<p><strong>ಬೆಂಗಳೂರು:</strong> ಶಾಸಕರನ್ನು ಸೆಳೆಯುವ ಬಗ್ಗೆ ಕೊನೆಯ ಹಂತದವರೆಗೂ ಗುಟ್ಟು ಬಿಟ್ಟುಕೊಡದ ಬಿಜೆಪಿ, ಮೈತ್ರಿ ಸರ್ಕಾರವನ್ನು ಸದ್ದಿಲ್ಲದೇ ಖೆಡ್ಡಾಕ್ಕೆ ಕೆಡಹುವ ಕಾರ್ಯತಂತ್ರ ರೂಪಿಸಿ ಮೊದಲ ಹಂತದ ಯಶ ಸಾಧಿಸಿದಂತೆ ಕಾಣುತ್ತಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/karnataka-politics-649474.html" target="_blank">ಆಸರೆ ನೀಡಿದವರನ್ನೇ ಕೈಬಿಟ್ಟ ಅಡಗೂರು</a></strong></p>.<p>ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಒಂದು ವರ್ಷದಲ್ಲಿ ನಾಲ್ಕು ಬಾರಿ ಪ್ರಯತ್ನಿಸಿ ಕೈಸುಟ್ಟುಕೊಂಡಿದ್ದ ಬಿಜೆಪಿ ಐದನೇ ಪ್ರಯತ್ನದಲ್ಲಿ ಎಚ್ಚರಿಕೆಯ ನಡೆ ಇಟ್ಟಿತ್ತು. ಪಕ್ಷದ ಮುಖಂಡ ಸಿ.ಪಿ.ಯೋಗೇಶ್ವರ ಹಾಗೂ ಶಾಸಕ ಸಿ.ಎನ್. ಅಶ್ವತ್ಥನಾರಾಯಣ್ ಅವರನ್ನು ಮುಂದೆ ಬಿಟ್ಟು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಈ ಹಿಂದೆ ನಡೆಸಿದ್ದ ಯತ್ನ ಫಲ ನೀಡಿರಲಿಲ್ಲ. ಆರಂಭದಲ್ಲೇ ಮಾಹಿತಿ ಸೋರಿಕೆಯಾಗಿದ್ದರಿಂದ ಮೈತ್ರಿ ಸರ್ಕಾರವೂ ಪ್ರತಿತಂತ್ರ ರೂಪಿಸಿ ಅಧಿಕಾರ ಉಳಿಸಿಕೊಂಡಿತ್ತು.</p>.<p>ಆದರೆ, ಈ ಬಾರಿ ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಕಾರ್ಯಾಚರಣೆಯ ರೂಪುರೇಷೆ ಸಿದ್ಧಪಡಿಸಲಾಗಿತ್ತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರಿಗಷ್ಟೇ ಮಾಹಿತಿ ಇತ್ತು. ಕೇಂದ್ರ ಬಜೆಟ್ ಮಂಡನೆಯ ಆಗುವವರೆಗೆ ಕಾರ್ಯಾಚರಣೆ ಸುಳಿವು ಹೊರಗೆ ಹೋಗದಂತೆ ಕೇಂದ್ರ ನಾಯಕರು ನೋಡಿಕೊಂಡಿದ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/cm-failed-gain-confidence-14-649369.html">ವಿಶ್ವಾಸ ಗಳಿಸುವಲ್ಲಿ ಸಿಎಂ ವಿಫಲ, 14 ಶಾಸಕರು ರಾಜೀನಾಮೆ ನೀಡಿದ್ದೇವೆ: ವಿಶ್ವನಾಥ್</a></strong></p>.<p>10ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡುವುದು ಖಚಿತವಾಗುವವರೆಗೆ ಮೈತ್ರಿ ಸರ್ಕಾರಕ್ಕಾಗಲೀ ಅಥವಾ ತಮ್ಮದೇ ಪಕ್ಷದ ಮುಖಂಡರಿಗಾಗಲೀ ಈ ಬಗ್ಗೆ ಖಚಿತ ಸುಳಿವು ಲಭ್ಯವಾಗದಂತೆ ಎಚ್ಚರ ವಹಿಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಕಾಂಗ್ರೆಸ್ ಹಾಗೂ ಜೆಡಿಎಸ್ನ ಶಾಸಕರು ನಗರದ ಯು.ಬಿ.ಸಿಟಿಯಲ್ಲಿ ಶುಕ್ರವಾರ ರಾತ್ರಿ ಗುಪ್ತ ಸಭೆ ನಡೆಸಿ, ಸರ್ಕಾರ ಉರುಳಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದರೂ ಮೈತ್ರಿ ಸರ್ಕಾರಕ್ಕೆ ಈ ಬಗ್ಗೆ ಸುಳಿವು ಸಿಗದಂತೆ ನೋಡಿಕೊಂಡಿದ್ದರು. ಈ ಸಭೆಯಲ್ಲೂ ಬಿಜೆಪಿಯ ಪ್ರಮುಖ ಮುಖಂಡರು ಯಾರೂ ಇರಲಿಲ್ಲ.