<p><strong>ನವದೆಹಲಿ:</strong> ಕರ್ನಾಟಕದ ನಾಲ್ಕು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಲೋಪ ಕಾಣಿಸಿಕೊಂಡಿದ್ದು, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು. </p>.<p>ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ‘ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ ಬೆಂಗಳೂರು ನಡುವಿನ ಹೆದ್ದಾರಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯ ವರದಿಯ ಆಧಾರದಲ್ಲಿ ಗುತ್ತಿಗೆದಾರರು ದುರಸ್ತಿ ಕಾಮಗಾರಿಗಳನ್ನು ನಡೆಸಿದ್ದಾರೆ’ ಎಂದರು. </p>.<p>‘ಹೊಸಪೇಟೆ–ಬಳ್ಳಾರಿ– ಕರ್ನಾಟಕ ಗಡಿಯ ಹೆದ್ದಾರಿಯಲ್ಲಿ 8.30 ಕಿ.ಮೀ ಪ್ರದೇಶದಲ್ಲಿ ಬಿರುಕುಗಳು ಪತ್ತೆಯಾದ ಕಾರಣಕ್ಕೆ ಮೂಲ ಗುತ್ತಿಗೆದಾರರನ್ನು ಕೈಬಿಟ್ಟು ಹೊಸ ಗುತ್ತಿಗೆದಾರರ ಮೂಲಕ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಹುಬ್ಬಳ್ಳಿ–ಹೊಸಪೇಟೆ ನಡುವಿನ ಚತುಷ್ಪಥ ಕಾಮಗಾರಿ ಸಂದರ್ಭದಲ್ಲಿ ಬಿರುಕು ಪತ್ತೆಯಾಗಿತ್ತು. ಹಾನಿ ಸರಿಪಡಿಸಲು ಗುತ್ತಿಗೆದಾರರು ಕ್ರಮ ಕೈಗೊಂಡಿದ್ದಾರೆ’ ಎಂದು ಅವರು ತಿಳಿಸಿದರು. </p>.<p>‘ಕುಂದಾಪುರದಿಂದ ಗೋವಾದವರೆಗಿನ ಚತುಷ್ಫಥ ಕಾಮಗಾರಿಯ ವೇಳೆಯಲ್ಲಿ ಕಾಳಿ ಸೇತುವೆಯ ಮೂರು ಸ್ಪ್ಯಾನ್ಗಳು ಕುಸಿದು ಬಿದ್ದಿದ್ದವು. ಅಸಮರ್ಪಕ ಕಾಮಗಾರಿ ನಡೆಸಿದ ಕಾರಣಕ್ಕೆ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದರು. </p>.<p>‘ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 1278 ಕಡೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿದ್ದು, 701 ಕಡೆಗಳಲ್ಲಿ ದೀರ್ಘಾವಧಿ ದುರಸ್ತಿ ಕಾಮಗಾರಿಗಳನ್ನು ನಡೆಸಲಾಗಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ನಾಲ್ಕು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಲೋಪ ಕಾಣಿಸಿಕೊಂಡಿದ್ದು, ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು. </p>.<p>ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ‘ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ ಬೆಂಗಳೂರು ನಡುವಿನ ಹೆದ್ದಾರಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯ ವರದಿಯ ಆಧಾರದಲ್ಲಿ ಗುತ್ತಿಗೆದಾರರು ದುರಸ್ತಿ ಕಾಮಗಾರಿಗಳನ್ನು ನಡೆಸಿದ್ದಾರೆ’ ಎಂದರು. </p>.<p>‘ಹೊಸಪೇಟೆ–ಬಳ್ಳಾರಿ– ಕರ್ನಾಟಕ ಗಡಿಯ ಹೆದ್ದಾರಿಯಲ್ಲಿ 8.30 ಕಿ.ಮೀ ಪ್ರದೇಶದಲ್ಲಿ ಬಿರುಕುಗಳು ಪತ್ತೆಯಾದ ಕಾರಣಕ್ಕೆ ಮೂಲ ಗುತ್ತಿಗೆದಾರರನ್ನು ಕೈಬಿಟ್ಟು ಹೊಸ ಗುತ್ತಿಗೆದಾರರ ಮೂಲಕ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಹುಬ್ಬಳ್ಳಿ–ಹೊಸಪೇಟೆ ನಡುವಿನ ಚತುಷ್ಪಥ ಕಾಮಗಾರಿ ಸಂದರ್ಭದಲ್ಲಿ ಬಿರುಕು ಪತ್ತೆಯಾಗಿತ್ತು. ಹಾನಿ ಸರಿಪಡಿಸಲು ಗುತ್ತಿಗೆದಾರರು ಕ್ರಮ ಕೈಗೊಂಡಿದ್ದಾರೆ’ ಎಂದು ಅವರು ತಿಳಿಸಿದರು. </p>.<p>‘ಕುಂದಾಪುರದಿಂದ ಗೋವಾದವರೆಗಿನ ಚತುಷ್ಫಥ ಕಾಮಗಾರಿಯ ವೇಳೆಯಲ್ಲಿ ಕಾಳಿ ಸೇತುವೆಯ ಮೂರು ಸ್ಪ್ಯಾನ್ಗಳು ಕುಸಿದು ಬಿದ್ದಿದ್ದವು. ಅಸಮರ್ಪಕ ಕಾಮಗಾರಿ ನಡೆಸಿದ ಕಾರಣಕ್ಕೆ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದರು. </p>.<p>‘ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 1278 ಕಡೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿದ್ದು, 701 ಕಡೆಗಳಲ್ಲಿ ದೀರ್ಘಾವಧಿ ದುರಸ್ತಿ ಕಾಮಗಾರಿಗಳನ್ನು ನಡೆಸಲಾಗಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>