ಬೆಂಗಳೂರು: ಭಾರತದಲ್ಲಿ ಭ್ರಷ್ಟಾಚಾರಕ್ಕೆ ಅಡಿಗಲ್ಲು ಹಾಕಿದ ಕೀರ್ತಿ ಕಾಂಗ್ರೆಸ್ನವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಭಾರತದಲ್ಲಿ ಭ್ರಷ್ಟಾಚಾರದ ಪಿತಾಮಹ ಎಂದು ಎರಡು ದಶಕಗಳ ಹಿಂದೆ ನೀವೇ ಹೇಳಿದ ಮಾತು. ಬಿಜೆಪಿಯ ಅಭಿವೃದ್ದಿ ಕಾರ್ಯಗಳನ್ನು ಕಂಡು ಅಸೂಯೆ ಪಡುವುದನ್ನು ಇನ್ನಾದರು ಬಿಡಿ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಆಗಿರುವ ಮಳೆ ಹಾನಿಯ ಬಗ್ಗೆ ರಾಜಕೀಯ ಮಾಡುವ ಕಾಂಗ್ರೆಸ್ ನಾಯಕರೇ ಈಗೆಲ್ಲಿದ್ದೀರಿ? ಸದನದಲ್ಲಿ ಬೊಬ್ಬೆ ಹಾಕುವ ಸಿದ್ದರಾಮಯ್ಯ ಅವರಿಗೆ ತಮ್ಮದೇ ಪಕ್ಷದ ಶಾಸಕರು, ಮುಖಂಡರು ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸುತ್ತಿರುವುದು ಕಾಣುತ್ತಿಲ್ಲವೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.