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/10-mlas-resign-649361.html">ಮತ್ತೆ 10 ಶಾಸಕರಿಂದ ರಾಜೀನಾಮೆ ಪರ್ವ?</a></strong></p>.<p>ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಕೇಂದ್ರ ನಾಯಕರು ಶನಿವಾರ ಬೆಳಿಗ್ಗೆಯಷ್ಟೇ ರಾಜ್ಯ ನಾಯಕರಿಗೆ ಮಾಹಿತಿ ನೀಡಿದ್ದರು. ಬಳಿಕ ಯು.ಬಿ.ಸಿಟಿಗೆ ತಮ್ಮ ಆಪ್ತ ಕಾರ್ಯದರ್ಶಿ ಹಾಗೂ ಸಮೀಪದ ಬಂಧು ಎನ್.ಆರ್.ಸಂತೋಷ್ ಅವರನ್ನು ಯಡಿಯೂರಪ್ಪ ಕಳುಹಿಸಿದ್ದರು. ರಾಜೀನಾಮೆ ನೀಡಿರುವ ಶಾಸಕರು ಸಂತೋಷ್ ನೇತೃತ್ವದಲ್ಲೇ ಎಚ್.ಎ.ಎಲ್ ವಿಮಾನನಿಲ್ದಾಣದ ಮೂಲಕ ನಿಗೂಢ ಸ್ಥಳಕ್ಕೆ ಪ್ರಯಾಣ ಬೆಳೆಸಿದರು.</p>.<p><strong>ಬಿಜೆಪಿ ಮುಂದಿನ ನಡೆ ಏನು?</strong></p>.<p>ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಬಿಜೆಪಿ ನಾಯಕರ ಮೊದಲ ಆದ್ಯತೆ. ಈ ದಿಸೆಯಲ್ಲಿ ತಮ್ಮ ಪ್ರಯತ್ನ ಮುಂದುವರಿಸಲಿದ್ದಾರೆ.</p>.<p>ಮೈತ್ರಿಪಕ್ಷಗಳ ಶಾಸಕರು ನೀಡಿರುವ ರಾಜೀನಾಮೆಯನ್ನುಸಭಾಧ್ಯಕ್ಷರು ಅಂಗೀಕರಿಸದೇ ಇದ್ದರೆ ಬಿಜೆಪಿ ರಾಜಭವನದ ಮೆಟ್ಟಿಲು ತುಳಿಯುವ ಸಾಧ್ಯತೆ ಹೆಚ್ಚಿದೆ. ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿ, ವಿಶ್ವಾಸ ಮತ ಸಾಬೀತುಪಡಿಸಲು ಮುಖ್ಯಮಂತ್ರಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಬಹುದು. ಸರ್ಕಾರ ಹಟಕ್ಕೆ ಕುಳಿತರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂಬ ಕಾರಣವೊಡ್ಡಿ ತತ್ಕಾಲಕ್ಕೆ ಸರ್ಕಾರವನ್ನು ಅಮಾನತ್ತಿನಲ್ಲಿಟ್ಟು, ರಾಷ್ಟ್ರಪತಿ ಆಳ್ವಿಕೆ ಹೇರಲು ಶಿಫಾರಸು ಮಾಡಬಹುದು. ನಂತರದ ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ, ಮಧ್ಯಂತರ ಚುನಾವಣೆ ಅಥವಾ ಸರ್ಕಾರ ರಚನೆ ಮುಂದಾಗುವುದು ಬಿಜೆಪಿ ಲೆಕ್ಕಾಚಾರವಾಗಿದೆ.</p>.<p><strong>* ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/resignation-12-mlas-speaker-649336.html">ಕ್ಷಿಪ್ರ ಬೆಳವಣಿಗೆ| 12 ಶಾಸಕರಿಂದ ರಾಜೀನಾಮೆ ಸಲ್ಲಿಕೆ, ಶಾಸಕರಿಗೆ ಸಿಗದ ಸ್ಪೀಕರ್</a></strong></p>.<p><strong>*</strong><a href="https://www.prajavani.net/stories/stateregional/take-resignations-and-give-649339.html"><strong>ರಾಜೀನಾಮೆ ಪತ್ರ ಪಡೆದು ಸ್ವೀಕೃತಿ ನೀಡಲು ಸಿಬ್ಬಂದಿಗೆ ತಿಳಿಸಿದ್ದೇನೆ: ಸ್ಪೀಕರ್</strong></a></p>.<p><strong>*<a href="https://www.prajavani.net/stories/stateregional/resignation-mlas-resort-goa-649376.html">ರಾಜ್ಯ ರಾಜಕೀಯ | ಗೋವಾ, ಮಹಾರಾಷ್ಟ್ರದ ರೆಸಾರ್ಟ್ನತ್ತ ರಾಜೀನಾಮೆ ನೀಡಿದ ಶಾಸಕರು</a></strong></p>.