<p><strong>ಬೆಂಗಳೂರು:</strong> ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು ರಾಜ್ಯದಲ್ಲಿನ ಎರಡು ಕ್ಷೇತ್ರಗಳ ಉಪ ಚುನಾವಣೆಯ ಕಾರಣಕ್ಕೆ ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.</p>.<p>ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಚುನಾವಣೆಯ ಫಲಿತಾಂಶ ಮೇ 4ರಂದು ಹೊರಬೀಳಲಿದ್ದು, ಆ ಬಳಿಕ ನಾಯಕತ್ವ ಗೊಂದಲ ವಿಚಾರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕೆಂದು ಶಿವಕುಮಾರ್ ಪಟ್ಟು ಹಿಡಿದಿದ್ದಾರೆ ಎಂದು ಗೊತ್ತಾಗಿದೆ. ಈ ಮಧ್ಯೆ ತುಮಕೂರಿನಲ್ಲಿ ಶನಿವಾರ ಮಾತನಾಡಿದ ಶಾಸಕ ಡಾ.ಎಚ್.ಡಿ. ರಂಗನಾಥ್, ‘ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ ಮೇ 15ರಂದು ಇದೆ. ಅಷ್ಟರ ಒಳಗೆ ಅವರಿಗೆ ಒಳ್ಳೆಯದಾಗುತ್ತದೆ’ ಎಂದರು. ‘ಕಾಂಗ್ರೆಸ್ನಲ್ಲಿ ಏನಾಗಿದೆ ಎಂಬುವುದನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತದೆ. ಕಾಂಗ್ರೆಸ್ ಶಾಸಕನಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಲೆಬಾಗುತ್ತೇನೆ’ ಎಂದರು.</p>.<p>‘ಅವಶ್ಯಕತೆ ಇದ್ದರೆ ನಾವೆಲ್ಲ ದೆಹಲಿಗೆ ಹೋಗುತ್ತೇವೆ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡದಂತೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ನಾನು ಜಾಸ್ತಿ ಮಾತನಾಡಲ್ಲ’ ಎಂದೂ ಪ್ರತಿಕ್ರಿಯಿಸಿದರು.</p>.<div><blockquote>ಮುಖ್ಯಮಂತ್ರಿ ಕುರ್ಚಿ ಮತ್ತು ಸಂಪುಟ ವಿಸ್ತರಣೆ ವಿಷಯದಲ್ಲಿ ಗೊಂದಲವಿದೆ. ಇದನ್ನು ಬಗೆಹರಿಸಲು ಪಕ್ಷದ ಹೈಕಮಾಂಡ್ ಯಾಕೆ ವಿಳಂಬ ಮಾಡುತ್ತಿದೆ ಎಂಬುದು ಗೊತ್ತಿಲ್ಲ </blockquote><span class="attribution">ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ</span></div>.<h2>‘ಸಿ.ಎಂ ಸ್ಥಾನದ ಬಯಕೆ ತಪ್ಪಲ್ಲ’</h2><h2></h2><p>‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸದ್ಯ ಖಾಲಿ ಇಲ್ಲ. ಖಾಲಿ ಆದಾಗ ಯಾರು ಬಂದು ಕುಳಿತು ಕೊಳ್ಳುತ್ತಾರೋ, ನೋಡೋಣ’ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ ತಿಳಿಸಿದರು.</p><p>ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಅಧಿಕಾರ ಹಂಚಿಕೆ ವಿಷಯದಲ್ಲಿ ಏನು ಮಾತುಕತೆ ನಡೆದಿದೆ ಎಂಬುದು ಗೊತ್ತಿಲ್ಲ. ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ’ ಎಂದರು.</p><p>‘ಸಚಿವ ಸಂಪುಟ ವಿಸ್ತರಣೆ ವೇಳೆ ಈಗ ಇರುವ ಸಚಿವರ ಪೈಕಿ ಅರ್ಧದಷ್ಟು ಮಂದಿಯನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡಲು ಕೆಲವರು ಕೋರಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್<br>ತೀರ್ಮಾನಿಸುತ್ತದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು ರಾಜ್ಯದಲ್ಲಿನ ಎರಡು ಕ್ಷೇತ್ರಗಳ ಉಪ ಚುನಾವಣೆಯ ಕಾರಣಕ್ಕೆ ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.</p>.<p>ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಚುನಾವಣೆಯ ಫಲಿತಾಂಶ ಮೇ 4ರಂದು ಹೊರಬೀಳಲಿದ್ದು, ಆ ಬಳಿಕ ನಾಯಕತ್ವ ಗೊಂದಲ ವಿಚಾರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕೆಂದು ಶಿವಕುಮಾರ್ ಪಟ್ಟು ಹಿಡಿದಿದ್ದಾರೆ ಎಂದು ಗೊತ್ತಾಗಿದೆ. ಈ ಮಧ್ಯೆ ತುಮಕೂರಿನಲ್ಲಿ ಶನಿವಾರ ಮಾತನಾಡಿದ ಶಾಸಕ ಡಾ.ಎಚ್.ಡಿ. ರಂಗನಾಥ್, ‘ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ ಮೇ 15ರಂದು ಇದೆ. ಅಷ್ಟರ ಒಳಗೆ ಅವರಿಗೆ ಒಳ್ಳೆಯದಾಗುತ್ತದೆ’ ಎಂದರು. ‘ಕಾಂಗ್ರೆಸ್ನಲ್ಲಿ ಏನಾಗಿದೆ ಎಂಬುವುದನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತದೆ. ಕಾಂಗ್ರೆಸ್ ಶಾಸಕನಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಲೆಬಾಗುತ್ತೇನೆ’ ಎಂದರು.</p>.<p>‘ಅವಶ್ಯಕತೆ ಇದ್ದರೆ ನಾವೆಲ್ಲ ದೆಹಲಿಗೆ ಹೋಗುತ್ತೇವೆ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡದಂತೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ನಾನು ಜಾಸ್ತಿ ಮಾತನಾಡಲ್ಲ’ ಎಂದೂ ಪ್ರತಿಕ್ರಿಯಿಸಿದರು.</p>.<div><blockquote>ಮುಖ್ಯಮಂತ್ರಿ ಕುರ್ಚಿ ಮತ್ತು ಸಂಪುಟ ವಿಸ್ತರಣೆ ವಿಷಯದಲ್ಲಿ ಗೊಂದಲವಿದೆ. ಇದನ್ನು ಬಗೆಹರಿಸಲು ಪಕ್ಷದ ಹೈಕಮಾಂಡ್ ಯಾಕೆ ವಿಳಂಬ ಮಾಡುತ್ತಿದೆ ಎಂಬುದು ಗೊತ್ತಿಲ್ಲ </blockquote><span class="attribution">ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ</span></div>.<h2>‘ಸಿ.ಎಂ ಸ್ಥಾನದ ಬಯಕೆ ತಪ್ಪಲ್ಲ’</h2><h2></h2><p>‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸದ್ಯ ಖಾಲಿ ಇಲ್ಲ. ಖಾಲಿ ಆದಾಗ ಯಾರು ಬಂದು ಕುಳಿತು ಕೊಳ್ಳುತ್ತಾರೋ, ನೋಡೋಣ’ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ ತಿಳಿಸಿದರು.</p><p>ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಅಧಿಕಾರ ಹಂಚಿಕೆ ವಿಷಯದಲ್ಲಿ ಏನು ಮಾತುಕತೆ ನಡೆದಿದೆ ಎಂಬುದು ಗೊತ್ತಿಲ್ಲ. ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ’ ಎಂದರು.</p><p>‘ಸಚಿವ ಸಂಪುಟ ವಿಸ್ತರಣೆ ವೇಳೆ ಈಗ ಇರುವ ಸಚಿವರ ಪೈಕಿ ಅರ್ಧದಷ್ಟು ಮಂದಿಯನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡಲು ಕೆಲವರು ಕೋರಿದ್ದಾರೆ. ಅಂತಿಮವಾಗಿ ಪಕ್ಷದ ಹೈಕಮಾಂಡ್<br>ತೀರ್ಮಾನಿಸುತ್ತದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>