<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಮಳೆಯ ಅಬ್ಬರ ಕೊಂಚ ತಗ್ಗಿದೆ. ಪ್ರವಾಹ ಇಳಿದಿಲ್ಲ. ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳ ಪ್ರವಾಹದಿಂದ 52 ಪ್ರದೇಶಗಳು ಮುಳುಗಡೆ ಸ್ಥಿತಿಯಲ್ಲಿವೆ.</p>.<p>ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲೂ ಮಳೆ ರಭಸ ಕಡಿಮೆಯಾಗಿದೆ. ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ ಸ್ಥಿತಿಯಲ್ಲಿದೆ. ಮಳೆ ಇಳಿಮುಖವಾದರೆ, ನೀರು ತಗ್ಗುವ ಸಾಧ್ಯತೆಯಿದೆ. ಕುಶಾಲನಗರದ ಸಾಯಿ ಹಾಗೂ ಕುವೆಂಪು ಬಡಾವಣೆಗಳೂ ಜಲಾವೃತ ಸ್ಥಿತಿಯಲ್ಲಿವೆ.</p>.<p><strong>ಶೋಧ ಕಾರ್ಯ: </strong>ತಲಕಾವೇರಿ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿತದಿಂದ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಮಣ್ಣಿನ ಅಡಿ ಸಿಲುಕಿರುವ ಶಂಕೆಯಿದ್ದು, ಶನಿವಾರ ಶೋಧ ಕಾರ್ಯ ಆರಂಭವಾಗುವ ಸಾಧ್ಯತೆಯಿದೆ. ಕಳೆದ ಎರಡು ದಿನಗಳಿಂದ ಪ್ರತಿಕೂಲ ಹವಾಮಾನದಿಂದ ಶೋಧ ಕಾರ್ಯ ಸಾಧ್ಯವಾಗಿರಲಿಲ್ಲ.</p>.<p>ಕೊಡಗು ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ 52 ಕಡೆ ಪ್ರವಾಹ ಉಂಟಾಗಿದೆ. 14 ಕಡೆ ಭೂ ಕುಸಿತ ಸಂಭವಿಸಿದೆ. 561 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. 9 ಕಡೆ ಪರಿಹಾರ ಕೇಂದ್ರ ತೆರೆಯಲಾಗಿದೆ. 566 ಮಂದಿ ಪರಿಹಾರ ಕೇಂದ್ರದಲ್ಲಿದ್ದಾರೆ. ಜಿಲ್ಲೆಯ 8 ಕಡೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಮಳೆಯ ಅಬ್ಬರ ಕೊಂಚ ತಗ್ಗಿದೆ. ಪ್ರವಾಹ ಇಳಿದಿಲ್ಲ. ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳ ಪ್ರವಾಹದಿಂದ 52 ಪ್ರದೇಶಗಳು ಮುಳುಗಡೆ ಸ್ಥಿತಿಯಲ್ಲಿವೆ.</p>.<p>ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲೂ ಮಳೆ ರಭಸ ಕಡಿಮೆಯಾಗಿದೆ. ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ ಸ್ಥಿತಿಯಲ್ಲಿದೆ. ಮಳೆ ಇಳಿಮುಖವಾದರೆ, ನೀರು ತಗ್ಗುವ ಸಾಧ್ಯತೆಯಿದೆ. ಕುಶಾಲನಗರದ ಸಾಯಿ ಹಾಗೂ ಕುವೆಂಪು ಬಡಾವಣೆಗಳೂ ಜಲಾವೃತ ಸ್ಥಿತಿಯಲ್ಲಿವೆ.</p>.<p><strong>ಶೋಧ ಕಾರ್ಯ: </strong>ತಲಕಾವೇರಿ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿತದಿಂದ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಮಣ್ಣಿನ ಅಡಿ ಸಿಲುಕಿರುವ ಶಂಕೆಯಿದ್ದು, ಶನಿವಾರ ಶೋಧ ಕಾರ್ಯ ಆರಂಭವಾಗುವ ಸಾಧ್ಯತೆಯಿದೆ. ಕಳೆದ ಎರಡು ದಿನಗಳಿಂದ ಪ್ರತಿಕೂಲ ಹವಾಮಾನದಿಂದ ಶೋಧ ಕಾರ್ಯ ಸಾಧ್ಯವಾಗಿರಲಿಲ್ಲ.</p>.<p>ಕೊಡಗು ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಸುರಿದ ಧಾರಾಕಾರ ಮಳೆಗೆ 52 ಕಡೆ ಪ್ರವಾಹ ಉಂಟಾಗಿದೆ. 14 ಕಡೆ ಭೂ ಕುಸಿತ ಸಂಭವಿಸಿದೆ. 561 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. 9 ಕಡೆ ಪರಿಹಾರ ಕೇಂದ್ರ ತೆರೆಯಲಾಗಿದೆ. 566 ಮಂದಿ ಪರಿಹಾರ ಕೇಂದ್ರದಲ್ಲಿದ್ದಾರೆ. ಜಿಲ್ಲೆಯ 8 ಕಡೆ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>