ವಿಧಾನಸಭೆಯ ಬಲಾಬಲದ ಪ್ರಕಾರ, ಮೊದಲ 11 ಸ್ಥಾನಗಳಲ್ಲಿ ಏಳು ಕಾಂಗ್ರೆಸ್ ಪಾಲಾಗಲಿವೆ. ಬಿಜೆಪಿಗೆ ಮೂರು, ಜೆಡಿಎಸ್ಗೆ ಒಂದು ಸ್ಥಾನ ದೊರಕಲಿವೆ.
ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಕಾಂಗ್ರೆಸ್ಗೆ ಜಿಗಿದಿದ್ದ ಕೆ.ಪಿ.ನಂಜುಂಡಿ ಅವರಿಗೆ ನಿರಾಸೆಯಾಗಿದೆ.
ಎರಡನೇ ಬಾರಿ ಕೆಪಿಸಿಸಿ ಖಜಾಂಚಿಯಾಗಿರುವ ವಿನಯ್ ಕಾರ್ತಿಕ್, ಡಿ.ಕೆ.ಶಿವಕುಮಾರ್ ಆಪ್ತ, ಕೆಪಿಸಿಸಿ ಆಡಳಿತ ವಿಭಾಗದ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳುಗುಂದ್, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಡಿ. ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ, ಕೆಪಿಸಿಸಿ ಸಾಮಾಜಿಕ ನ್ಯಾಯ ಘಟಕದ ಅಧ್ಯಕ್ಷರಾದ ಸಿ.ಎಸ್. ದ್ವಾರಕಾನಾಥ್ ಅವರಿಗೂ ಕಾಂಗ್ರೆಸ್ ಪಟ್ಟಿಯಿಂದ ನಿರಾಸೆಯಾಗಿದೆ. 70 ಕ್ಕೂ ಹೆಚ್ಚು ಜನ ಕಾಂಗ್ರೆಸ್ನಿಂದ ಟಿಕೆಟ್ ಆಕಾಂಕ್ಷಿಗಳಿದ್ದರು.