<p><strong>ಬೆಂಗಳೂರು</strong>: ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವ ಉದ್ದೇಶದಿಂದ ‘ಕರ್ನಾಟಕ ಪೊಲೀಸ್ ಮಸೂದೆ’ಗೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನ ತೆಗೆದುಕೊಂಡಿದೆ.</p>.<p>ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಪೊಲೀಸರೇ ಅಪರಾಧ ಚಟುವಟಿಕೆಗಳಲ್ಲಿ ಸಿಕ್ಕಿ ಬಿದ್ದ ಹಲವು ಪ್ರಕರಣಗಳು ವರದಿಯಾಗಿವೆ. ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಈ ತಿದ್ದುಪಡಿಯ ಮೂಲಕ ಪೊಲೀಸ್ ಸಿಬ್ಬಂದಿ ಮಂಡಳಿಗೆ ಅಧಿಕಾರ ನೀಡಲಾಗುವುದು ಎಂದು ಅವರು ವಿವರಿಸಿದರು.</p>.<p>‘ಕರ್ನಾಟಕ ಪೊಲೀಸ್ ಕಾಯ್ದೆ 1963ಕ್ಕೆ (ಕರ್ನಾಟಕ ಕಾಯ್ದೆ 4, 1964) ಮತ್ತಷ್ಟು ತಿದ್ದುಪಡಿ ತರಲಾಗುವುದು. ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ವರ್ಗಾಯಿಸಲು ತುರ್ತಾಗಿ ಆದೇಶ ಹೊರಡಿಸಬೇಕಾಗುತ್ತದೆ. ಈಗ ಇಂತಹ ವರ್ಗಾವಣೆಗಳು ಮಂಡಳಿಯ ವ್ಯಾಪ್ತಿಯಲ್ಲಿರುವುದಿಲ್ಲ. ಸರ್ಕಾರವೇ ಆ ಕೆಲಸ ಮಾಡಬೇಕಾಗುತ್ತದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ಮತ್ತು ಆದೇಶ ಪಡೆಯುವಲ್ಲಿ ತಡವಾಗುವ ಸಾಧ್ಯತೆ ಇದೆ’ ಎಂದರು.</p>.<p>ಪೊಲೀಸ್ ಸಿಬ್ಬಂದಿ ಮಂಡಳಿಯು ಪೊಲೀಸ್ ಸಿಬ್ಬಂದಿ ಮತ್ತು ಡಿವೈಎಸ್ಪಿ ಶ್ರೇಣಿಯವರೆಗಿನ ಅಧಿಕಾರಿಗಳನ್ನು ವರ್ಗಾಯಿಸಲು ಇಲಾಖೆಯ ಇತರೆ ಎಲ್ಲಾ ವರ್ಗಾವಣೆಗಳಿಗೆ ಸಕ್ಷಮ ಪ್ರಾಧಿಕಾರವಾಗಿದೆ. ಆದ್ದರಿಂದ ಪೊಲೀಸ್ ಸ್ಥಾಪನಾ ಮಂಡಳಿಗೆ ಅಧಿಕಾರ ನೀಡಲು ಮಸೂದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವ ಉದ್ದೇಶದಿಂದ ‘ಕರ್ನಾಟಕ ಪೊಲೀಸ್ ಮಸೂದೆ’ಗೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನ ತೆಗೆದುಕೊಂಡಿದೆ.</p>.<p>ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.</p>.<p>ಇತ್ತೀಚಿನ ದಿನಗಳಲ್ಲಿ ಪೊಲೀಸರೇ ಅಪರಾಧ ಚಟುವಟಿಕೆಗಳಲ್ಲಿ ಸಿಕ್ಕಿ ಬಿದ್ದ ಹಲವು ಪ್ರಕರಣಗಳು ವರದಿಯಾಗಿವೆ. ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಈ ತಿದ್ದುಪಡಿಯ ಮೂಲಕ ಪೊಲೀಸ್ ಸಿಬ್ಬಂದಿ ಮಂಡಳಿಗೆ ಅಧಿಕಾರ ನೀಡಲಾಗುವುದು ಎಂದು ಅವರು ವಿವರಿಸಿದರು.</p>.<p>‘ಕರ್ನಾಟಕ ಪೊಲೀಸ್ ಕಾಯ್ದೆ 1963ಕ್ಕೆ (ಕರ್ನಾಟಕ ಕಾಯ್ದೆ 4, 1964) ಮತ್ತಷ್ಟು ತಿದ್ದುಪಡಿ ತರಲಾಗುವುದು. ಕರ್ತವ್ಯ ಲೋಪ, ದುರ್ನಡತೆ ಮತ್ತು ನಿರ್ಲಕ್ಷ್ಯ ತೋರುವ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ವರ್ಗಾಯಿಸಲು ತುರ್ತಾಗಿ ಆದೇಶ ಹೊರಡಿಸಬೇಕಾಗುತ್ತದೆ. ಈಗ ಇಂತಹ ವರ್ಗಾವಣೆಗಳು ಮಂಡಳಿಯ ವ್ಯಾಪ್ತಿಯಲ್ಲಿರುವುದಿಲ್ಲ. ಸರ್ಕಾರವೇ ಆ ಕೆಲಸ ಮಾಡಬೇಕಾಗುತ್ತದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಲ್ಲಿ ಮತ್ತು ಆದೇಶ ಪಡೆಯುವಲ್ಲಿ ತಡವಾಗುವ ಸಾಧ್ಯತೆ ಇದೆ’ ಎಂದರು.</p>.<p>ಪೊಲೀಸ್ ಸಿಬ್ಬಂದಿ ಮಂಡಳಿಯು ಪೊಲೀಸ್ ಸಿಬ್ಬಂದಿ ಮತ್ತು ಡಿವೈಎಸ್ಪಿ ಶ್ರೇಣಿಯವರೆಗಿನ ಅಧಿಕಾರಿಗಳನ್ನು ವರ್ಗಾಯಿಸಲು ಇಲಾಖೆಯ ಇತರೆ ಎಲ್ಲಾ ವರ್ಗಾವಣೆಗಳಿಗೆ ಸಕ್ಷಮ ಪ್ರಾಧಿಕಾರವಾಗಿದೆ. ಆದ್ದರಿಂದ ಪೊಲೀಸ್ ಸ್ಥಾಪನಾ ಮಂಡಳಿಗೆ ಅಧಿಕಾರ ನೀಡಲು ಮಸೂದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>