<p><strong>ಬೆಳಗಾವಿ:</strong> 'ರಾಜ್ಯ ಸರ್ಕಾರ ಈಗ ಕುಂಭಕರ್ಣ ನಿದ್ರೆಯಲ್ಲಿದೆ. ಇದಕ್ಕೆ ಮಳೆ ಬರುವುದು ಗೊತ್ತಾಗುವುದಿಲ್ಲ. ಬರ ಪರಿಸ್ಥಿತಿ ಅರಿವು ಇಲ್ಲ. ಜನರ ಕಷ್ಟ ಅರಿಯದ ದುಷ್ಟ ಸರ್ಕಾರ ಇದು' ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಲೇವಡಿ ಮಾಡಿದರು.</p>.ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿ.ಎಂ, ವರ್ಷಾಂತ್ಯದಲ್ಲಿ ಕ್ರಾಂತಿ ನಿಶ್ಚಿತ: ಅಶೋಕ.<p>ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನೆರೆ ಮತ್ತು ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರು ದಸರಾ ಆಚರಿಸಲಾಗದೆ ಬೀದಿಗೆ ಬಂದಿದ್ದಾರೆ. ಆದರೆ, ಸರ್ಕಾರಕ್ಕೆ ಸಂತ್ರಸ್ತರ ಸಂಕಷ್ಟಕ್ಕಿಂತ, ಜಾತಿ ಒಂದೇ ಬೇಕಾಗಿದೆ' ಎಂದು ದೂರಿದರು.</p><p>'ರಾಜ್ಯ ಸರ್ಕಾರ ಈಗ ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಈಗ ಬೆಂಕಿ ಸಿದ್ದರಾಮಯ್ಯ ಆಗಿದ್ದಾರೆ' ಎಂದು ಆರೋಪಿಸಿದರು.</p>.ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲ: ಅಶೋಕ.<p>'ಮಲೆನಾಡು ಭಾಗದಲ್ಲಿ ಕಳೆದೊಂದು ತಿಂಗಳಿನಿಂದ ಗುಡ್ಡ ಕುಸಿತವಾಗಿದೆ. ರಸ್ತೆಗಳೆಲ್ಲ ಹಾಳಾಗಿವೆ. ನೆರೆ ಹಾನಿ ಪರಿಶೀಲನೆಗೆ ಬಿಜೆಪಿಯವರು ಪ್ರವಾಸ ಘೋಷಿಸಿದ ನಂತರ ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದಾರೆ. ಕೇಂದ್ರ ಸರ್ಕಾರ ನೆರವಿಗೆ ಬರಬೇಕು ಎಂಬ ಮಾಮೂಲಿ ಡೈಲಾಗ್ ಹೊಡೆಯುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.</p>.ರಾಜ್ಯ ಕಾಂಗ್ರೆಸ್ ಸರ್ಕಾರ ಶೇ 80 ರಷ್ಟು ಕಮಿಷನ್ ಪಡೆಯುತ್ತಿದೆ: ಅಶೋಕ ಕಿಡಿ.<p>'ಕಳೆದ 20 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಕೆಲಸ ಮಾಡಿದ್ದಾರೆ. ನೀವು ಮಳೆ ಹಾನಿ ವರದಿ ಪಡೆದು ಕೇಂದ್ರಕ್ಕೆ ಕಳುಹಿಸಬೇಕು. ಆದರೆ, ಅವರಿಗೆ ಈ ಮಾಹಿತಿಯೇ ಇಲ್ಲ. ಯಾವ ಸಚಿವರೂ ನಮ್ಮಂತೆ ತಂಡ ರಚಿಸಿಕೊಂಡು ಹಾನಿ ಅವೀಕ್ಷಿಸಲು ಹೋಗಿಲ್ಲ' ಎಂದು ಆರೋಪಿಸಿದರು.</p><p>'ಸಿ.ಎಂ ಸಭೆ ಕರೆದು, ಮಳೆಯಿಂದ ಆಗಿರುವ ಹಾನಿ ಪರಿಶೀಲನೆ, ಪರಿಹಾರ ವಿತರಣೆ ಟಾಸ್ಕ್ ಅನ್ನು ಸಚಿವರಿಗೆ ಕೊಡಬೇಕಿತ್ತು. ಆಗ ಈ ಅನಾಹುತ ಆಗುತ್ತಿರಲಿಲ್ಲ' ಎಂದು ಹೇಳಿದರು.</p>.ಜಾತಿವಾರು ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು: ಆರ್. ಅಶೋಕ.<p>'ನಾನು ಎಷ್ಟುದಿನ ಮುಖ್ಯಮಂತ್ರಿ ಎಂಬುದನ್ನೇ ಸಿದ್ದರಾಮಯ್ಯ ಹೇಳುತ್ತಿದ್ದಾರೆಯೇ ಹೊರತು, ಮಳೆ ಹಾನಿ ಪ್ರಮಾಣ ಹೇಳುತ್ತಿಲ್ಲ. ಮನೆ ಬಿದ್ದ ಬಗ್ಗೆ ಮಾತನಾಡುತ್ತಿಲ್ಲ. ಬೆಳೆ ಹಾನಿ ಬಗ್ಗೆ ಅಂಕಿ -ಸಂಖ್ಯೆಯೂ ಇಲ್ಲ' ಎಂದು ಲೇವಡಿ ಮಾಡಿದರು.</p> .ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಜ್ಞಾನ ಇಲ್ಲ, ಬರೆದುಕೊಟ್ಟದ್ದು ಹೇಳ್ತಾರೆ: ಅಶೋಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ರಾಜ್ಯ ಸರ್ಕಾರ ಈಗ ಕುಂಭಕರ್ಣ ನಿದ್ರೆಯಲ್ಲಿದೆ. ಇದಕ್ಕೆ ಮಳೆ ಬರುವುದು ಗೊತ್ತಾಗುವುದಿಲ್ಲ. ಬರ ಪರಿಸ್ಥಿತಿ ಅರಿವು ಇಲ್ಲ. ಜನರ ಕಷ್ಟ ಅರಿಯದ ದುಷ್ಟ ಸರ್ಕಾರ ಇದು' ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಲೇವಡಿ ಮಾಡಿದರು.</p>.ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿ.ಎಂ, ವರ್ಷಾಂತ್ಯದಲ್ಲಿ ಕ್ರಾಂತಿ ನಿಶ್ಚಿತ: ಅಶೋಕ.<p>ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನೆರೆ ಮತ್ತು ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರು ದಸರಾ ಆಚರಿಸಲಾಗದೆ ಬೀದಿಗೆ ಬಂದಿದ್ದಾರೆ. ಆದರೆ, ಸರ್ಕಾರಕ್ಕೆ ಸಂತ್ರಸ್ತರ ಸಂಕಷ್ಟಕ್ಕಿಂತ, ಜಾತಿ ಒಂದೇ ಬೇಕಾಗಿದೆ' ಎಂದು ದೂರಿದರು.</p><p>'ರಾಜ್ಯ ಸರ್ಕಾರ ಈಗ ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಈಗ ಬೆಂಕಿ ಸಿದ್ದರಾಮಯ್ಯ ಆಗಿದ್ದಾರೆ' ಎಂದು ಆರೋಪಿಸಿದರು.</p>.ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲ: ಅಶೋಕ.<p>'ಮಲೆನಾಡು ಭಾಗದಲ್ಲಿ ಕಳೆದೊಂದು ತಿಂಗಳಿನಿಂದ ಗುಡ್ಡ ಕುಸಿತವಾಗಿದೆ. ರಸ್ತೆಗಳೆಲ್ಲ ಹಾಳಾಗಿವೆ. ನೆರೆ ಹಾನಿ ಪರಿಶೀಲನೆಗೆ ಬಿಜೆಪಿಯವರು ಪ್ರವಾಸ ಘೋಷಿಸಿದ ನಂತರ ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದಾರೆ. ಕೇಂದ್ರ ಸರ್ಕಾರ ನೆರವಿಗೆ ಬರಬೇಕು ಎಂಬ ಮಾಮೂಲಿ ಡೈಲಾಗ್ ಹೊಡೆಯುತ್ತಿದ್ದಾರೆ' ಎಂದು ವ್ಯಂಗ್ಯವಾಡಿದರು.</p>.ರಾಜ್ಯ ಕಾಂಗ್ರೆಸ್ ಸರ್ಕಾರ ಶೇ 80 ರಷ್ಟು ಕಮಿಷನ್ ಪಡೆಯುತ್ತಿದೆ: ಅಶೋಕ ಕಿಡಿ.<p>'ಕಳೆದ 20 ವರ್ಷಗಳಿಂದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಕೆಲಸ ಮಾಡಿದ್ದಾರೆ. ನೀವು ಮಳೆ ಹಾನಿ ವರದಿ ಪಡೆದು ಕೇಂದ್ರಕ್ಕೆ ಕಳುಹಿಸಬೇಕು. ಆದರೆ, ಅವರಿಗೆ ಈ ಮಾಹಿತಿಯೇ ಇಲ್ಲ. ಯಾವ ಸಚಿವರೂ ನಮ್ಮಂತೆ ತಂಡ ರಚಿಸಿಕೊಂಡು ಹಾನಿ ಅವೀಕ್ಷಿಸಲು ಹೋಗಿಲ್ಲ' ಎಂದು ಆರೋಪಿಸಿದರು.</p><p>'ಸಿ.ಎಂ ಸಭೆ ಕರೆದು, ಮಳೆಯಿಂದ ಆಗಿರುವ ಹಾನಿ ಪರಿಶೀಲನೆ, ಪರಿಹಾರ ವಿತರಣೆ ಟಾಸ್ಕ್ ಅನ್ನು ಸಚಿವರಿಗೆ ಕೊಡಬೇಕಿತ್ತು. ಆಗ ಈ ಅನಾಹುತ ಆಗುತ್ತಿರಲಿಲ್ಲ' ಎಂದು ಹೇಳಿದರು.</p>.ಜಾತಿವಾರು ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು: ಆರ್. ಅಶೋಕ.<p>'ನಾನು ಎಷ್ಟುದಿನ ಮುಖ್ಯಮಂತ್ರಿ ಎಂಬುದನ್ನೇ ಸಿದ್ದರಾಮಯ್ಯ ಹೇಳುತ್ತಿದ್ದಾರೆಯೇ ಹೊರತು, ಮಳೆ ಹಾನಿ ಪ್ರಮಾಣ ಹೇಳುತ್ತಿಲ್ಲ. ಮನೆ ಬಿದ್ದ ಬಗ್ಗೆ ಮಾತನಾಡುತ್ತಿಲ್ಲ. ಬೆಳೆ ಹಾನಿ ಬಗ್ಗೆ ಅಂಕಿ -ಸಂಖ್ಯೆಯೂ ಇಲ್ಲ' ಎಂದು ಲೇವಡಿ ಮಾಡಿದರು.</p> .ರಾಹುಲ್ ಗಾಂಧಿ ಅವರಿಗೆ ಸಾಮಾನ್ಯ ಜ್ಞಾನ ಇಲ್ಲ, ಬರೆದುಕೊಟ್ಟದ್ದು ಹೇಳ್ತಾರೆ: ಅಶೋಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>