ರಾಜಕೀಯದಲ್ಲಿ ಅವರಷ್ಟೇ ಸರ್ವೀಸ್ ಆಗಿದೆ. ಅವರು ಮಾಡಿಕೊಂಡ ಆಸ್ತಿ ಗಳ ಬಗ್ಗೆ ನನಗೂ ಮಾಹಿತಿ ಇದೆ. ಯಾರದ್ದೋ ಮಾತು ಕೇಳಿಕೊಂಡು ನನ್ನ ಮೇಲೆ ಪರ್ಸಂಟೇಜ್ ಆರೋಪ ಮಾಡಿದ್ದಾರೆ. ನಾನು ಸಿದ್ದಗಂಗಾ ಮತ್ತು ಆದಿಚುಂಚನಗಿರಿ ಶ್ರೀಗಳ ಹೆಸರಿನಲ್ಲಿ ರಾಜಕೀಯ ಮಾಡಿದವನು. ಎಲ್ಲಿ ಯಾರ ಬಗ್ಗೆಯೂ ಏಕವಚನದಲ್ಲಿ ಮಾತನಾಡಿಲ್ಲ, ಆದರೆ ಹಿರಿಯರು- ಕಿರಿಯರು ಎಂಬ ವ್ಯತ್ಯಾಸ ಇಲ್ಲದೆ, ಎಲ್ಲರಿಗೂ ಏಕವಚನದಲ್ಲಿ ಮಾತನಾಡುವ ಸಿದ್ದರಾಮಯ್ಯಗೆ ಗೌರವ ತರುತ್ತದೆಯೇ ಎಂದು ಸೋಮಣ್ಣ ಪ್ರಶ್ನಿಸಿದರು.