<p><strong>*<a href="https://www.prajavani.net/stories/stateregional/mlas-resignation-cant-catch-649372.html">ರಾಜೀನಾಮೆ ಪರ್ವ | ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ: ಡಿ.ಕೆ.ಶಿವಕುಮಾರ್</a></strong></p>.<p>*<a href="https://www.prajavani.net/district/chikkaballapur/not-resigning-subbreddy-clear-649368.html"><strong>ರಾಜೀನಾಮೆ ನೀಡುತ್ತಿಲ್ಲ–ಸುಬ್ಬಾರೆಡ್ಡಿ ಸ್ಪಷ್ಟನೆ; ಪ್ರತಿಕ್ರಿಯೆಗೆ ಸಿಗದ ಸುಧಾಕರ್</strong></a></p>.<p><strong>*<a href="https://www.prajavani.net/district/mandya/police-security-kc-narayana-649366.html">ರಾಜೀನಾಮೆ ಸಲ್ಲಿಸಿದ ಕೆ.ಸಿ.ನಾರಾಯಣಗೌಡ ಮನೆಗೆ ಪೊಲೀಸ್ ಭದ್ರತೆ</a></strong></p>.<p><strong>*<a href="https://www.prajavani.net/stories/stateregional/resignation-12-mlas-speaker-649349.html">ಅತೃಪ್ತರ ಮನವೊಲಿಕೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಾರೆ, ಕಾದು ನೋಡೋಣ: ಸಿದ್ದರಾಮಯ್ಯ</a></strong></p>.<p><strong>*<a href="https://www.prajavani.net/stories/stateregional/karnataka-politics-649334.html">ರಾಜೀನಾಮೆ ಪರ್ವ | ರಾಜಭವನಕ್ಕೆ ತೆರಳಿದ 8 ಮಂದಿ ಶಾಸಕರು</a></strong></p>.<p>*<a href="http://https//www.prajavani.net/stories/stateregional/hd-deve-gowda-siddaramaiah-645942.html"><strong>ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’</strong></a></p>.<p><strong>*<a href="https://www.prajavani.net/columns/gathibimba/mlas-and-politics-648997.html"><em>ಮದ್ದಿಲ್ಲದ ರೋಗ; ಮಧ್ಯಂತರ ರಾಗ</em></a></strong></p>.<p><strong><em>*</em></strong><a href="https://www.prajavani.net/stories/stateregional/political-analysis-devegowda-645773.html"><em><strong>ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್</strong></em></a></p>.<p><strong>*<a href="https://www.prajavani.net/stories/stateregional/siddaramaiah-disappointed-649203.html">ಸಾಕಾಗಿದೆ, ಏನಾದರೂ ಮಾಡಿಕೊಳ್ಳಲಿ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಸಕರನ್ನು ಸೆಳೆಯುವ ಬಗ್ಗೆ ಕೊನೆಯ ಹಂತದವರೆಗೂ ಗುಟ್ಟು ಬಿಟ್ಟುಕೊಡದ ಬಿಜೆಪಿ, ಮೈತ್ರಿ ಸರ್ಕಾರವನ್ನು ಸದ್ದಿಲ್ಲದೇ ಖೆಡ್ಡಾಕ್ಕೆ ಕೆಡಹುವ ಕಾರ್ಯತಂತ್ರ ರೂಪಿಸಿ ಮೊದಲ ಹಂತದ ಯಶ ಸಾಧಿಸಿದಂತೆ ಕಾಣುತ್ತಿದೆ.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/karnataka-politics-649474.html" target="_blank">ಆಸರೆ ನೀಡಿದವರನ್ನೇ ಕೈಬಿಟ್ಟ ಅಡಗೂರು</a></strong></p>.<p>ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಒಂದು ವರ್ಷದಲ್ಲಿ ನಾಲ್ಕು ಬಾರಿ ಪ್ರಯತ್ನಿಸಿ ಕೈಸುಟ್ಟುಕೊಂಡಿದ್ದ ಬಿಜೆಪಿ ಐದನೇ ಪ್ರಯತ್ನದಲ್ಲಿ ಎಚ್ಚರಿಕೆಯ ನಡೆ ಇಟ್ಟಿತ್ತು. ಪಕ್ಷದ ಮುಖಂಡ ಸಿ.ಪಿ.ಯೋಗೇಶ್ವರ ಹಾಗೂ ಶಾಸಕ ಸಿ.ಎನ್. ಅಶ್ವತ್ಥನಾರಾಯಣ್ ಅವರನ್ನು ಮುಂದೆ ಬಿಟ್ಟು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಈ ಹಿಂದೆ ನಡೆಸಿದ್ದ ಯತ್ನ ಫಲ ನೀಡಿರಲಿಲ್ಲ. ಆರಂಭದಲ್ಲೇ ಮಾಹಿತಿ ಸೋರಿಕೆಯಾಗಿದ್ದರಿಂದ ಮೈತ್ರಿ ಸರ್ಕಾರವೂ ಪ್ರತಿತಂತ್ರ ರೂಪಿಸಿ ಅಧಿಕಾರ ಉಳಿಸಿಕೊಂಡಿತ್ತು.</p>.<p>ಆದರೆ, ಈ ಬಾರಿ ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಕಾರ್ಯಾಚರಣೆಯ ರೂಪುರೇಷೆ ಸಿದ್ಧಪಡಿಸಲಾಗಿತ್ತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರಿಗಷ್ಟೇ ಮಾಹಿತಿ ಇತ್ತು. ಕೇಂದ್ರ ಬಜೆಟ್ ಮಂಡನೆಯ ಆಗುವವರೆಗೆ ಕಾರ್ಯಾಚರಣೆ ಸುಳಿವು ಹೊರಗೆ ಹೋಗದಂತೆ ಕೇಂದ್ರ ನಾಯಕರು ನೋಡಿಕೊಂಡಿದ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/cm-failed-gain-confidence-14-649369.html">ವಿಶ್ವಾಸ ಗಳಿಸುವಲ್ಲಿ ಸಿಎಂ ವಿಫಲ, 14 ಶಾಸಕರು ರಾಜೀನಾಮೆ ನೀಡಿದ್ದೇವೆ: ವಿಶ್ವನಾಥ್</a></strong></p>.<p>10ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡುವುದು ಖಚಿತವಾಗುವವರೆಗೆ ಮೈತ್ರಿ ಸರ್ಕಾರಕ್ಕಾಗಲೀ ಅಥವಾ ತಮ್ಮದೇ ಪಕ್ಷದ ಮುಖಂಡರಿಗಾಗಲೀ ಈ ಬಗ್ಗೆ ಖಚಿತ ಸುಳಿವು ಲಭ್ಯವಾಗದಂತೆ ಎಚ್ಚರ ವಹಿಸಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಕಾಂಗ್ರೆಸ್ ಹಾಗೂ ಜೆಡಿಎಸ್ನ ಶಾಸಕರು ನಗರದ ಯು.ಬಿ.ಸಿಟಿಯಲ್ಲಿ ಶುಕ್ರವಾರ ರಾತ್ರಿ ಗುಪ್ತ ಸಭೆ ನಡೆಸಿ, ಸರ್ಕಾರ ಉರುಳಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದರೂ ಮೈತ್ರಿ ಸರ್ಕಾರಕ್ಕೆ ಈ ಬಗ್ಗೆ ಸುಳಿವು ಸಿಗದಂತೆ ನೋಡಿಕೊಂಡಿದ್ದರು. ಈ ಸಭೆಯಲ್ಲೂ ಬಿಜೆಪಿಯ ಪ್ರಮುಖ ಮುಖಂಡರು ಯಾರೂ ಇರಲಿಲ್ಲ.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/10-mlas-resign-649361.html">ಮತ್ತೆ 10 ಶಾಸಕರಿಂದ ರಾಜೀನಾಮೆ ಪರ್ವ?</a></strong></p>.<p>ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಕೇಂದ್ರ ನಾಯಕರು ಶನಿವಾರ ಬೆಳಿಗ್ಗೆಯಷ್ಟೇ ರಾಜ್ಯ ನಾಯಕರಿಗೆ ಮಾಹಿತಿ ನೀಡಿದ್ದರು. ಬಳಿಕ ಯು.ಬಿ.ಸಿಟಿಗೆ ತಮ್ಮ ಆಪ್ತ ಕಾರ್ಯದರ್ಶಿ ಹಾಗೂ ಸಮೀಪದ ಬಂಧು ಎನ್.ಆರ್.ಸಂತೋಷ್ ಅವರನ್ನು ಯಡಿಯೂರಪ್ಪ ಕಳುಹಿಸಿದ್ದರು. ರಾಜೀನಾಮೆ ನೀಡಿರುವ ಶಾಸಕರು ಸಂತೋಷ್ ನೇತೃತ್ವದಲ್ಲೇ ಎಚ್.ಎ.ಎಲ್ ವಿಮಾನನಿಲ್ದಾಣದ ಮೂಲಕ ನಿಗೂಢ ಸ್ಥಳಕ್ಕೆ ಪ್ರಯಾಣ ಬೆಳೆಸಿದರು.</p>.<p><strong>ಬಿಜೆಪಿ ಮುಂದಿನ ನಡೆ ಏನು?</strong></p>.<p>ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಬಿಜೆಪಿ ನಾಯಕರ ಮೊದಲ ಆದ್ಯತೆ. ಈ ದಿಸೆಯಲ್ಲಿ ತಮ್ಮ ಪ್ರಯತ್ನ ಮುಂದುವರಿಸಲಿದ್ದಾರೆ.</p>.<p>ಮೈತ್ರಿಪಕ್ಷಗಳ ಶಾಸಕರು ನೀಡಿರುವ ರಾಜೀನಾಮೆಯನ್ನುಸಭಾಧ್ಯಕ್ಷರು ಅಂಗೀಕರಿಸದೇ ಇದ್ದರೆ ಬಿಜೆಪಿ ರಾಜಭವನದ ಮೆಟ್ಟಿಲು ತುಳಿಯುವ ಸಾಧ್ಯತೆ ಹೆಚ್ಚಿದೆ. ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿ, ವಿಶ್ವಾಸ ಮತ ಸಾಬೀತುಪಡಿಸಲು ಮುಖ್ಯಮಂತ್ರಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಬಹುದು. ಸರ್ಕಾರ ಹಟಕ್ಕೆ ಕುಳಿತರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂಬ ಕಾರಣವೊಡ್ಡಿ ತತ್ಕಾಲಕ್ಕೆ ಸರ್ಕಾರವನ್ನು ಅಮಾನತ್ತಿನಲ್ಲಿಟ್ಟು, ರಾಷ್ಟ್ರಪತಿ ಆಳ್ವಿಕೆ ಹೇರಲು ಶಿಫಾರಸು ಮಾಡಬಹುದು. ನಂತರದ ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ, ಮಧ್ಯಂತರ ಚುನಾವಣೆ ಅಥವಾ ಸರ್ಕಾರ ರಚನೆ ಮುಂದಾಗುವುದು ಬಿಜೆಪಿ ಲೆಕ್ಕಾಚಾರವಾಗಿದೆ.</p>.<p><strong>* ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/resignation-12-mlas-speaker-649336.html">ಕ್ಷಿಪ್ರ ಬೆಳವಣಿಗೆ| 12 ಶಾಸಕರಿಂದ ರಾಜೀನಾಮೆ ಸಲ್ಲಿಕೆ, ಶಾಸಕರಿಗೆ ಸಿಗದ ಸ್ಪೀಕರ್</a></strong></p>.<p><strong>*</strong><a href="https://www.prajavani.net/stories/stateregional/take-resignations-and-give-649339.html"><strong>ರಾಜೀನಾಮೆ ಪತ್ರ ಪಡೆದು ಸ್ವೀಕೃತಿ ನೀಡಲು ಸಿಬ್ಬಂದಿಗೆ ತಿಳಿಸಿದ್ದೇನೆ: ಸ್ಪೀಕರ್</strong></a></p>.<p><strong>*<a href="https://www.prajavani.net/stories/stateregional/resignation-mlas-resort-goa-649376.html">ರಾಜ್ಯ ರಾಜಕೀಯ | ಗೋವಾ, ಮಹಾರಾಷ್ಟ್ರದ ರೆಸಾರ್ಟ್ನತ್ತ ರಾಜೀನಾಮೆ ನೀಡಿದ ಶಾಸಕರು</a></strong></p>.<p><strong>*<a href="https://www.prajavani.net/stories/stateregional/mlas-resignation-cant-catch-649372.html">ರಾಜೀನಾಮೆ ಪರ್ವ | ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ: ಡಿ.ಕೆ.ಶಿವಕುಮಾರ್</a></strong></p>.<p>*<a href="https://www.prajavani.net/district/chikkaballapur/not-resigning-subbreddy-clear-649368.html"><strong>ರಾಜೀನಾಮೆ ನೀಡುತ್ತಿಲ್ಲ–ಸುಬ್ಬಾರೆಡ್ಡಿ ಸ್ಪಷ್ಟನೆ; ಪ್ರತಿಕ್ರಿಯೆಗೆ ಸಿಗದ ಸುಧಾಕರ್</strong></a></p>.<p><strong>*<a href="https://www.prajavani.net/district/mandya/police-security-kc-narayana-649366.html">ರಾಜೀನಾಮೆ ಸಲ್ಲಿಸಿದ ಕೆ.ಸಿ.ನಾರಾಯಣಗೌಡ ಮನೆಗೆ ಪೊಲೀಸ್ ಭದ್ರತೆ</a></strong></p>.<p><strong>*<a href="https://www.prajavani.net/stories/stateregional/resignation-12-mlas-speaker-649349.html">ಅತೃಪ್ತರ ಮನವೊಲಿಕೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಾರೆ, ಕಾದು ನೋಡೋಣ: ಸಿದ್ದರಾಮಯ್ಯ</a></strong></p>.<p><strong>*<a href="https://www.prajavani.net/stories/stateregional/karnataka-politics-649334.html">ರಾಜೀನಾಮೆ ಪರ್ವ | ರಾಜಭವನಕ್ಕೆ ತೆರಳಿದ 8 ಮಂದಿ ಶಾಸಕರು</a></strong></p>.<p>*<a href="http://https//www.prajavani.net/stories/stateregional/hd-deve-gowda-siddaramaiah-645942.html"><strong>ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’</strong></a></p>.<p><strong>*<a href="https://www.prajavani.net/columns/gathibimba/mlas-and-politics-648997.html"><em>ಮದ್ದಿಲ್ಲದ ರೋಗ; ಮಧ್ಯಂತರ ರಾಗ</em></a></strong></p>.<p><strong><em>*</em></strong><a href="https://www.prajavani.net/stories/stateregional/political-analysis-devegowda-645773.html"><em><strong>ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್</strong></em></a></p>.<p><strong>*<a href="https://www.prajavani.net/stories/stateregional/siddaramaiah-disappointed-649203.html">ಸಾಕಾಗಿದೆ, ಏನಾದರೂ ಮಾಡಿಕೊಳ್ಳಲಿ: ಸಿದ್ದರಾಮಯ್ಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>