ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ವ್ಯಕ್ತಿಗಳು, ಟ್ರಸ್ಟ್‌ಗಳ ಹೆಸರಿಗೆ ಕೊಕ್‌: ದೇಗುಲಗಳಿಗೆ ಸೇರಿತು 11,499 ಎಕರೆ

Published : 5 ಜನವರಿ 2025, 23:30 IST
Last Updated : 5 ಜನವರಿ 2025, 23:30 IST
ಫಾಲೋ ಮಾಡಿ
Comments
ಇನ್ನೂ ಎರಡು ವರ್ಷ ಬೇಕಿದೆ: ರಾಮಲಿಂಗಾರೆಡ್ಡಿ
‘ನಾನು ಮುಜರಾಯಿ ಸಚಿವನಾದ ಬಳಿಕ ದೇವಸ್ಥಾನಗಳ ಆಸ್ತಿಗಳ ದಾಖಲೆ ಮಾಹಿತಿ ಪರಿಶೀಲಿಸಿದ್ದೆ. ನಿರ್ವಹಣೆ ಸಮರ್ಪಕವಾಗಿಲ್ಲ ಎಂಬುದು ಗಮನಕ್ಕೆ ಬರುತ್ತಿದ್ದಂತೆಯೇ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪಹಣಿ ಇಂಡೀಕರಣ ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದೆ. ಪರಿಣಾಮ ಎರಡು ವರ್ಷಗಳಲ್ಲಿ 11,499 ಎಕರೆ ವಿಸ್ತೀರ್ಣದ ಆಸ್ತಿಗಳ ದಾಖಲೆಗಳನ್ನು ಸರಿಪಡಿಸಲಾಗಿದೆ’ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. ‘ಪ್ರತಿ ತಿಂಗಳೂ ಮುಜರಾಯಿ ಆಸ್ತಿಗಳ ಭೂಮಾಪನ, ದಾಖಲೆ ಪರಿಶೀಲನೆ, ತಿದ್ದುಪಡಿ, ಇಂಡೀಕರಣಕ್ಕೆ ಗುರಿ ನಿಗದಿಪಡಿಸಲಾಗಿದೆ. ಎಲ್ಲ ದೇವಾಲಯಗಳ ಆಸ್ತಿಗಳ ದಾಖಲೆಗಳನ್ನು ಸರಿಪಡಿಸಿ, ದೇವಸ್ಥಾನಗಳ ಹೆಸರಿಗೆ ಸರಿಯಾದ ಕ್ರಮದಲ್ಲಿ ದಾಖಲಿಸಲು ಇನ್ನೂ ಎರಡು ವರ್ಷ ಬೇಕಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT