಾಗೇಂದ್ರ ಅವರನ್ನು ರಕ್ಷಣೆ ಮಾಡುವ ಭಂಡತನ ಪ್ರದರ್ಶಿಸಿದ್ದ ಸಿ.ಎಂ, ಡಿ.ಸಿ.ಎಂ, ಒತ್ತಡಕ್ಕೆ ಮಣಿದು ವಿಧಿ ಇಲ್ಲದೇ ರಾಜೀನಾಮೆ ಪಡೆದಿದ್ದಾರೆ
ಆರ್‌.ಅಶೋಕ, ವಿಧಾನಸಭೆ ವಿರೋಧ ಪಕ್ಷದ ನಾಯಕ
ಸಿಬಿಐ ಸೇರಿದಂತೆ ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದು ನಾಗೇಂದ್ರ ಹೇಳಿದ್ದಾರೆ. ರಾಜೀನಾಮೆ ನೀಡುವಂತೆ ನಾವು ಅವರಿಗೆ ಹೇಳಿರಲಿಲ್ಲ
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಕಳೆದ ಮಾರ್ಚ್ ತಿಂಗಳಲ್ಲೆ ಹಗರಣ ನಡೆದಿದೆ. ಸಿ.ಎಂ, ಡಿ.ಸಿ.ಎಂ ಸೇರಿ ಇದನ್ನು ಮುಚ್ಚಿಟ್ಟಿದ್ದಾರೆ.  ಈಗ ಹೊರಬರದೇ ಇದ್ದಿದ್ದರೆ ಮುಚ್ಚಿ ಹಾಕುತ್ತಿದ್ದರು
ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ
ಏನಿದು ಹಣ ವರ್ಗಾವಣೆ ಪ್ರಕರಣ?
ವಾಲ್ಮೀಕಿ ಅಭಿವೃದ್ಧಿ ನಿಗಮದ ₹94.73 ಕೋಟಿ ಹಣವನ್ನು ನಕಲಿ ದಾಖಲೆ ಸೃಷ್ಟಿಸಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವ ಆರೋಪದ ಮೇಲೆ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಸಿಇಒ ಸೇರಿದಂತೆ ಬ್ಯಾಂಕಿನ ಆರು ಮಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಮೇ 29ರಂದು ಪ್ರಕರಣ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವಹಿಸಿತ್ತು. ಪ್ರಕರಣ ದಲ್ಲಿ ಭಾಗಿಯಾದ ಆರೋಪದಲ್ಲಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಜೆ.ಜಿ. ಪದ್ಮನಾಭ್ ಮತ್ತು ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್ ಜಿ. ದುರ್ಗಣ್ಣನವರ ಅವರನ್ನು ಎಸ್‌ಐಟಿ ಬಂಧಿಸಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿಯ(ಎಫ್‌ಎಫ್‌ಸಿಸಿಎಸ್‌ಎಲ್‌) 18 ಖಾತೆಗಳಿಗೆ ₹94.73 ಕೋಟಿ ಜಮೆ ಆಗಿರುವ ಸಂಗತಿಯನ್ನು ಎಸ್‌ಐಟಿ ಪತ್ತೆ ಹಚ್ಚಿದೆ. ಹೀಗಾಗಿ, ಎಫ್‌ಎಫ್‌ಸಿಸಿಎಸ್‌ಎಲ್‌ ಅಧ್ಯಕ್ಷ ಸತ್ಯನಾರಾಯಣ್ ಅವರನ್ನು ಎಸ್‌ಐಟಿ ಬಂಧಿಸಿದೆ. ಲಭ್ಯ ಸಾಕ್ಷ್ಯಾಧಾರಗಳನ್ನು ಆಧರಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಸಚಿವ ನಾಗೇಂದ್ರ ಅವರ ಆಪ್ತರು ಎನ್ನಲಾದ ನೆಕ್ಕಂಟಿ ನಾಗರಾಜ್ ಹಾಗೂ ಅವರ ಬಾಮೈದ ನಾಗೇಶ್ವರರಾವ್ ಅವರನ್ನು ಬಂಧಿಸಲಾಗಿದೆ. ‘ನೆಕ್ಕಂಟಿ ನಾಗರಾಜ್, ಈ ಮೊದಲು ಮಾಜಿ ಸಚಿವ, ಬಿಜೆಪಿಯ ಬಿ. ಶ್ರೀರಾಮುಲು ಜೊತೆ ಗುರುತಿಸಿಕೊಂಡಿದ್ದ’ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT