<p><strong>ಬೆಂಗಳೂರು</strong>: ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ<br>ವಾಗುವ ಸಾಧ್ಯತೆ ಇದೆ.</p>. <p>ಬೆಂಗಳೂರು ಪ್ರೆಸ್ಕ್ಲಬ್ ಸೋಮವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಈ ಮಾಹಿತಿ ನೀಡಿದರು.</p>. <p>‘ಕರ್ನಾಟಕದ ಬೇಡಿಕೆಗೆ ಅನುಗುಣ ವಾಗಿ ಕೇಂದ್ರ ಸರ್ಕಾರವು ಯೂರಿಯಾ ಮತ್ತು ಡಿಎಪಿ ರಸಗೊಬ್ಬರ ಸರಬರಾಜು ಮಾಡಿಲ್ಲ. ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಬಳಸುವಂತೆ ಕೇಂದ್ರ ಸೂಚನೆ ನೀಡಿದೆ. ಹೀಗಾಗಿ ರಸಗೊಬ್ಬರ ಕೊರತೆಯಾಗಲಿದೆ’ ಎಂದೂ ಹೇಳಿದರು.</p>. <p>ಏಪ್ರಿಲ್ ತಿಂಗಳಿನಿಂದ ಈವರೆಗೆ 8.57 ಲಕ್ಷ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, 4.31 ಲಕ್ಷ ಟನ್ ಸರಬರಾಜು ಮಾಡಲಾಗಿದೆ ಎಂದೂ ಅವರು ತಿಳಿಸಿದರು.</p>. <p>ರೈತರ ಅನುಕೂಲಕ್ಕಾಗಿ ಕೃತಕ ಬುದ್ಧಿಮತ್ತೆ (ಎ.ಐ) ಬಳಸಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ಸಹಾಯವಾಣಿ ನಂಬರ್ಗೆ ಕರೆ ಮಾಡಿದರೆ ಮಾರುಕಟ್ಟೆ ಪರಿಸ್ಥಿತಿ, ಕೃಷಿ ಉತ್ಪನ್ನಗಳ ದರ ಸೇರಿದಂತೆ ಎಲ್ಲ ವಿವರಗಳ ಎಸ್ಎಂಎಸ್ ಸಂದೇಶ ಮತ್ತು ಧ್ವನಿ ಸಂದೇಶ ಒದಗಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ಮೊದಲ ವಾರ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದರು.</p>. <p>ಕೃಷಿ ಇಲಾಖೆಯಲ್ಲಿ ಮೂರು ವರ್ಷದಲ್ಲಿ ಜಾರಿಗೆ ತಂದಿರುವ ಕಾರ್ಯಕ್ರಮಗಳು, ಹೊಸ ಯೋಜನೆಗಳ ಬಗ್ಗೆ ಅಂಕಿ ಅಂಶ ಸಮೇತ ಮಾಹಿತಿ ನೀಡಿದರು. </p>.<p>ಲಕ್ಷಾಂತರ ರೈತರಿಗೆ ರಿಯಾಯಿತಿ ದರದಲ್ಲಿ ಬೀಜ, ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ‘ಡಿಜಿಟಲ್ ಕೃಷಿ’ ಮೂಲಕ ರೈತರ ಉತ್ಪಾದನಾ ವೆಚ್ಚ ತಗ್ಗಿಸಿ ಆದಾಯ ದುಪ್ಪಟ್ಟುಗೊಳಿಸಲು ಶ್ರಮಿಸಲಾಗುವುದು. ರೈತರ ಆತ್ಮಹತ್ಯೆ ತಡೆಗೂ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. </p>.<p>‘ವೈಜ್ಞಾನಿಕ ಮತ್ತು ಸಾವಯವ ಕೃಷಿ ಮಾಡುತ್ತಿರುವ ಯಾವ ರೈತರೂ ಆರ್ಥಿಕ ತೊಂದರೆಗೆ ಸಿಲುಕಿಲ್ಲ. ಇಂತಹ ಪ್ರಗತಿಪರ ರೈತರು ಪ್ರತಿ ಹಳ್ಳಿಯಲ್ಲೂ ಹೆಚ್ಚಾಗಬೇಕಿದೆ. ಕೃಷಿಯಲ್ಲಿನ ಇಂತಹ ಪದ್ಧತಿಗಳನ್ನು ಪ್ರತಿ ರೈತ ಕಲಿತು ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕೃಷಿ ಇಲಾಖೆ ನಿರ್ದೇಶಕ ಜಿ.ಟಿ.ಪುತ್ರ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ.ಸುರೇಶ್, ಪ್ರೆಸ್ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಉಪಸ್ಥಿತರಿದ್ದರು.</p>.<div><blockquote>ಕೃಷಿಯನ್ನು ಕೇವಲ ಬದುಕಿನ ಅನಿವಾರ್ಯವನ್ನಾಗಿಸದೆ ಗೌರವಯುತ ಮತ್ತು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿ</blockquote><span class="attribution">ಎನ್.ಚಲುವರಾಯಸ್ವಾಮಿ ಕೃಷಿ ಸಚಿವ</span></div>.<h2>ಪರ್ಯಾಯ, ಪರಿಹಾರವೇನು?</h2><p>‘ನೀರಿನಲ್ಲಿ ಶೇಕಡ 100ರಷ್ಟು ಕರಗುವ ಗೊಬ್ಬರ, ಲಘು ಪೋಷಕಾಂಶಗಳು, ನ್ಯಾನೊ ಯೂರಿಯಾ, ನ್ಯಾನೊ ಡಿಪಿಎ ಹಾಗೂ ಸಾವಯವ ಗೊಬ್ಬರ ಬಳಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮಣ್ಣು ಪರೀಕ್ಷೆ ಆಧಾರದ ಮೇರೆಗೆ ಅಗತ್ಯವಿರುವ ಹಾಗೂ ಶಿಫಾರಸು ಮಾಡಿದ ಪ್ರಮಾಣದಲ್ಲಿ ಮಾತ್ರ ಬಳಕೆ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದು ಚಲುವರಾಯಸ್ವಾಮಿ ವಿವರಿಸಿದರು.</p><p>‘ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಪರ್ಯಾಯ ಗೊಬ್ಬರ ಬಳಸುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಸೂಚಿಸಲಾಗಿದೆ ಎಂದರು.</p><p>‘ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿ, ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ, ಅವಶ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಾರಾಟ, ಕೃಷಿಯೇತರ ಚಟುವಟಿಕೆಗಳಿಗೆ ಯೂರಿಯಾ ರಸಗೊಬ್ಬರ ಮಾರಾಟ ಮಾಡದಂತೆ ಮಾರಾಟಗಾರರಿಗೆ ಮನವರಿಕೆ ಮಾಡಲಾಗಿದೆ. ರೈತರಲ್ಲದವರು ಯೂರಿಯಾ ರಸಗೊಬ್ಬರ ಖರೀದಿ ನಿಯಂತ್ರಿಸಲು ‘ಯೂರಿಯಾ ಡಿಸ್ಟ್ರಿಬೂಷನ್ ಆ್ಯಪ್’ ಅಭಿವೃದ್ಧಿಪಡಿಸಿ ವಿತರಣೆಗೆ ಕ್ರಮ ವಹಿಸಲಾಗಿದೆ. ಕೊರತೆ ನೀಗಿಸಲು ಪ್ರಸ್ತುತ ವಿವಿಧ ಗ್ರೇಡ್ನ 56,199 ಮೆಟ್ರಿಕ್ ಟನ್ ರಸಗೊಬ್ಬರ ಕಾಪು ದಾಸ್ತಾನು ಇದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ<br>ವಾಗುವ ಸಾಧ್ಯತೆ ಇದೆ.</p>. <p>ಬೆಂಗಳೂರು ಪ್ರೆಸ್ಕ್ಲಬ್ ಸೋಮವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಈ ಮಾಹಿತಿ ನೀಡಿದರು.</p>. <p>‘ಕರ್ನಾಟಕದ ಬೇಡಿಕೆಗೆ ಅನುಗುಣ ವಾಗಿ ಕೇಂದ್ರ ಸರ್ಕಾರವು ಯೂರಿಯಾ ಮತ್ತು ಡಿಎಪಿ ರಸಗೊಬ್ಬರ ಸರಬರಾಜು ಮಾಡಿಲ್ಲ. ಕಡಿಮೆ ಪ್ರಮಾಣದಲ್ಲಿ ರಸಗೊಬ್ಬರ ಬಳಸುವಂತೆ ಕೇಂದ್ರ ಸೂಚನೆ ನೀಡಿದೆ. ಹೀಗಾಗಿ ರಸಗೊಬ್ಬರ ಕೊರತೆಯಾಗಲಿದೆ’ ಎಂದೂ ಹೇಳಿದರು.</p>. <p>ಏಪ್ರಿಲ್ ತಿಂಗಳಿನಿಂದ ಈವರೆಗೆ 8.57 ಲಕ್ಷ ಟನ್ ರಸಗೊಬ್ಬರಕ್ಕೆ ಬೇಡಿಕೆ ಇದ್ದು, 4.31 ಲಕ್ಷ ಟನ್ ಸರಬರಾಜು ಮಾಡಲಾಗಿದೆ ಎಂದೂ ಅವರು ತಿಳಿಸಿದರು.</p>. <p>ರೈತರ ಅನುಕೂಲಕ್ಕಾಗಿ ಕೃತಕ ಬುದ್ಧಿಮತ್ತೆ (ಎ.ಐ) ಬಳಸಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ಸಹಾಯವಾಣಿ ನಂಬರ್ಗೆ ಕರೆ ಮಾಡಿದರೆ ಮಾರುಕಟ್ಟೆ ಪರಿಸ್ಥಿತಿ, ಕೃಷಿ ಉತ್ಪನ್ನಗಳ ದರ ಸೇರಿದಂತೆ ಎಲ್ಲ ವಿವರಗಳ ಎಸ್ಎಂಎಸ್ ಸಂದೇಶ ಮತ್ತು ಧ್ವನಿ ಸಂದೇಶ ಒದಗಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ಮೊದಲ ವಾರ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದರು.</p>. <p>ಕೃಷಿ ಇಲಾಖೆಯಲ್ಲಿ ಮೂರು ವರ್ಷದಲ್ಲಿ ಜಾರಿಗೆ ತಂದಿರುವ ಕಾರ್ಯಕ್ರಮಗಳು, ಹೊಸ ಯೋಜನೆಗಳ ಬಗ್ಗೆ ಅಂಕಿ ಅಂಶ ಸಮೇತ ಮಾಹಿತಿ ನೀಡಿದರು. </p>.<p>ಲಕ್ಷಾಂತರ ರೈತರಿಗೆ ರಿಯಾಯಿತಿ ದರದಲ್ಲಿ ಬೀಜ, ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ‘ಡಿಜಿಟಲ್ ಕೃಷಿ’ ಮೂಲಕ ರೈತರ ಉತ್ಪಾದನಾ ವೆಚ್ಚ ತಗ್ಗಿಸಿ ಆದಾಯ ದುಪ್ಪಟ್ಟುಗೊಳಿಸಲು ಶ್ರಮಿಸಲಾಗುವುದು. ರೈತರ ಆತ್ಮಹತ್ಯೆ ತಡೆಗೂ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. </p>.<p>‘ವೈಜ್ಞಾನಿಕ ಮತ್ತು ಸಾವಯವ ಕೃಷಿ ಮಾಡುತ್ತಿರುವ ಯಾವ ರೈತರೂ ಆರ್ಥಿಕ ತೊಂದರೆಗೆ ಸಿಲುಕಿಲ್ಲ. ಇಂತಹ ಪ್ರಗತಿಪರ ರೈತರು ಪ್ರತಿ ಹಳ್ಳಿಯಲ್ಲೂ ಹೆಚ್ಚಾಗಬೇಕಿದೆ. ಕೃಷಿಯಲ್ಲಿನ ಇಂತಹ ಪದ್ಧತಿಗಳನ್ನು ಪ್ರತಿ ರೈತ ಕಲಿತು ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕೃಷಿ ಇಲಾಖೆ ನಿರ್ದೇಶಕ ಜಿ.ಟಿ.ಪುತ್ರ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ.ಸುರೇಶ್, ಪ್ರೆಸ್ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ ಉಪಸ್ಥಿತರಿದ್ದರು.</p>.<div><blockquote>ಕೃಷಿಯನ್ನು ಕೇವಲ ಬದುಕಿನ ಅನಿವಾರ್ಯವನ್ನಾಗಿಸದೆ ಗೌರವಯುತ ಮತ್ತು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿ</blockquote><span class="attribution">ಎನ್.ಚಲುವರಾಯಸ್ವಾಮಿ ಕೃಷಿ ಸಚಿವ</span></div>.<h2>ಪರ್ಯಾಯ, ಪರಿಹಾರವೇನು?</h2><p>‘ನೀರಿನಲ್ಲಿ ಶೇಕಡ 100ರಷ್ಟು ಕರಗುವ ಗೊಬ್ಬರ, ಲಘು ಪೋಷಕಾಂಶಗಳು, ನ್ಯಾನೊ ಯೂರಿಯಾ, ನ್ಯಾನೊ ಡಿಪಿಎ ಹಾಗೂ ಸಾವಯವ ಗೊಬ್ಬರ ಬಳಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಮಣ್ಣು ಪರೀಕ್ಷೆ ಆಧಾರದ ಮೇರೆಗೆ ಅಗತ್ಯವಿರುವ ಹಾಗೂ ಶಿಫಾರಸು ಮಾಡಿದ ಪ್ರಮಾಣದಲ್ಲಿ ಮಾತ್ರ ಬಳಕೆ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ’ ಎಂದು ಚಲುವರಾಯಸ್ವಾಮಿ ವಿವರಿಸಿದರು.</p><p>‘ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಪರ್ಯಾಯ ಗೊಬ್ಬರ ಬಳಸುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಸೂಚಿಸಲಾಗಿದೆ ಎಂದರು.</p><p>‘ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿ, ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ, ಅವಶ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಾರಾಟ, ಕೃಷಿಯೇತರ ಚಟುವಟಿಕೆಗಳಿಗೆ ಯೂರಿಯಾ ರಸಗೊಬ್ಬರ ಮಾರಾಟ ಮಾಡದಂತೆ ಮಾರಾಟಗಾರರಿಗೆ ಮನವರಿಕೆ ಮಾಡಲಾಗಿದೆ. ರೈತರಲ್ಲದವರು ಯೂರಿಯಾ ರಸಗೊಬ್ಬರ ಖರೀದಿ ನಿಯಂತ್ರಿಸಲು ‘ಯೂರಿಯಾ ಡಿಸ್ಟ್ರಿಬೂಷನ್ ಆ್ಯಪ್’ ಅಭಿವೃದ್ಧಿಪಡಿಸಿ ವಿತರಣೆಗೆ ಕ್ರಮ ವಹಿಸಲಾಗಿದೆ. ಕೊರತೆ ನೀಗಿಸಲು ಪ್ರಸ್ತುತ ವಿವಿಧ ಗ್ರೇಡ್ನ 56,199 ಮೆಟ್ರಿಕ್ ಟನ್ ರಸಗೊಬ್ಬರ ಕಾಪು ದಾಸ್ತಾನು ಇದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>